Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 10 ನೇ ತರಗತಿಯ ಸಿಬಿಎಸ್‍ಇ ಫಲಿತಾಂಶ:...

10 ನೇ ತರಗತಿಯ ಸಿಬಿಎಸ್‍ಇ ಫಲಿತಾಂಶ: ಹುಳಿಯಾರಿನ ಯಶಸ್ ರಾಜ್ಯಕ್ಕೆ ಟಾಪರ್

ವಾರ್ತಾಭಾರತಿವಾರ್ತಾಭಾರತಿ6 May 2019 8:50 PM IST
share
10 ನೇ ತರಗತಿಯ ಸಿಬಿಎಸ್‍ಇ ಫಲಿತಾಂಶ: ಹುಳಿಯಾರಿನ ಯಶಸ್ ರಾಜ್ಯಕ್ಕೆ ಟಾಪರ್

ಹುಳಿಯಾರು, ಮೇ 6: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ 10 ನೇ ತರಗತಿ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳ್ಳೆಕಟ್ಟೆಯ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಡಿ.ಯಶಸ್ 500 ಕ್ಕೆ 498 ಅಂಕಗಳನ್ನು ಪಡೆದು ಚೆನ್ನೈ ದಕ್ಷಿಣ ವಲಯ ಹಾಗೂ ರಾಜ್ಯಕ್ಕೆ ಪ್ರಥಮ ಸ್ಥಾನಕ್ಕೆ ಭಾಜನನಾಗಿದ್ದಾನೆ.

ಯಶಸ್ ಹುಳಿಯಾರು ಸಮೀಪದ ಕಾಯಿ ತಿಮ್ಮನಹಳ್ಳಿ ಗ್ರಾಮದ ವಿದ್ಯಾರ್ಥಿಯಾಗಿದ್ದು ಅಪ್ಪಟ ಗ್ರಾಮೀಣ ಪ್ರತಿಭೆಯಾಗಿರುವ ಈತ ಕೇಂದ್ರಕ್ಕೆ 38ನೇ ಯವನಾಗಿ ಹಾಗೂ ರಾಜ್ಯಕ್ಕೆ ಮೊದಲಿಗನಾಗಿ ಉತ್ತೀರ್ಣರಾಗಿದ್ದಾನೆ.

ಕೃಷಿ ಕುಟುಂಬದಿಂದ ಬಂದಿರುವ ಯಶಸ್ ಹುಳಿಯಾರು ಸಮೀಪದ ತಿಮ್ಮನಹಳ್ಳಿಯ ದೇವರಾಜು ಹಾಗೂ ನೇತ್ರಾವತಿ ದಂಪತಿಗಳ ಪುತ್ರ. ಒಂದರಿಂದ ನಾಲ್ಕನೇ ತರಗತಿಯವರೆಗೆ ಚಿಕ್ಕನಾಯಕನಹಳ್ಳಿ ರೋಟರಿ ಶಾಲೆಯಲ್ಲಿ ಓದಿರುವ ಯಶಸ್ 5 ನೇ ತರಗತಿಯಿಂದ 10 ತರಗತಿಯವರಿಗೆ ಹುಳಿಯಾರಿನ ವಿದ್ಯಾವಾರಿಧಿ ಶಾಲೆಯಲ್ಲಿ ಓದಿ ಶಾಲೆಯ ಹೆಮ್ಮೆಯ ವಿದ್ಯಾರ್ಥಿಯಾಗಿದ್ದಾನೆ.

ತಮ್ಮ ಮಗನ ಸಾಧನೆಯ ಬಗ್ಗೆ ಅತೀವ ಸಂತೋಷ ವ್ಯಕ್ತಪಡಿಸಿರುವ ಪೋಷಕರು ತಮ್ಮ ಮಗ ಶೇಕಡ 98 ರವರೆಗೂ ಅಂಕ ತೆಗೆಯಬಹುದು ಎಂದು ನಿರೀಕ್ಷಿಸಿದ್ದರಾದರೂ ರ‌್ಯಾಂಕ್ ನಿರೀಕ್ಷಿಸಿರಲಿಲ್ಲ. ನಮ್ಮ ಮಗ ರಾಜ್ಯಕ್ಕೆ ಪ್ರಥಮನಾಗಿರುವುದು ನಮಗೆ ಅತ್ಯಂತ ಸಂತೋಷವಾಗಿದೆ ಎಂದು ಪತ್ರಿಕೆಗೆ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.

ದೇವರಾಜು ಅವರು ತಿಮ್ಮನಹಳ್ಳಿಯಲ್ಲಿ ಕೃಷಿಕರಾಗಿದ್ದು ತೋಟ, ಜಮೀನು ನಿರ್ವಹಿಸುತ್ತಿದ್ದಾರೆ. ಆದರೆ ಇವರು ಕೂಡ ಮೂಲತಃ ಎಂಜಿನಿಯರಿಂಗ್ ಪದವೀಧರರಾಗಿದ್ದು ಮೈಸೂರಿನಲ್ಲಿ ಓದಿರುವ ಇವರು ಇನ್ಸ್ಟ್ರುಮೆಂಟೇಶನ್ ಟೆಕ್ನಾಲಜಿಯ ಪದವೀಧರರಾಗಿದ್ದಾರೆ. ಕೃಷಿಯಲ್ಲಿ ತಮ್ಮ ಸಾಧನೆಯನ್ನು ಕಾಣಬೇಕೆಂಬ ಹಂಬಲದಿಂದ ತಮ್ಮ ಊರಾದ ತಿಮ್ಮನಹಳ್ಳಿಯಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ತಮ್ಮ ಮಗನ ಬಗ್ಗೆ ಮಾತನಾಡಿದ ತಾಯಿ ನೇತ್ರಾವತಿ, ತಿಮ್ಮನಹಳ್ಳಿಯಿಂದ ಸುಮಾರು 15 ಕಿಲೋಮೀಟರ್ ದೂರದ ಹುಳಿಯಾರಿಗೆ ಶಾಲೆಗೆ ತೆರಳಿ ಮನೆಗೆ ಬರುವಾಗ 5:30 ಆಗಿರುತ್ತಿತ್ತು. ನಂತರ ಒಂದು ಗಂಟೆ ಆಟದಲ್ಲಿ ತೊಡಗಿಕೊಳ್ಳುತ್ತಿದ್ದ ಆತ ನಂತರ ರಾತ್ರಿ 11 ರಿಂದ 12 ಗಂಟೆವರೆಗೂ ಓದುತ್ತಿದ್ದ. ನಿತ್ಯವೂ ಓದಿನಲ್ಲಿ ತೊಡಗಿಕೊಳ್ಳುತ್ತಿದ್ದರಿಂದ ಪರೀಕ್ಷೆಯ ಆತಂಕವಿರಲಿಲ್ಲ. ಅಲ್ಲದೆ ಯಾವುದೇ ಟ್ಯೂಷನ್ ಗೆ ಆತ ಹೋಗಿರಲಿಲ್ಲ, ಸೇರಿಸಲು ಕೂಡ ಇಲ್ಲಿ ಅವಕಾಶವಿರಲಿಲ್ಲ. ಮುಂಚಿನಿಂದಲೂ ಆತ ಶಾಲೆಗೆ ಮೊದಲ ಸ್ಥಾನದಲ್ಲೇ ಇರುತ್ತಿದ್ದ. ಪ್ರತಿಯೊಂದು ಪರೀಕ್ಷೆಯಲ್ಲೂ ನೂರಕ್ಕೆ ನೂರು ಅಂಕ ನಿರೀಕ್ಷಿಸುತ್ತಿದ್ದ.  ಫುಟ್ಬಾಲ್, ಚೆಸ್, ಡ್ಯಾನ್ಸ್ ಹೀಗೆ ಎಲ್ಲದರಲ್ಲೂ ಆಸಕ್ತಿ ಹೊಂದಿದ್ದ ಈತನ ಬಗ್ಗೆ ನಾವು ಉತ್ತಮ ಫಲಿತಾಂಶದ ನಿರೀಕ್ಷೆ ಇಟ್ಟುಕೊಂಡಿದ್ದೆವು ಎಂದರು.

ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಬೇಡ: ಯಶಸ್

ನಾನು ಅಂದಿನ ಪಾಠ ಅಂದೇ ಓದಿ ಮನನ ಮಾಡಿಕೊಳ್ಳುತ್ತಿದ್ದೆ. ಪಾಠ ಮಾಡುವಾಗ ಅರ್ಥವಾಗದನ್ನು ಶಿಕ್ಷಕರಿಂದ ಕೇಳಿ ತಿಳಿದುಕೊಂಡು ಮನೆಗೆ ಹೋಗುತ್ತಿದ್ದೆ. ಶಿಕ್ಷಕರೂ ಕೂಡ ಸಾಮಾನ್ಯವಾಗಿ ಅರ್ಥವಾಗುವಂತೆ ಪಾಠ ಮಾಡುತ್ತಿದ್ದರೂ ಆದರೂ ನನಗೆ ಡೌಟ್ ಬಂದಾಗ ಪುನಃ ಕೇಳಿದರೆ ಕೋಪಿಸಿಕೊಳ್ಳದೆ ತಕ್ಷಣ ಅರ್ಥ ಮಾಡಿಸುತ್ತಿದ್ದರು. ತಂದೆ ತಾಯಿ ಕೂಡ ನಿತ್ಯ ಶಾಲೆಯಲ್ಲಿನ ನನ್ನ ಕಲಿಕೆಯ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಬಿಡುವಿನ ವೇಳೆ ಚೆಸ್ ಆಡುವುದರ ಮೂಲಕ ಮೈಂಡ್ ರಿಲ್ಯಾಕ್ಷ್ ಮಾಡಿಕೊಳ್ಳುತ್ತಿದ್ದೆ. ಹಾಗಾಗಿ ವಿದ್ಯಾರ್ಥಿಗಳು ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಎನ್ನುವಂತೆ ಪರೀಕ್ಷೆಯ ಸಮಯದಲ್ಲಿ ಓದುವುದು ಬಿಟ್ಟು ನಿತ್ಯ ಓದಬೇಕು. ಬಹುಮುಖ್ಯವಾಗಿ ತಂದೆತಾಯಿಯರು ಮಕ್ಕಳ ಕಲಿಕೆಯ ಬಗ್ಗೆ ಆಸಕ್ತಿ ವಹಿಸಬೇಕು. ಆಗ ಶಾಲೆ ಮತ್ತು ಮನೆಯಲ್ಲಿ ಕಲಿಕೆಯ ವಾತಾವರಣ ಸೃಷ್ಠಿಯಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ.

-ಯಶಸ್, ಸಿಬಿಎಸ್‍ಇ ಟಾಪರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X