Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಸ್ರೇಲಿ ವಾಯುಪಡೆಗಳ ವಿರುದ್ಧ...

ಇಸ್ರೇಲಿ ವಾಯುಪಡೆಗಳ ವಿರುದ್ಧ ಗಾಝಾದೊಂದಿಗೆ ಐಕಮತ್ಯ: ಇ. ಅಬೂಬಕರ್‌‌‌‍‍‍

ವಾರ್ತಾಭಾರತಿವಾರ್ತಾಭಾರತಿ8 May 2019 3:09 PM IST
share
ಇಸ್ರೇಲಿ ವಾಯುಪಡೆಗಳ ವಿರುದ್ಧ ಗಾಝಾದೊಂದಿಗೆ ಐಕಮತ್ಯ: ಇ. ಅಬೂಬಕರ್‌‌‌‍‍‍

ಮಂಗಳೂರು: ಇಸ್ರೇಲಿ ವಾಯುಪಡೆಗಳ ವಿರುದ್ಧ ಗಾಝಾ ಸಂತ್ರಸ್ತರೊಂದಿಗೆ ತಮ್ಮ ಐಕಮತ್ಯವನ್ನು ವ್ಯಕ್ತಪಡಿಸಿರುವುದಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಇ.ಅಬೂಬಕರ್‌‌‌‍‍‍ ತಿಳಿಸಿದ್ದಾರೆ.

ಇಸ್ರೇಲ್ ಪ್ರಾರಂಭಿಸಿದ ಮತ್ತೊಂದು ವಾಯುದಾಳಿಯು ಗರ್ಭಿಣಿ ಮತ್ತು ಅವರ ಹದಿನಾಲ್ಕು ತಿಂಗಳು ವಯಸ್ಸಿನ ಸೋದರ ಮಗಳು ಸೇರಿದಂತೆ ಹಲವು ನಾಗರಿಕರನ್ನು ಕೊಂದು ಹಾಕಿದೆ ಮತ್ತು ಅನೇಕರನ್ನು ಗಾಯಗೊಳಿಸಿರುವುದು ತೀವ್ರ ದುಃಖಕರವಾಗಿದೆ ಮತ್ತು ಅತಿಕ್ರಮಣವಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಶ್ವದ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಗಾಝಾದ ಜನರ ಮೇಲೆ ಇಸ್ರೇಲ್ ಪಡೆ ನಿರಂತರವಾಗಿ ನಡೆಸುತ್ತಿರುವ ದಾಳಿಗಳು ಮತ್ತು ದಿಗ್ಭಂಧನವು ಗಾಝಾದ ಜನರ ಸಾಮೂಹಿಕ ನರಮೇಧದ ಭಾಗವಾಗಿದೆ. 2006ರಿಂದ ಆರಂಭವಾದ ಇಸ್ರೇಲ್ ಆಕ್ರಮಣಗಳು ಸಾವಿರಾರು ಜೀವಗಳನ್ನು ಬಲಿ ತೆಗೆದುಕೊಂಡು ಹಲವು ಸಾವಿರ ಜನರನ್ನು ಶಾಶ್ವತವಾಗಿ ಅಂಗವಿಕಲರನ್ನಾಗಿ ಮಾಡಿದ್ದನ್ನು ಜಗತ್ತು ವೀಕ್ಷಿಸುತ್ತಿದೆ. 2006ರಲ್ಲಿ ಆಹಾರ, ಔಷಧ ಮತ್ತು ಇಂಧನ ಮುಂತಾದ ಮೂಲಭೂತ ಅವಶ್ಯಕತೆಗಳ ಒಳಹರಿವನ್ನು ತಡೆಯುವ ಮೂಲಕ ಇಸ್ರೇಲ್ ಹೇರಿದ ಮಾರಣಾಂತಿಕ ಮತ್ತು ಅಮಾನವೀಯ ದಿಗ್ಭಂಧನ  ಗಾಝಾದ ಜನರನ್ನು ಈಗಾಗಲೇ ಕುತ್ತಿಗೆ ಹಿಸುಕಿದಂತೆ ಮಾಡಿದ್ದನ್ನು ಗಮನಿಸಬೇಕು. ಈ ದಿಗ್ಭಂಧನದಿಂದಾಗಿ ಈ ಪ್ರದೇಶವು ಅಕ್ಷರಶಃ ವಿಶ್ವದ ಅತ್ಯಂತ ದೊಡ್ಡ ಮುಕ್ತ ಜೈಲಾಗಿ ಮಾರ್ಪಟ್ಟಿದೆ ಎಂದು ಇ. ಅಬೂಬಕ್ಕರ್ ಆತಂಕ ವ್ಯಕ್ತಪಡಿಸಿದ್ದಾರೆ. 

ಈಜಿಪ್ಟಿನ ದಲ್ಲಾಳಿ ಕದನ ವಿರಾಮ ಒಪ್ಪಂದವು ಇಸ್ರೇಲ್ ಮತ್ತು ಫೆಲೆಸ್ತೀನಿಯನ್ ಬಣಗಳ ನಡುವೆ ತಲುಪಿದ್ದರೂ, ಪರಿಸ್ಥಿತಿ ಮಾತ್ರ ಇನ್ನೂ ಅನಿಶ್ಚಿತ ವಾಗಿಯೇ ಉಳಿದಿದೆ. ಆದಾಗ್ಯೂ, ಕೇವಲ ಕದನ ವಿರಾಮದಿಂದ ಗಾಝಾದ ಜನರಿಗೆ ಪರಿಹಾರ ಸಿಗಲು‌ ಸಾಧ್ಯವಿಲ್ಲ. ಅವರ ಮೇಲೆ‌ ಹೇರಿರುವ ದಿಗ್ಭಂಧನ ಮತ್ತು ಈಗ ನಡೆಯುತ್ತಿರುವ ಅಕ್ರಮ ನೆಲೆಗಳಿಗೆ ಅಂತ್ಯ ಹಾಡುವ ಮೂಲಕವೇ ಈ ಸಮಸ್ಯೆಗೆ‌  ಶಾಶ್ವತವಾದ ಪರಿಹಾರ ಕಾಣಲು ಸಾಧ್ಯವಾಗುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಗಾಝಾ ಮೇಲಿನ ದಿಗ್ಭಂಧನವನ್ನು ಹಿಂಪಡೆಯಲು, ತುರ್ತು ಕ್ರಮಗಳನ್ನು ತೆಗೆದುಕೊಳ್ಳಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮತ್ತು ವಿಶ್ವ ನಾಯಕರಲ್ಲಿ ಪಾಪ್ಯುಲರ್ ಫ್ರಂಟ್ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X