Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಲ್ಲಿ ದಾಳಿ ನಡೆಸಿರುವ ಗುಂಪುಗಳಿಗೆ...

ಭಾರತದಲ್ಲಿ ದಾಳಿ ನಡೆಸಿರುವ ಗುಂಪುಗಳಿಗೆ ಪಾಕ್ ನಿರಂತರ ಬೆಂಬಲ: ಅಮೆರಿಕ ರಕ್ಷಣಾ ಪರಿಣತ,

ವಾರ್ತಾಭಾರತಿವಾರ್ತಾಭಾರತಿ4 May 2019 8:59 PM IST
share
ಭಾರತದಲ್ಲಿ ದಾಳಿ ನಡೆಸಿರುವ ಗುಂಪುಗಳಿಗೆ ಪಾಕ್ ನಿರಂತರ ಬೆಂಬಲ: ಅಮೆರಿಕ ರಕ್ಷಣಾ ಪರಿಣತ,

ವಾಶಿಂಗ್ಟನ್, ಮೇ 4: ಭಾರತದಲ್ಲಿ ಭಯಾನಕ ಆಕ್ರಮಣಗಳನ್ನು ನಡೆಸಿರುವ ಭಯೋತ್ಪಾದಕ ಗುಂಪುಗಳಿಗೆ ಬೆಂಬಲ ನೀಡುವುದನ್ನು ಪಾಕಿಸ್ತಾನ ಮುಂದುವರಿಸುತ್ತದೆ, ಯಾಕೆಂದರೆ ಅದು ತನ್ನ ‘ವಿಶ್ವಾಸದ್ರೋಹಕ್ಕೆ ಯಾವುದೇ ಬೆಲೆ ತೆತ್ತಿಲ್ಲ’ ಎಂದು ಅಮೆರಿಕದ ವೈಚಾರಿಕ ಗುಂಪೊಂದರ ಪದಾಧಿಕಾರಿ ಬಿಲ್ ರೊಗಿಯೊ ಅಮೆರಿಕದ ಸಂಸತ್ತು ಕಾಂಗ್ರೆಸ್‌ಗೆ ನೀಡಿದ ವಿವರಣೆಯಲ್ಲಿ ಹೇಳಿದ್ದಾರೆ.

‘‘ಭಯೋತ್ಪಾದನೆಗೆ ಬೆಂಬಲ ನೀಡುವ ದೇಶಗಳ ವಿರುದ್ಧದ ಹೋರಾಟವನ್ನು ನಾವು ಮುಂದುವರಿಸಬೇಕು ಹಾಗೂ ಪಾಕಿಸ್ತಾನದಂಥ ದೇಶಗಳ ವಿಷಯದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು’’ ಎಂದು ಫೌಂಡೇಶನ್ ಫಾರ್ ಡಿಫೆನ್ಸ್ ಆಫ್ ಡೆಮಾಕ್ರಸೀಸ್‌ನ ಸೀನಿಯರ್ ಫೆಲೋ ರೊಗಿಯೊ ನುಡಿದರು.

ತಾಲಿಬಾನ್‌ಗೆ ಪಾಕಿಸ್ತಾನ ನೀಡುತ್ತಿರುವ ನಿರಂತರ ಬೆಂಬಲವನ್ನು ಪ್ರಸ್ತಾಪಿಸಿದ ಅವರು, ಅಫ್ಘಾನಿಸ್ತಾನದಿಂದ ಅಮೆರಿಕದ ಸೈನಿಕರನ್ನು ಹಿಂದಕ್ಕೆ ಪಡೆಯುವ ನಿರ್ಧಾರವನ್ನು ಅನುಮೋದಿಸಲಿಲ್ಲ.

‘‘ತಾಲಿಬಾನ್‌ಗೆ ಪಾಕಿಸ್ತಾನ ನೀಡುತ್ತಿರುವ ಬೆಂಬಲ ಅಚಲವಾಗಿದೆ ಹಾಗೂ ಅಫ್ಘಾನಿಸ್ತಾನದಲ್ಲಿ ನಮ್ಮನ್ನು ಸೋಲಿಸಲು ಅದು ಹೊರಟಿದೆ. ನಾವು ಈಗಾಗಲೇ ಅಫ್ಘಾನಿಸ್ತಾನದಲ್ಲಿ ಸೋತಿದ್ದೇವೆ ಎಂದೇ ನಾನು ಹೇಳುತ್ತೇನೆ. ನಾವು ಈಗ ಅಫ್ಘಾನಿಸ್ತಾನದಿಂದ ಹೊರಬರುವ ವಿಧಿ ವಿಧಾನಗಳ ಕುರಿತ ಸಂಧಾನಕ್ಕಾಗಿ ಮಾತ್ರ ಪ್ರಯತ್ನಿಸುತ್ತಿದ್ದೇವೆ’’ ಎಂದು ಸಂಸತ್ತಿನಲ್ಲಿ ಮಧ್ಯಪ್ರಾಚ್ಯ, ಉತ್ತರ ಆಫ್ರಿಕ ಮತ್ತು ಅಂತರ್‌ರಾಷ್ಟ್ರೀಯ ಭಯೋತ್ಪಾದನೆ ಕುರಿತ ಹೌಸ್ ವಿದೇಶ ವ್ಯವಹಾರಗಳ ಉಪಸಮಿತಿಯ ಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.

‘‘ನಮ್ಮ ಶತ್ರುಗಳು ತಮ್ಮ ಕಾರ್ಯಾಚರಣೆ ನೆಲೆಗಳನ್ನು ವಿಸ್ತರಿಸಿದ್ದಾರೆ ಹಾಗೂ ಯುದ್ಧಕ್ಕೆ ಬದ್ಧರಾಗಿದ್ದಾರೆ. ಹಾಗಾಗಿ ನಮ್ಮ ಮನೋಶಕ್ತಿ ಕುಗ್ಗಿದೆ’’ ಎಂದರು.

‘‘ಇದು ಸುದೀರ್ಘ ಯುದ್ಧ ಹಾಗೂ ಇಲ್ಲಿ ಬದ್ಧತೆ ಮುಖ್ಯ. ಈ ಬೆದರಿಕೆಯನ್ನು ಕೊನೆಗೊಳಿಸಲು ನಾವು ಬಯಸಿದರೆ ನಾವು ನಮ್ಮ ಬದ್ಧತೆಯನ್ನು ನವೀಕರಿಸಬೇಕು ಹಾಗೂ ಒಗ್ಗಟ್ಟನ್ನು ಪ್ರದರ್ಶಿಸಬೇಕು’’ ಎಂದು ರೊಗಿಯೊ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X