Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಎಡಪಂಥೀಯ ಒಲವಿನ ‘ಒಡಲಾಳದ ಕಥನಗಳು’

ಎಡಪಂಥೀಯ ಒಲವಿನ ‘ಒಡಲಾಳದ ಕಥನಗಳು’

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ8 May 2019 12:01 AM IST
share
ಎಡಪಂಥೀಯ ಒಲವಿನ ‘ಒಡಲಾಳದ ಕಥನಗಳು’

ಚಳವಳಿಯ ಹಿನ್ನೆಲೆಯಿರುವ ಕೆ. ಮಹಾಂತೇಶ್ ಅವರ ‘ಒಡಲಾಳದ ಕಥನಗಳು’ ಹೋರಾಟದ ಒಡಲಾಳದಿಂದ ಪಡಿ ಮೂಡಿರುವ ಕೃತಿ. ತಮ್ಮ ಚಳವಳಿಯ ಭಾಗವಾಗಿ ವಿವಿಧ ಪತ್ರಿಕೆಗಳಿಗೆ ಬರೆದ ಲೇಖನಗಳನ್ನು ಇಲ್ಲಿ ಒಟ್ಟುಗೂಡಿಸಲಾಗಿದೆ. ಬೇರೆ ಬೇರೆ ವ್ಯಕ್ತಿ, ಘಟನೆಗಳು, ವಿದ್ಯಮಾನಗಳನ್ನು ಒಳಗೊಂಡಿರುವ ಲೇಖನಗಳಾದರೂ ಅವೆಲ್ಲದರ ಜೀವದ್ರವ್ಯ ಒಂದೇ. ಶೋಷಣೆ, ಜಾತೀಯ, ಬಡತನ, ಕಾರ್ಮಿಕರ ಹಕ್ಕುಗಳು ಇವುಗಳು ಬೇರೆ ಬೇರೆ ಲೇಖನಗಳಲ್ಲಿ ಮತ್ತೆ ಮತ್ತೆ ನಮ್ಮನ್ನು ಮುಖಾಮುಖಿಯಾಗುತ್ತವೆ.
 ಲೇಖಕರು ಕೃತಿಯನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿದ್ದಾರೆ. ಮೊದಲ ಭಾಗಕ್ಕೆ ಅರಿವಿನ ಕಥನಗಳು ಎಂದು ಕರೆದಿದ್ದಾರೆ. ಮಹಾಡ್ ಸತ್ಯಾಗ್ರಹ, ಮೀರತ್ ಪಿತೂರಿ, ರಶ್ಯಾ ಕ್ರಾಂತಿ, ತಾಯಿ ಕಾದಂಬರಿ, ಸ್ವಾತಂತ್ರ ಸಂಗ್ರಾಮದ ಕ್ರಾಂತಿಕಾರಿಗಳು, ಚೆಗುವಾರ, ಸಫ್ದರ್ ಹಷ್ಮಿ ಮೊದಲಾದ ವಿಷಯಗಳ ಬಗ್ಗೆ ಇಲ್ಲಿ ಬರೆದಿದ್ದಾರೆ. ಎಡಪಂಥೀಯ ಒಲವಿನಿಂದ ವಿಸ್ತರಿಸಿಕೊಂಡ ಲೇಖನಗಳು ಇವು. ‘ಭಾರತದಲ್ಲಿ ಗೋವುಗಳ ಸಂತತಿ ನಶಿಸುತ್ತಿದೆಯೇ?’ ಮತ್ತು ‘ನೆಹರೂ-ಪಟೇಲ್ ವಾರಸುದಾರಿಕೆಗೆ ಪೈಪೋಟಿ’ ಈ ಎರಡು ಲೇಖನಗಳು ಅಧ್ಯಾಯದಲ್ಲಿ ಬೇರೆಯಾಗಿ ನಿಲ್ಲುತ್ತವೆ. ದೇಶದಲ್ಲಿ ಗೋಮಾತೆ ಎಂದು ಪೂಜಿಸುವ ಹಸು ಆಹಾರಕ್ಕೆ ಬಳಕೆಯಾಗುವುದು ಕಡಿಮೆ, ಬದಲಿಗೆ ಎತ್ತುಗಳನ್ನು ಹೆಚ್ಚು ಬಳಸುತ್ತಾರೆ. ಗೋವುಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎನ್ನುವುದು ಅಪಪ್ರಚಾರ. ಬದಲಿಗೆ ಹಸುಗಳ ಸಂಖ್ಯೆ ಜಾಸ್ತಿಯಾಗಿವೆ ಎನ್ನುವುದನ್ನು ಅವರು ತಮ್ಮ ಲೇಖನದಲ್ಲಿ ಪ್ರತಿಪಾದಿಸುತ್ತಾರೆ. ಇನ್ನೊಂದು ಲೇಖನದಲ್ಲಿ ನೆಹರೂ ಮತ್ತು ಪಟೇಲ್ ಅವರನ್ನು ಮುಂದಿಟ್ಟು ದೇಶದಲ್ಲಿ ನಡೆಯುತ್ತಿರುವ ರಾಜಕಾರಣದ ಕುರಿತಂತೆ ವಿಶ್ಲೇಷಿಸಿದ್ದಾರೆ.
 ಹೋರಾಟದ ಕಥನಗಳು ವಿಭಾಗದಲ್ಲಿ, ಆಂದೋಲ, ಹೋರಾಟ ಇವುಗಳು ಎದುರಿಸುತ್ತಿರುವ ಸವಾಲುಗಳನ್ನು ವಿವರಿಸುವ ಪ್ರಯತ್ನ ಮಾಡಿದ್ದಾರೆ.ಪಶ್ಚಿಮಘಟ್ಟದ ತಲ್ಲಣಗಳು, ಮತ್ತೆ ಜನತೆಯತ್ತ ಸಮುದಾಯ, ಮುನ್ನಾರ್ ಮಲ್ಲಿಗೆ ಉತ್ಕ್ರಾಂತಿ, ಕೇರಳ ಜನರೂಪಿತ ವಿನೂತನ ಯೋಜನೆ ಇತ್ಯಾದಿ ವಿಷಯ ವೈವಿಧ್ಯಗಳನ್ನು ಒಳಗೊಂಡಿವೆ. ಕಾನೂನು ಕಥನದಲ್ಲಿ, ಹೇಗೆ ನ್ಯಾಯಾಲಯದಿಂದ ಕಾರ್ಮಿಕ ವಿರೋಧಿ ತೀರ್ಪುಗಳು ಬರುತ್ತಿವೆ ಎಂದು ಆತಂಕ ಪಡುತ್ತಾರೆ. ಕಾರ್ಮಿಕ ಕಾನೂನು ತಿದ್ದುಪಡಿಯ ದುರಂತ, ಕಟ್ಟಡ ಕಾರ್ಮಿಕರ ಅಳಲುಗಳನ್ನು ಈ ಅಧ್ಯಾಯ ತೆರೆದಿಡುತ್ತದೆ. ಕೊನೆಯ ಅಧ್ಯಾಯ ‘ಮರೆಯಲಾಗದ ಕಥನಗಳು’ ಲೇಖಕರ ವೈಯಕ್ತಿಕ ಅನುಭವ ನೆಲೆಯಲ್ಲಿ ನಿರೂಪಣೆಗೊಂಡಿರುವುದು ಅಸ್ಪಶ್ಯತೆ, ಕ್ರಾಂತಿ, ಹೋರಾಟ ಇವೆಲ್ಲವೂ ಲೇಖಕರ ಬದುಕನ್ನು ಆವರಿಸಿಕೊಂಡ ಬಗೆಯನ್ನು ಅಧ್ಯಾಯ ತೆರೆದಿಡುತ್ತದೆ. ಪ್ರಿಯಾ ಮಾಧ್ಯಮ ಬೆಂಗಳೂರು ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 166. ಮುಖಬೆಲೆ 130. ಆಸಕ್ತರು 22234369 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X