Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಕ್ಕಳ ಕಾಯಿಲೆ ಕುರಿತು ಜಾಗೃತಿ...

ಮಕ್ಕಳ ಕಾಯಿಲೆ ಕುರಿತು ಜಾಗೃತಿ ಅತ್ಯಗತ್ಯ: ಸಚಿವ ಝಮೀರ್ ಆಪ್ತ ಕಾರ್ಯದರ್ಶಿ ಅಶ್ರಫುಲ್ ಹಸನ್

ವಾರ್ತಾಭಾರತಿವಾರ್ತಾಭಾರತಿ4 May 2019 10:19 PM IST
share
ಮಕ್ಕಳ ಕಾಯಿಲೆ ಕುರಿತು ಜಾಗೃತಿ ಅತ್ಯಗತ್ಯ: ಸಚಿವ ಝಮೀರ್ ಆಪ್ತ ಕಾರ್ಯದರ್ಶಿ ಅಶ್ರಫುಲ್ ಹಸನ್

ಬೆಂಗಳೂರು, ಮೇ 4: ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕುಂದುವ (ಇಮ್ಯುನೊ ಡಿಫಿಶಿಯೆನ್ಸಿ-ಪಿಐಡಿಎಸ್) ಕಾಯಿಲೆ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಸಚಿವ ಝಮೀರ್ ಅಹ್ಮದ್‌ಖಾನ್ ಅವರ ಆಪ್ತ ಕಾರ್ಯದರ್ಶಿ ಅಶ್ರಫುಲ್ ಹಸನ್ ಹೇಳಿದರು.

ಶನಿವಾರ ನಗರದ ರಿಚ್ಮಂಡ್ ಟೌನ್‌ನ ಕರ್ನಾಟಕ ಹಾಕಿ ಅಸೋಸಿಯೇಷನ್ ಕ್ಲಬ್ ಸಭಾಂಗಣದಲ್ಲಿ ವಿಶ್ವ ಪ್ರತಿರಕ್ಷಾ (ಇಮ್ಯುನಾಲಾಜಿ) ದಿನದ ಅಂಗವಾಗಿ ಪ್ರೈಮರಿ ಇಮ್ಯುನೊ ಡಿಫಿಶಿಯೆನ್ಸಿ ರೋಗಿಗಳ ಕಲ್ಯಾಣ ಸೊಸೈಟಿ ಆಯೋಜಿಸಿದ್ದ, ಪೋಷಕರಲ್ಲಿ ಮಕ್ಕಳ ಕಾಯಿಲೆಗಳ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಮ್ಯುನೊ ಡಿಫಿಶಿಯೆನ್ಸಿ (ಪಿಐಡಿಎಸ್) ಎಂಬ ಕಾಯಿಲೆಯು ಮಕ್ಕಳಲ್ಲಿ ಕಂಡು ಬರುತ್ತದೆ. ಅಷ್ಟೇ ಅಲ್ಲದೆ, ಇದು ಹುಟ್ಟಿನಿಂದ ಬರುತ್ತದೆ. ಹೀಗಾಗಿ, ಇದರ ಬಗ್ಗೆ ಪೋಷಕರಲ್ಲಿ ಅರಿವು ಅಗತ್ಯವಿದ್ದು, ಈ ಕಾಯಿಲೆಯ ಲಕ್ಷಣಗಳಿರುವ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷವಾದ ಶಿಕ್ಷಣ, ತರಬೇತಿ ಮತ್ತು ಆರೈಕೆ ಮಾಡುವ ವಾತಾವರಣ ನಮ್ಮಲ್ಲಿ ನಿರ್ಮಾಣ ಆಗಬೇಕು ಎಂದು ಅವರು ತಿಳಿಸಿದರು.

ಸರಕಾರಗಳು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಿವೆ. ಇದರ ಜೊತೆಗೆ ಸಂಘ-ಸಂಸ್ಥೆಗಳು ಸಹ ಜನರಲ್ಲಿ ಅರಿವು ಮೂಡಿಸಿದರೆ, ಹಲವು ಕಾಯಿಲೆಗಳನ್ನು ನಮ್ಮ ಪರಿಸರದಿಂದ ಮುಕ್ತ ಮಾಡಬಹುದಾಗಿದೆ ಎಂದು ಅಶ್ರಫುಲ್ ಹಸನ್ ನುಡಿದರು.

ಕೈಕಾ ಫೌಂಡೇಷನ್ ಅಧ್ಯಕ್ಷ ಡಾ.ಎಸ್.ಎಸ್.ಎ.ಖಾದರ್ ಮಾತನಾಡಿ, ವೈದ್ಯಕೀಯ ಸೇವೆ ಎನ್ನುವುದು ಒಂದು ಕಾಲದಲ್ಲಿ ಸೇವೆ ಎಂದೇ ಹೇಳಲಾಗುತಿತ್ತು. ಅಷ್ಟೇ ಅಲ್ಲದೆ, ರೋಗಿಯ ಆರೋಗ್ಯ ಕಾಳಜಿಯೇ ಆ ದಿನಗಳಲ್ಲಿ ಮೊದಲ ಆದ್ಯತೆಯಾಗಿತ್ತು. ಆದರೆ, ಇದೀಗ, ವೈದ್ಯಕೀಯ ಸೇವೆ ಹೆಸರಿನಲ್ಲಿ ಸುಲಿಗೆ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವೈದ್ಯಕೀಯ ವ್ಯವಸ್ಥೆ ಈಗ ಮುಂಚಿನಂತಿಲ್ಲ. ಅದು ಈಗ ಸೇವೆಯಾಗಿ ಉಳಿದಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣವನ್ನು ವಸೂಲಿ ಮಾಡುತ್ತಾರೆ ಎಂದ ಅವರು, ಸರಕಾರಿ ಆಸ್ಪತ್ರೆಗಳಲ್ಲಿ ಹಣ ವಸೂಲಿ ಎನ್ನುವುದು ಇಲ್ಲ. ಆದರೆ, ಸಾರ್ವಜನಿಕರಿಗೆ ಇನ್ನಷ್ಟು ಗುಣಮಟ್ಟದ ಸೇವೆ ಒದುಗಿಸಲು ಈ ಆಸ್ಪತ್ರೆಗಳು ಮುಂದಾಗಲಿ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ, ಪಿಐಡಿಎಸ್ ತಜ್ಞ ಸಾಗರ್ ಭಟ್ ಅವರು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಆಗುವ ಕಾರಣ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸ್ಟ್ರಾಂಡ್ ಲೈಫ್ ಬಯೋಸೈನ್ಸ್ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರೊ.ವಿಜಯ ಚಂದ್ರು, ಪ್ರೈಮರಿ ಇಮ್ಯುನೊ ಡಿಫಿಶಿಯೆನ್ಸಿ ರೋಗಿಗಳ ಕಲ್ಯಾಣ ಸೊಸೈಟಿಯ ಕಾರ್ಯದರ್ಶಿ ಎಂ.ಎಚ್. ರುಕ್ಸಾನಾ, ಸಂಸ್ಥಾಪಕ ಸದಸ್ಯ ಎ.ಬಿ.ಪಾಟೀಲ್, ಸದಸ್ಯ ಎಂ.ಎಚ್ ಹನೀಫ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕುಂದುವ (ಇಮ್ಯುನೊ ಡಿಫಿಶಿಯೆನ್ಸಿ- ಪಿಐಡಿಎಸ್) ಕಾಯಿಲೆ ಲಕ್ಷಣಗಳು ಹೀಗಿವೆ.

* ಒಂದೇ ವರ್ಷದಲ್ಲಿ ಹಲವು ಬಾರಿ ಕಿವಿ ಸೋಂಕು ಕಾಣಿಸಿಕೊಳ್ಳುವುದು

* ಒಂದೇ ವರ್ಷದಲ್ಲಿ ಎರಡಕ್ಕಿಂತ ಅಧಿಕ ಬಾರಿ ನ್ಯುಮೊನಿಯಾ

* ದೇಹದ ಭಾಗಗಳಲ್ಲಿ ಹುಣ್ಣುಗಳು

* ಏಕಾಏಕಿ ತೂಕ ಕಡಿಮೆ

* ದೇಹದ ಎತ್ತರದಲ್ಲಿ ವಿಫಲತೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X