Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ರಕ್ಷಿಸಿ ಕಾಡಿಗೆ ಬಿಟ್ಟಿದ್ದ...

ಬಂಟ್ವಾಳ: ರಕ್ಷಿಸಿ ಕಾಡಿಗೆ ಬಿಟ್ಟಿದ್ದ ಕಾಡುಕೋಣದಿಂದ ಬಾಲಕಿ, ಮಹಿಳೆಗೆ ತಿವಿದು ಗಾಯ

ವಾರ್ತಾಭಾರತಿವಾರ್ತಾಭಾರತಿ4 May 2019 9:06 PM IST
share
ಬಂಟ್ವಾಳ: ರಕ್ಷಿಸಿ ಕಾಡಿಗೆ ಬಿಟ್ಟಿದ್ದ ಕಾಡುಕೋಣದಿಂದ ಬಾಲಕಿ, ಮಹಿಳೆಗೆ ತಿವಿದು ಗಾಯ

ಬಂಟ್ವಾಳ, ಮೇ 4: ಗುಂಡಿಯಿಂದ ರಕ್ಷಿಸಿ ಕಾಡಿಗೆ ಬಿಟ್ಟಿದ್ದ ಕಾಡುಕೋಣವೊಂದು ಬಾಲಕಿ ಹಾಗೂ ಮಹಿಳೆಗೆ ತಿವಿದು ಗಾಯಗೊಳಿಸಿದ ಪರಿಣಾಮ ಅವರು ಆಸ್ಪತ್ರೆಗೆ ದಾಖಲಾದ ಘಟನೆ ಕಾಡಬೆಟ್ಟು ಕಂದಾಡಿ ಎಂಬಲ್ಲಿ ಶನಿವಾರ ನಡೆದಿದೆ.

ಇಲ್ಲಿನ ಕಂದಾಡಿ ನಿವಾಸಿ ರಾಮನಾಯ್ಕ ಎಂಬವರ ಪುತ್ರಿ ಹರ್ಷಾ (12), ಬಾಲಕಿಯ ಚಿಕ್ಕಮ್ಮ, ಅಂಗನವಾಡಿ ಶಿಕ್ಷಕಿ ಚಂದ್ರಾವತಿ ಗಾಯಗೊಂಡವರು.

ಇವರಿಬ್ಬರು ಬಂಟ್ವಾಳ ಮಹಾಲಿಂಗೇಶ್ಬರ ದೇವಾಲಯದಿಂದ ಮನೆಯ ಕಡೆಗೆ ವಾಪಸಾಗುವ ಸಂದರ್ಭ ಕಾಡಬೆಟ್ಟುವಿನ ಕಂದಾಡಿ ರಸ್ತೆಯಲ್ಲಿ ಕಾಡುಕೋಣ ಇವರಿಬ್ಬರ ಮೇಲೆ ಎರಗಿ ಗಾಯಗೊಳಿಸಿದೆ. ಪರಿಣಾಮ ಬಾಲಕಿಯ ಕೈಯ ಎಲುಬು ಮುರಿದಿದ್ದು, ಗಾಯಗಳಾಗಿವೆ. ಅದಲ್ಲದೆ, ಮಹಿಳೆಯ ಎದೆಗೆ ಹಾಗೂ ಇನ್ನಿತರ ಭಾಗಗಳಿವೆ ಗಾಯಗಳಾಗಿದ್ದು, ಇವರಿಬ್ಬರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:

ಬಂಟ್ವಾಳ ತಾಲೂಕಿನ ಕಾಡಬೆಟ್ಟು ಗ್ರಾಮದ ಕಾಡಬೆಟ್ಟು ಪೂರ್ಲೊಟ್ಟು ಎಂಬಲ್ಲಿನ ನಿವಾಸಿ ಎಲ್ಪ್ರೆಡ್ ಡಿಸೋಜ ಎಂಬವರ ಮನೆಯ ಗೊಬ್ಬರ ಗ್ಯಾಸ್‍ನ ಗುಂಡಿಗೆ ಕಾಡುಕೋಣವೊಂದು ಬಿದ್ದು, ಮೇಲೆರಲು ಸಾಧ್ಯವಾಗದೇ ಸಿಲುಕಿಕೊಂಡಿತ್ತು. ಇಂದು ಬೆಳಗ್ಗೆ ಮನೆಯವರು ಗೊಬ್ಬರ ಗ್ಯಾಸ್‍ಗೆ ಗೊಬ್ಬರ ಹಾಕಲು ಬಂದ ಸಂದರ್ಭ ಈ ಘಟನೆ ಬೆಳಕಿಗೆ ಬಂದಿದ್ದು, ಬಳಿಕ ಮನೆಮಂದಿ ಬಂಟ್ವಾಳ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. 

ಬಂಟ್ವಾಳ ಉಪವಲಯ ಸಂರಕ್ಷಣಾಧಿಕಾರಿ ಸುರೇಶ್ ಸ್ಥಳಕ್ಕೆ ಭೇಟಿ ನೀಡಿ, ಸಿಬ್ಬಂದಿಯ ಸಹಕಾರದೊಂದಿಗೆ ಕಾಡು ಕೋಣವನ್ನು ಯಶ್ವಿಯಾಗಿ ಮೇಲೆಕೆತ್ತಲಾಯಿತು. ರಾತ್ರಿಯ ವೇಳೆ ಕಾಡಿನಿಂದ ಬಂದಿರುವ ಈ ಕಾಡುಕೋಣ, ಯಾವುದೋ ಪ್ರಾಣಿಯನ್ನು ಅಟ್ಟಿಸಿಕೊಂಡು ಹೋಗುವ ವೇಳೆ ಗೊಬ್ಬರ ಗ್ಯಾಸ್ ಗುಂಡಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. 

ಅರಣ್ಯ ಇಲಾಖೆಯ ಸಿಬ್ಬಂದಿ ವಿನಯ್, ಭಾಸ್ಕರ್, ಸ್ಮಿತಾ, ಅನಿತಾ ಅನಿಲ್ ಹಾಗೂ ಪರಿಸರ ಸ್ನೇಹಿ ಕಿರಣ್ ಪಿಂಟೋ ಮತ್ತು ಗ್ರಾಮಸ್ಥರ ಸ್ಥಳದಲ್ಲಿದ್ದು ಕಾಡು ಕೋಣದ ರಕ್ಷಣೆಯಲ್ಲಿ ಸಹಕರಿಸಿದರು. ವಿಷಯ ತಿಳಿಯುದ್ದಿದಂತೆ ಕಾಡುಕೋಣವನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಕುತೂಹಲಿಗರು ನೆರೆದಿದ್ದರು.

ಗುಂಡಿಗೆ ಬಿದ್ದು ಗಾಯಗೊಂಡಿದ್ದ ಕಾಡುಕೋಣಕ್ಕೆ ವಗ್ಗದ ಪಶುವೈದ್ಯಾಧಿಕಾರಿಯಲ್ಲಿ ಚಿಕಿತ್ಸೆ ನೀಡಿ, ಬಳಿಕ ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿತ್ತು. ಇದಾದ ಬಳಿಕ ಕಾಡಿನಿಂದ ವಾಪಸು ಬಂದ ಕಾಡುಕೋಣವು, ಇದೇ ರಸ್ತೆಯಲ್ಲಿ ಬರುತ್ತಿದ್ದ ಬಾಲಕಿ ಹಾಗೂ ಮಹಿಳೆಗೆ ತಿವಿದು ಗಾಯಗೊಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X