Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಫ್ರಿದಿಯ ಚೊಚ್ಚಲ, 37 ಎಸೆತಗಳ ಶತಕದ...

ಅಫ್ರಿದಿಯ ಚೊಚ್ಚಲ, 37 ಎಸೆತಗಳ ಶತಕದ ಹಿಂದಿತ್ತು ಭಾರತದ ಈ ಪ್ರಸಿದ್ಧ ಕ್ರಿಕೆಟಿಗನ ಬ್ಯಾಟ್!

ವಾರ್ತಾಭಾರತಿವಾರ್ತಾಭಾರತಿ5 May 2019 11:30 AM IST
share
ಅಫ್ರಿದಿಯ ಚೊಚ್ಚಲ, 37 ಎಸೆತಗಳ ಶತಕದ ಹಿಂದಿತ್ತು ಭಾರತದ ಈ ಪ್ರಸಿದ್ಧ ಕ್ರಿಕೆಟಿಗನ ಬ್ಯಾಟ್!

ಹೊಸದಿಲ್ಲಿ, ಮೇ 5: ಶ್ರೀಲಂಕಾದ ವಿರುದ್ಧ 1996ರಲ್ಲಿ ಕೇವಲ 37 ಎಸೆತಗಳಲ್ಲಿ ಮಿಂಚಿನ ವೇಗದಲ್ಲಿ ಚೊಚ್ಚಲ ಶತಕ ಸಿಡಿಸಿದ್ದ ಪಾಕ್ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ ನೂತನ ಏಕದಿನ ವಿಶ್ವ ದಾಖಲೆ ನಿರ್ಮಿಸಿದ್ದರು. ಸಚಿನ್ ತೆಂಡುಲ್ಕರ್‌ರ ಬ್ಯಾಟ್‌ನ್ನು ಬಳಸಿಕೊಂಡು ತಾನು ಈ ಸಾಧನೆ ಮಾಡಿದ್ದಾಗಿ ‘ಗೇಮ್ ಚೇಂಜರ್’ ಹೆಸರಿನ ತನ್ನ ಆತ್ಮಚರಿತ್ರೆಯಲ್ಲಿ ಅಫ್ರಿದಿ ಬಹಿರಂಗಪಡಿಸಿದ್ದಾರೆ.

ವಿಶ್ವ ಖ್ಯಾತಿಯ ಕ್ರೀಡಾ ಸಾಧನಗಳ ಉತ್ಪಾದನೆಯ ರಾಜಧಾನಿಯಾಗಿರುವ ಸಿಯಾಲ್‌ಕೋಟ್‌ನಿಂದ ಮತ್ತೊಂದು ಬ್ಯಾಟ್ ಮಾಡಿಕೊಂಡು ಬರುವಂತೆ ಸಚಿನ್ ತನ್ನ ಫೇವರಿಟ್ ಬ್ಯಾಟ್‌ನ್ನು ವಕಾರ್ ಯೂನಿಸ್ ಕೈಯ್ಯಲ್ಲಿ ಕೊಟ್ಟಿದ್ದರು. ವಕಾರ್ ಅವರು ಸಚಿನ್‌ರ ಬ್ಯಾಟನ್ನು ಸಿಯಾಲ್‌ಕೋಟ್‌ಗೆ ತೆಗೆದುಕೊಂಡು ಹೋಗುವ ಮೊದಲು ನಾನು ಬ್ಯಾಟಿಂಗ್‌ಗೆ ತೆರಳುವಾಗ ಅದನ್ನು ನನಗೆ ನೀಡಿದ್ದರು. ನಾನು ಆ ಬ್ಯಾಟ್‌ನಿಂದ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿದ್ದೆ. ನೈರೋಬಿಯಲ್ಲಿ ಸಚಿನ್ ತೆಂಡುಲ್ಕರ್‌ರ ಬ್ಯಾಟ್ ಸಹಾಯದಿಂದಲೇ ತನ್ನ ಮೊದಲ ಶತಕವನ್ನು ಬಾರಿಸಿದ್ದೇನೆ ಎಂದು ಅಫ್ರಿದಿ ಹೇಳಿದ್ದಾರೆ.

ತಾನು ಚೊಚ್ಚಲ ಶತಕ ಗಳಿಸಿದಾಗ ತನ್ನ ವಯಸ್ಸು 16 ಆಗಿರಲಿಲ್ಲ. ಆಗ ತನಗೆ 21 ವಯಸ್ಸಾಗಿತ್ತು. ತನ್ನ ಜನ್ಮದಿನವನ್ನು ತಪ್ಪಾಗಿ ನಮೂದಿಲಾಗಿತ್ತು ಎಂದು ಆತ್ಮಚರಿತ್ರೆಯಲ್ಲಿ ಅಫ್ರಿದಿ ಬಹಿರಂಗಪಡಿಸಿದ್ದರು.

 ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಅಫ್ರಿದಿ ಟ್ವೆಂಟಿ-20 ಶೈಲಿಯಲ್ಲಿ ಆಡಿದ್ದು 40 ಎಸೆತಗಳಲ್ಲಿ 102 ರನ್ ಗಳಿಸಿದ್ದರು. ಇದರಲ್ಲಿ 11 ಸಿಕ್ಸರ್ ಹಾಗೂ ಆರು ಬೌಂಡರಿಗಳಿದ್ದವು. ಆಗ ಅವರು ತನ್ನ 2ನೇ ಏಕದಿನ ಪಂದ್ಯವನ್ನು ಆಡಿದ್ದರು. ಮೊದಲ ಬಾರಿ ಬ್ಯಾಟಿಂಗ್ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X