Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಗಡಿಯಾರ ವ್ಯಾಪಾರಿಯನ್ನು...

ಬೆಂಗಳೂರು: ಗಡಿಯಾರ ವ್ಯಾಪಾರಿಯನ್ನು ‘ಉಗ್ರ’ನೆಂದು ಬಿಂಬಿಸಿದ ಟಿವಿ ಚಾನೆಲ್‌ಗಳು!

'ಮೆಟ್ರೋ ನಿಲ್ದಾಣದಲ್ಲಿ ಭಯೋತ್ಪಾದಕರು' ಎಂದು ಭೀತಿ ಹರಡಿದ ಮಾಧ್ಯಮಗಳು

ವಾರ್ತಾಭಾರತಿವಾರ್ತಾಭಾರತಿ8 May 2019 9:25 PM IST
share
ಬೆಂಗಳೂರು: ಗಡಿಯಾರ ವ್ಯಾಪಾರಿಯನ್ನು ‘ಉಗ್ರ’ನೆಂದು ಬಿಂಬಿಸಿದ ಟಿವಿ ಚಾನೆಲ್‌ಗಳು!

#ಸಂತ್ರಸ್ತನಿಂದ ಪಬ್ಲಿಕ್ ಟಿವಿ ವಿರುದ್ಧ ದೂರು

ಬೆಂಗಳೂರು, ಮೇ 8: ಅಮಾಯಕ ಗಡಿಯಾರ ವ್ಯಾಪಾರಿಯೊಬ್ಬರನ್ನು ‘ಉಗ್ರ’ನೆಂದು ಬಿಂಬಿಸಿ ಕೆಲ ಸುದ್ದಿ ಚಾನೆಲ್ ಗಳು ಸುಳ್ಳು ವದಂತಿಗಳನ್ನು ಪ್ರಸಾರ ಮಾಡಿರುವುದು ಇದೀಗ ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ಎರಡು ದಿನಗಳ ಹಿಂದೆ ರಾಜಧಾನಿ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ಹೀಗೆ ಕಾಣಿಸಿಕೊಂಡ ವ್ಯಕ್ತಿಯನ್ನು ‘ಶಂಕಿತ ಉಗ್ರ’ ಎಂದು ಕರೆದು ಟಿವಿ ಚಾನೆಲ್‌ ಗಳು ವ್ಯಾಪಕ ವದಂತಿಗಳನ್ನು ಹರಡಿ ನಗರದಲ್ಲಿ ಆತಂಕ ಸೃಷ್ಟಿಸಿದ್ದವು. ಆದರೆ ಇದೀಗ ಆ ವ್ಯಕ್ತಿ 57 ವರ್ಷ ಪ್ರಾಯದ ಗಡಿಯಾರ ವ್ಯಾಪಾರಿ ರಿಯಾಝ್ ಅಹ್ಮದ್ ಎನ್ನುವುದು ಬೆಳಕಿಗೆ ಬಂದಿದೆ. ಇವರು 20 ವರ್ಷಗಳಿಂದ ಬೆಂಗಳೂರಿನಲ್ಲಿ ಕೈಗಡಿಯಾರ ವ್ಯಾಪಾರ ಮಾಡುತ್ತಿದ್ದಾರೆ.

ಈ ಕುರಿತಂತೆ ಬಿಬಿಎಂಪಿ ನೀಡಿದ ಪ್ರಮಾಣ ಪತ್ರವೂ ರಿಯಾಝ್ ಅಹ್ಮದ್ ಅವರ ಬಳಿಯಿದೆ. ಈ ಕುರಿತು ‘ವಾರ್ತಾ ಭಾರತಿ’ ಪತ್ರಿಕೆಯೊಂದಿಗೆ ಮಾತನಾಡಿದ ರಿಯಾಝ್ ಅಹ್ಮದ್, ತಾನು ಬೆಂಗಳೂರಿನ ಮೆಜೆಸ್ಟಿಕ್ ವ್ಯಾಪ್ತಿಯ ಬಿಎಂಟಿಸಿ ಸುರಂಗ ಮಾರ್ಗದ ಬದಿಯಲ್ಲಿ ಕೈಗಡಿಯಾರ ಮಾರಾಟ ಮತ್ತು ರಿಪೇರಿ ಮಾಡುವ ಸಣ್ಣದೊಂದು ಅಂಗಡಿಯನ್ನು ಇಟ್ಟುಕೊಂಡು, ಬರೋಬ್ಬರಿ 20 ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

“ಮೇ 7ರ ಮಂಗಳವಾರದಂದು ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸು ತೆರಳಲು ಮೆಜಿಸ್ಟಿಕ್ ನ ಮೆಟ್ರೋ ರೈಲ್ವೆ ನಿಲ್ದಾಣಕ್ಕೆ ಹೋಗಿ, ಅಲ್ಲಿಂದ ಗಂಗೊಂಡನಹಳ್ಳಿಯ ಮನೆಗೆ ತೆರಳಿದೆ. ಆದರೆ, ಮರುದಿನ ಕೆಲ ಸುದ್ದಿವಾಹಿನಿಗಳಲ್ಲಿ ನನಗೆ ಶಂಕಿತ ಉಗ್ರನ ಹಣೆಪಟ್ಟಿ ಹಚ್ಚಿ ಸುದ್ದಿ ಬಿತ್ತರವಾಗುತ್ತಿತ್ತು. ಸಾಮಾಜಿಕ ಜಾಲತಾಣ ಹಾಗೂ ಸುದ್ದಿ ವಾಹಿನಿಯನ್ನು ನೋಡಿದವರು ನನ್ನನ್ನು ದೇಶದ್ರೋಹಿಯಂತೆ ಗುಮಾನಿಯಿಂದ ನೋಡಲಾರಂಭಿಸಿದರು” ಎಂದು ಅವರು ದುಃಖ ತೋಡಿಕೊಂಡರು.

‘‘ನಾನು ಬಡ ವ್ಯಾಪಾರಿ, ಸಾಮಾನ್ಯ ನಾಗರಿಕ, ಇಲ್ಲಿಯವರೆಗೂ ಯಾರಿಗೂ ತೊಂದರೆ ಕೊಟ್ಟಿದ್ದಿಲ್ಲ. ಆದರೆ ಜುಬ್ಬಾ ಧರಿಸಿ ಗಡ್ಡ ಬಿಟ್ಟ ಕಾರಣಕ್ಕೆ ಶಂಕಿತ ಉಗ್ರನ ಪಟ್ಟ ಕಟ್ಟಿದರೆ, ಬೀದಿಗೆ ತಂದು ನಿಲ್ಲಿಸಿದರೆ ಏನು ಮಾಡುವುದು’’ ಎಂದು ಅವರು ಪತ್ರಿಕೆಯೊಂದಿಗೆ ಕಣ್ಣೀರು ಹಾಕಿದರು.

“ಸಾಮಾಜಿಕ ಜಾಲತಾಣಗಳು ಮತ್ತು ಸುದ್ದಿವಾಹಿನಿಗಳ ದೆಸೆಯಿಂದ ಇವತ್ತು ಸಮಾಜದಲ್ಲಿ ನಾನು ಅಪರಾಧಿ ಸ್ಥಾನದಲ್ಲಿ ನಿಂತಿದ್ದೇನೆ. ಇಂತಹ ಸುಳ್ಳು ಸುದ್ದಿಗಳಿಂದ ಸ್ವಾಭಿಮಾನದಿಂದ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ನನಗೆ ನೋವುಂಟಾಗಿದೆ. ಅಷ್ಟೇ ಅಲ್ಲದೆ, ಕುಟುಂಬಸ್ಥರು ಭಯಭೀತರಾಗಿದ್ದಾರೆ. ಕೆಲ ಸಂಘಟನೆಗಳು ಕಾನೂನು ಹೋರಾಟ ನಡೆಸಿ ಎಂದು ಜೊತೆಗೂಡಿದ್ದಾರೆ. ಸಂಘಟಕರೊಂದಿಗೆ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ, ಸಿಸಿ ಟಿವಿ ಫೂಟೇಜ್ ಲೀಕ್ ಮಾಡಿದ ಮೆಟ್ರೋ ಸಿಬ್ಬಂದಿ ವಿರುದ್ಧ ಹಾಗೂ ಸುಳ್ಳು ಸುದ್ದಿ ಪ್ರಸಾರ ಮಾಡಿದ ಕೆಲ ಸುದ್ದಿ ವಾಹಿನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದೇನೆ’’ ಎಂದರು.

ಪಬ್ಲಿಕ್ ಟಿವಿ ವಾಹಿನಿ ವಿರುದ್ಧ ದೂರು

“ಶಂಕಿತ ಉಗ್ರ ಎಂದು ಆರೋಪಿಸಿ ಸುಳ್ಳು ಸುದ್ದಿ ಪ್ರಸಾರ ಮಾಡಿ ನನ್ನ ತೇಜೋವಧೆ ಮಾಡಿದ ಪಬ್ಲಿಕ್ ಟಿವಿ ಸುದ್ದಿ ವಾಹಿನಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ಸುಳ್ಳು ಸುದ್ದಿ ಪ್ರಸಾರದಿಂದ ತಲೆ ಎತ್ತಿಕೊಂಡು ತಿರುಗದಂತಾಗಿದೆ, ಗೌರವಕ್ಕೆ ಧಕ್ಕೆಯಾಗಿದೆ, ನನ್ನ ಕುಟುಂಬಸ್ಥರು ಭಯಭೀತರಾಗಿದ್ದಾರೆ. ಪಬ್ಲಿಕ್ ಟಿವಿ ಸುದ್ದಿ ವಾಹಿನಿಯ ಮುಖ್ಯಸ್ಥರು, ಸತ್ಯ ತಿಳಿಯದೆ, ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಾರೆ, ಈ ಸಂಬಂಧ ಪೊಲೀಸರು ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಮನವಿ ಮಾಡಿಕೊಂಡಿದ್ದೇನೆ.

-ರಿಯಾಝ್ ಅಹ್ಮದ್, ಗಡಿಯಾರ ವ್ಯಾಪಾರಿ

ಅಮಾನತು ಮಾಡಿ

‘ನಮ್ಮ ಮೆಟ್ರೋ’ ಸಿಬ್ಬಂದಿ ವ್ಯಾಪಾರಿ ರಿಯಾಝ್ ಅಹ್ಮದ್ ಓಡಾಟ ನಡೆಸಿರುವ ಸಿಸಿಟಿವಿ ದೃಶ್ಯಗಳನ್ನು ಕಾನೂನು ಬಾಹಿರ ಹಂಚಿಕೆ ಮಾಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ತಪ್ಪಿತಸ್ಥ ಮೆಟ್ರೋ ಸಿಬ್ಬಂದಿಯನ್ನು ಅಮಾನತು ಮಾಡಬೇಕು. ಜೊತೆಗೆ, ಸುಳ್ಳು ಸುದ್ದಿ ಪ್ರಸಾರ ಮಾಡಿದ ವಾಹಿನಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ನಡೆಸಲಾಗುವುದು.

-ಮುಹಮ್ಮದ್ ಸೈಫುಲ್ಲಾ, ಕರ್ನಾಟಕ ರಕ್ಷಣಾ ವೇದಿಕೆ ಕ್ರಾಂತಿ ಸೇನೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X