Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ನಗರಸಭಾ ಸಮುದಾಯ ಸಂಘಟಕ...

ಪುತ್ತೂರು ನಗರಸಭಾ ಸಮುದಾಯ ಸಂಘಟಕ ಉಸ್ಮಾನ್ ಬೊಳುವಾರುಗೆ ವಿದಾಯಕೂಟ

ವಾರ್ತಾಭಾರತಿವಾರ್ತಾಭಾರತಿ6 May 2019 8:32 PM IST
share
ಪುತ್ತೂರು ನಗರಸಭಾ ಸಮುದಾಯ ಸಂಘಟಕ ಉಸ್ಮಾನ್ ಬೊಳುವಾರುಗೆ ವಿದಾಯಕೂಟ

ಪುತ್ತೂರು: ನಗರ ಸಭಾ ಕಚೇರಿಯಲ್ಲಿ ಶಹರಿ ರೋಜ್‍ಗಾರ್ ಯೋಜನೆಯಲ್ಲಿನ ಸಮುದಾಯ ಸಂಘಟಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಉಸ್ಮಾನ್ ಬೊಳುವಾರು ಅವರಿಗೆ ಸ್ವರ್ಣೋದಯ ನಿರಂತರ ಉಳಿತಾಯ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನ ಸಮಾರಂಭವು ಸೋಮವಾರ ನಗರ ಸಭಾ ಸಮುದಾಯ ಭವನದಲ್ಲಿ ನಡೆಯಿತು.

ನಿವೃತ್ತರನ್ನು ಸನ್ಮಾನಿಸಿದ ವಿರಾಜಪೇಟೆ ಪುರಸಭಾ ಮುಖ್ಯಾಧಿಕಾರಿ ಮತ್ತಡಿ ಕಾಯರ್‍ಪಲ್ಕೆ ಮಾತನಾಡಿ, ಸರ್ಕಾರಿ ಸೇವೆ ಮಾಡುವವರಿಗೆ ನಿವೃತ್ತಿ ಎಂಬುದು ಸಾಮಾನ್ಯ. ಆದರೆ ಉಸ್ಮಾನ್ ಅವರು ಕೇವಲ ಸರ್ಕಾರಿ ಸಂಬಳಕ್ಕೆ ಕೆಲಸವನ್ನು ಮೀಸಲಾಗಿರಿಸದೆ ಸರ್ವರ ಸೇವೆಯೆಂದು ಪರಿಗಣಿಸಿದ್ದರು. 

ನೇರ ನಡೆ, ನುಡಿಯ ಮೂಲಕ ಜನರ ಜೊತೆ ಬೆರೆತುಕೊಂಡಿರುವ ಉಸ್ಮಾನ್‍ರವರು ಪ್ರಮಾಣಿಕತೆಯಿಂದ ಸೇವೆ ಸಲ್ಲಿಸಿರುತ್ತಾರೆ. ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಅರ್ಹರಾದ ಕಡು ಬಡವರಿಗೆ ತಲುಪಿಸುವಲ್ಲಿ ಉಸ್ಮಾನ್ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಉಸ್ಮಾನ್‍ರವರಂತಹ ಪ್ರಾಮಾಣಿಕ ಅಧಿಕಾರಿಗಳು ಕರ್ನಾಟಕದಲ್ಲಿ ದೊರೆಯಲು ಸಾಧ್ಯವಿಲ್ಲ ಎಂದರು.

ಪತ್ರಕರ್ತ ಸಂಶುದ್ದೀನ್ ಸಂಪ್ಯ ಮಾತನಾಡಿ ಇಲಾಖೆಗಳಿಗೆ ಬಹಳಷ್ಟು ಮಂದಿ ಅಧಿಕಾರಿಗಳು ಬಂದು ಹೋಗುತ್ತಾರೆ. ಆದರೆ ಎಲ್ಲರಿಗೂ ಸಾರ್ವಜನಿಕರ ಗೌರವ ಸಿಗುವುದಿಲ್ಲ. ಜನರಿಂದ ಗೌರವಿಸಲ್ಪಡುವ ಉಸ್ಮಾನ್‍ರವರಂತ ಅಧಿಕಾರಿಗಳು ದೊರೆಯುವುದು ಅಪರೂಪವಾಗಿದೆ. ಪರೋಪಕಾರ ಸ್ವಭಾವದರಾಗಿರುವ ಅವರು ಇನ್ನೊಬ್ಬರ ನೋವನ್ನು ಅರ್ಥಮಾಡಿಕೊಳ್ಳುವವರಾಗಿದ್ದರು. ಪ್ರಾಮಾಣಿಕ ಅಧಿಕಾರಿಯಾಗಿ ಜನರ ಸಮಸ್ಯೆಗಳಿಗೆ ಸ್ಪಂಧಿಸುವ ಮುಖಾಂತರ ಮನಸ್ಸು ಕಟ್ಟುವ ಕೆಲಸ ಮಾಡಿದ್ದಾರೆ. ಇಂತಹ ಅಧಿಕಾರಿಗಳು ದೊರೆಯುವುದು ತೀರಾ ಅಪರೂಪ. ಇಂತಹ ಅವಕಾಶ ಎಲ್ಲಾ ಅಧಿಕಾರಿಗಳಿಗೆ ದೊರೆಯುವುದಿಲ್ಲ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಉಸ್ಮಾನ್ ಬೊಳುವಾರು ಮಾತನಾಡಿ, ಕರ್ತವ್ಯದ ಅವಧಿಯಲ್ಲಿ ನಾನು ಬಡವರ ಅಭ್ಯುದಯಕ್ಕಾಗಿ ಸರಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿರುತ್ತೇನೆ. ಸರಕಾರದ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಜನರ ಸೇವೆ ಮಾಡುವಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. 

ಒಕ್ಕೂಟದ ಅಧ್ಯಕ್ಷೆ ಯಮುನಾ ಅಧ್ಯಕ್ಷತೆ ವಹಿಸಿದ್ದರು. ಸಮುದಾಯ ವ್ಯವಹಾರಾಧಿಕಾರಿ ಚಂದ್ರ ಕುಮಾರ್, ಒಕ್ಕೂಟದ ಉಪಾಧ್ಯಕ್ಷೆ ಪುಷ್ಪಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅರುಣಾ ಪ್ರಾರ್ಥಿಸಿದರು. ಭಾಗೀರಥಿ ಸ್ವಾಗತಿಸಿದರು. ಲತಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X