Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಲೀಸ್ ಭದ್ರತೆಯಲ್ಲಿ ಶನಿವಾರವೂ...

ಪೊಲೀಸ್ ಭದ್ರತೆಯಲ್ಲಿ ಶನಿವಾರವೂ ಮುಂದುವರಿದ ಸಿಎಂ ಕುಟುಂಬದ ಯಾಗ

ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ4 May 2019 11:13 PM IST
share
ಪೊಲೀಸ್ ಭದ್ರತೆಯಲ್ಲಿ ಶನಿವಾರವೂ ಮುಂದುವರಿದ ಸಿಎಂ ಕುಟುಂಬದ ಯಾಗ

ಚಿಕ್ಕಮಗಳೂರು, ಮೇ 4: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆರೋಗ್ಯ ವೃದ್ಧಿ ಹಾಗೂ ಸಂಕಷ್ಟ ನಿವಾರಣೆಗಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಹಾಗೂ ದೇವೇಗೌಡ ಅವರು ಕುಟುಂಬ ಸಮೇತರಾಗಿ ಜಿಲ್ಲೆಯ ಕುಡ್ನಳ್ಳಿ ಗ್ರಾಮದ ಉಮಾಮಹೇಶ್ವರಿ ದೇವಾಲಯಕ್ಕೆ ಶುಕ್ರವಾರ ಸಂಜೆ ಆಗಮಿಸಿ ಹೋಮ, ಗಣಪತಿಯಾಗ ನಡೆಸಿದ್ದು, ಶನಿವಾರ ಇಡೀ ದಿನ ನಡೆದ ಪೂರ್ಣಾಹುತಿಯಾಗದಲ್ಲೂ ಪಾಲ್ಗೊಂಡ ಸಿಎಂ ಕುಟುಂಬ ಪೂಜೆ ಬಳಿಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಶುಕ್ರವಾರ ಸಿಎಂ ಕುಮಾರಸ್ವಾಮಿ, ಸಚಿವ ರೇವಣ್ಣ ಹಾಗೂ ಮಾಜಿ ಪ್ರಧಾನಿ ಪೂಜೆಗೆ ಆಗಮಿಸುವ ಹಿನ್ನೆಲೆಯಲ್ಲಿ ಕೊಪ್ಪ ತಾಲೂಕಿನ ಕುಡ್ನಳ್ಳಿ ಉಮಾಮಹೇಶ್ವರಿ ದೇವಾಲಯದ ಸುತ್ತಮುತ್ತ ಬಿಗಿ ಪೊಲೀಸ್ ಸರ್ಪಗಾವಲನ್ನು ನಿಯೋಜಿಸಿ ಸಾರ್ವಜನಿಕರು ದೇವಾಲಯ ಪ್ರವೇಶವನ್ನು ನಿಷೇಧಿಸಿದ್ದ ಜಿಲ್ಲಾ ಪೊಲೀಸ್ ಇಲಾಖೆ ಶನಿವಾರವೂ ಪೂಜೆ ನಡೆಯುವ ಹಿನ್ನೆಲೆಯಲ್ಲಿ ಈ ನಿರ್ಬಂಧವನ್ನು ಮುಂದುವರಿಸಿತ್ತು.

ಕೊಪ್ಪ ಸಮೀಪದ ಸಿಎಂ ಆಪ್ತರ ಮನೆಯಲ್ಲಿ ತಂಗಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ರೇವಣ್ಣ, ದೇವೇಗೌಡ ಹಾಗೂ ಕುಟುಂಬದವರು ಶನಿವಾರ ಬೆಳಗ್ಗೆ ಉಮಾಮಹೇಶ್ವರಿ ದೇವಾಲಯದ ಆವರಣಕ್ಕೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಆಗಮಿಸಿದರು. ದಾರಿ ಮಧ್ಯೆ ಕುಮಾರಸ್ವಾಮಿ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ಸಿಎಂ ಭೇಟಿಗೆ ಮುಂದಾದರಾದರೂ ಪೊಲೀಸರು ಯಾರನ್ನೂ ಸಿಎಂ ಹತ್ತಿರಕ್ಕೆ ಬಿಡಲಿಲ್ಲ. ದೇವಾಲಯದ 200 ಮೀ. ದೂರದವರೆಗೆ ಪೊಲೀಸರು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದ ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಪೊಲೀಸರು ಚದುರಿಸುತ್ತಿದ್ದುದು ಶನಿವಾರ ಬೆಳಗ್ಗೆ ಕಂಡು ಬಂತು. ಇನ್ನು ಸಿಎಂ ಆಗಮನದ ಸುದ್ದಿ ಮಾಡಲು ಸ್ಥಳಕ್ಕೆ ತೆರಳಿದ್ದ ದೃಶ್ಯ ಮಾಧ್ಯಮದವರನ್ನೂ ಪೊಲೀಸರಿಗೂ ಪೊಲೀಸರು ನಿರ್ಬಂಧ ವಿಧಿಸಿದ್ದರು. ಸಿಎಂ ಹೇಳಿಕೆಗಾಗಿ ಶುಕ್ರವಾರದಿಂದ ಕಾಯುತ್ತಿದ್ದ ಮಾಧ್ಯಮದವರ ಕೈಗೆ ಶನಿವಾರ ಸಂಜೆ ವರೆಗೂ ಸಿಎಂ ಕುಟುಂಬದ ಯಾರೊಬ್ಬರೂ ಸಿಗಲಿಲ್ಲ. ಮಾಧ್ಯಮದವರಿಗೆ ವಿಡಿಯೊ, ಪೊಟೊ ತೆಗೆಯಲೂ ಪೊಲೀಸರು ಅಡ್ಡಿ ಪಡಿಸಿದರೆಂದು ತಿಳಿದು ಬಂದಿದ್ದು, ಪೊಲೀಸರ ವಿರುದ್ಧ ಕೆಲ ಜೆಡಿಎಸ್ ಕಾರ್ಯಕರ್ತರು, ಸಾರ್ವಜನಿಕರು ಅಸಮಾದಾನ, ಆಕ್ರೋಶ ವ್ಯಕ್ತಪಡಿಸಿದರು.

ದೇವಾಲಯಕ್ಕೆ ಆಗಮಿಸಿದ ಸಿಎಂ ಕುಟುಂಬದವರು ತುಂಗಾ ನದಿಯಲ್ಲಿ ಸ್ನಾನ ಮಾಡಿ ಬಳಿಕ ಉಮಾಮಹೇಶ್ವರಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ ದೇವಾಲಯದ ಮುಖ್ಯಸ್ಥ ಗಣೇಶ್ ಸೋಮಯಾಜಿ ನೇತೃತ್ವದಲ್ಲಿ ನಡೆದ ಪೂರ್ಣಾಹುತಿಯಾಗದಲ್ಲಿ ಪಾಲ್ಗೊಂಡರು. ಸಿಎಂ ಜತೆಯಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ, ಭೋಜೇಗೌಡ ಹಾಗೂ ಸ್ಥಳೀಯ ಜೆಡಿಎಸ್ ಮುಖಂಡರು ಭಾಗವಹಿಸಿದ್ದರು. ಪೂಜೆಯ ಬಳಿಕ ಸಿಎಂ ಕುಟುಂಬದವರು ಬಿಗಿ ಪೊಲೀಸ್ ಭದ್ರತೆಯಲ್ಲಿ ಚಿಕ್ಕಮಗಳೂರು ಮಾರ್ಗವಾಗಿ ಹಾಸನದತ್ತ ತೆರಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X