Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ‘ಉಜ್ವಲ’ ಯೋಜನೆಯ ಪ್ರಪ್ರಥಮ ಫಲಾನುಭವಿಗೆ...

‘ಉಜ್ವಲ’ ಯೋಜನೆಯ ಪ್ರಪ್ರಥಮ ಫಲಾನುಭವಿಗೆ ಬೆರಣಿಯೇ ಇಂಧನ!

ಬಿಜೆಪಿಯ ‘ಪ್ರಮುಖ ಸಾಧನೆ’ಯ ವಾಸ್ತವಾಂಶ ಬಿಚ್ಚಿಡುತ್ತಾರೆ ಗುಡ್ಡಿದೇವಿ

ವಾರ್ತಾಭಾರತಿವಾರ್ತಾಭಾರತಿ8 May 2019 1:39 PM IST
share
‘ಉಜ್ವಲ’ ಯೋಜನೆಯ ಪ್ರಪ್ರಥಮ ಫಲಾನುಭವಿಗೆ ಬೆರಣಿಯೇ ಇಂಧನ!

ಗ್ರಾಮೀಣ ಮಹಿಳೆಯರಿಗೆ ನೆರವಾಗುವ ಉದ್ದೇಶದೊಂದಿಗೆ 2016ರಲ್ಲಿ ಪ್ರಧಾನಿ ಮೋದಿ ‘ಉಜ್ವಲ’ ಯೋಜನೆಯನ್ನು ಜಾರಿಗೆ ತಂದಿದ್ದರು. ಗ್ರಾಮೀಣ ಮಹಿಳೆಯರು ಒಲೆಗಳಿಂದ ಮುಕ್ತಿ ಹೊಂದಿ ಅಡುಗೆ ಅನಿಲ ಬಳಸುವಂತಾಗಬೇಕು ಎಂದು ಪ್ರಧಾನಿ ಅಂದು ಹೇಳಿದ್ದರು. ಬಿಜೆಪಿ ಪ್ರಚಾರಗಳಲ್ಲಿ, ಪ್ರಧಾನಿ ಮೋದಿಯವರ ಚುನಾವಣಾ ರ್ಯಾಲಿಗಳಲ್ಲಿ ‘ಉಜ್ವಲ’ ಯೋಜನೆಯ ‘ಸಾಧನೆ’ಯ ಬಗ್ಗೆ ಹೇಳಿಕೊಳ್ಳಲಾಗುತ್ತದೆ. ಆದರೆ ಯೋಜನೆಯ ಪ್ರಪ್ರಥಮ ಫಲಾನುಭವಿಯಾದ ಗುಡ್ಡಿದೇವಿಯವರು ಹೇಳುವ ಕಥೆ ಬೇರೆಯದೇ ರೀತಿಯಿದೆ ಎಂದು bbc.com ವರದಿ ಮಾಡಿದೆ.

2016ರಲ್ಲಿ ಜಾರಿಗೆ ಬಂದ ಈ ಯೋಜನೆಯ ಪ್ರಪ್ರಥಮ ಫಲಾನುಭವಿಯಾಗಿದ್ದರು ಗುಡ್ಡಿದೇವಿ. ಸ್ವತಃ ಪ್ರಧಾನಿ ಮೋದಿಯವರೇ ಗುಡ್ಡಿದೇವಿಯವರಿಗೆ ಸೌಲಭ್ಯವನ್ನು ಹಸ್ತಾಂತರಿಸಿದ್ದರು. ಆದರೆ ಇಂದು ಗುಡ್ಡಿದೇವಿಯವರು ಮನೆಯ ಒಲೆ ಉರಿಸುವುದಕ್ಕಾಗಿ ಬೆರಣಿಯನ್ನೇ ಅವಲಂಬಿಸಿದ್ದಾರೆ.

“ಇದು ಬಹಳ ತ್ರಾಸದಾಯಕ ಕೆಲಸ. ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ” ಎಂದು ಗುಡ್ಡಿ ದೇವಿ ಹೇಳುತ್ತಾರೆ. ಉಜ್ವಲ ಯೋಜನೆಯ ಫಲಾನುಭವಿಗಳು ವರ್ಷಕ್ಕೆ 12 ಸಬ್ಸಿಡಿಯುಕ್ತ ಸಿಲಿಂಡರ್ ಗಳನ್ನು ಪಡೆಯುತ್ತಾರೆ. ಆದರೆ ಗುಡ್ಡಿದೇವಿಯವರಿಗೆ 3 ವರ್ಷಗಳಲ್ಲಿ 11 ಸಿಲಿಂಡರ್ ಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.

“ಸಿಲಿಂಡರ್ ಕೊಳ್ಳಲು ಹಣಕ್ಕಾಗಿ ನಾನು ಎಲ್ಲಿಗೆ ಹೋಗಲಿ?, ಮೊದಲು ಗ್ಯಾಸ್ ಸಂಪರ್ಕವಿದ್ದಾಗ ಒಂದು ಸಿಲಿಂಡರ್ ಗೆ 520 ರೂ. ಇತ್ತು. ಈಗ 770 ರೂ. ಆಗಿದೆ” ಎನ್ನುತ್ತಾರೆ ಗುಡ್ಡಿ ದೇವಿ.

“ಉಜ್ವಲ ಯೋಜನೆಯ ಶೇ.30ರಷ್ಟು ಫಲಾನುಭವಿಗಳು ಮಾತ್ರ ರಿಫಿಲ್ ಗಾಗಿ ಆಗಮಿಸುತ್ತಾರೆ” ಎಂದು ಗ್ಯಾಸ್ ಏಜೆನ್ಸಿ ಮಾಲಕ ಅಖಿಲೇಶ್ ಗುಪ್ತಾ ಹೇಳುತ್ತಾರೆ.

ಬಿಜೆಪಿ ತನ್ನ ಜಾಹೀರಾತುಗಳಲ್ಲಿ, ಪ್ರಚಾರಗಳಲ್ಲಿ ಗುಡ್ಡಿದೇವಿಯವರ ಫೋಟೊಗಳನ್ನು ಬಳಸಿ, ಪ್ರಧಾನಿ ಮೋದಿ ಜಾರಿಗೆ ತಂದ ಉಜ್ವಲ ಯೋಜನೆ ಫಲಾನುಭವಿ ಎಂದು ಪ್ರಚಾರ ಮಾಡುತ್ತಿದೆ. ಆದರೆ ಗುಡ್ಡಿ ದೇವಿಯವರು ಮಾತ್ರ ಬೇರೆಯದೇ ಕಥೆ ಹೇಳುತ್ತಾರೆ.

ಕೃಪೆ: www.bbc.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X