Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರದಲ್ಲಿ ‘ಯುಪಿಎ ಪ್ಲಸ್’ ಸರಕಾರ...

ಕೇಂದ್ರದಲ್ಲಿ ‘ಯುಪಿಎ ಪ್ಲಸ್’ ಸರಕಾರ ರಚನೆ: ಜ್ಯೋತಿರಾದಿತ್ಯ ಆಶಾವಾದ

ಯಾವುದೇ ಪಕ್ಷಕ್ಕೂ ಬಹುಮತ ಕಷ್ಟ

ವಾರ್ತಾಭಾರತಿವಾರ್ತಾಭಾರತಿ8 May 2019 10:03 PM IST
share
ಕೇಂದ್ರದಲ್ಲಿ ‘ಯುಪಿಎ ಪ್ಲಸ್’ ಸರಕಾರ ರಚನೆ: ಜ್ಯೋತಿರಾದಿತ್ಯ ಆಶಾವಾದ

 ಹೊಸದಿಲ್ಲಿ,ಮೇ 8: 2019ರ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯಲಾರದೆಂದು ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಭವಿಷ್ಯ ನುಡಿದಿದ್ದಾರೆ. ತನ್ನ ಪಕ್ಷವು ಸಮಾನಮನಸ್ಕ ಪಕ್ಷಗಳ ಜೊತೆಗೂಡಿ ಬಲಿಷ್ಠ ಮೈತ್ರಿಕೂಟವನ್ನು ರಚಿಸುವ ಮೂಲಕ ಕೇಂದ್ರದಲ್ಲಿ ‘ಯುಪಿಎ ಪ್ಲಸ್’ ಸರಕಾರವನ್ನು ಸ್ಥಾಪಿಸಲಿದೆಯಂದು ಅವರು ಹೇಳಿದ್ದಾರೆ.

  ಸಮ್ಮಿಶ್ರ ಸರಕಾರಗಳ ದಿನಗಳು ಇದೀಗ ಬಂದಿವೆಯೆಂದು ಮಧ್ಯಪ್ರದೇಶದ ಗುನಾ-ಶಿವಪುರಿ ಕ್ಷೇತ್ರದಿಂದ ಐದನೆ ಬಾರಿಗೆ ಲೋಕಸಭೆಗೆ ಸ್ಪರ್ಧಿಸುತ್ತಿರುವ ಜ್ಯೋತಿರಾದಿತ್ಯ ಹೇಳಿದ್ದಾರೆ. ಏಳು ಹಂತದ ಲೋಕಸಭಾ ಚುನಾವಣೆಯ ಐದನೆ ಹಂತವು ಮುಗಿದ ಬಳಿಕ, ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೇರುವ ಸಾಧ್ಯತೆ ಎಷ್ಟರ ಮಟ್ಟಿಗಿದೆಯೆಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘‘ಪಕ್ಷವು ಗೆಲ್ಲಲಿರುವ ಸೀಟುಗಳ ಪ್ರಮಾಣವನ್ನು ನಾನು ಯಾವತ್ತೂ ಲೆಕ್ಕಹಾಕಿಲ್ಲ. ಆದರೆ ದೇಶದ ಜನತೆಯ ಮನಸ್ಥಿತಿಯು ಹಾಲಿ ಬಿಜೆಪಿ ಆಡಳಿತದ ವಿರುದ್ಧವಾಗಿದೆ’’ಎಂದು ಹೇಳಿದರು.

‘‘ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವು ಯುಪಿಎ ಮೈತ್ರಿಕೂಟ ಸರಕಾರವನ್ನು ರಚಿಸಲಿದೆ ಹಾಗೂ ಸಮ್ಮಿಶ್ರ ಸರಕಾರವಾಗಿ ನಮ್ಮ ಕಾರ್ಯನಿರ್ವಹಣೆಯ ಬಗ್ಗೆ ನನಗೆ ತುಂಬಾ ಆತ್ಮವಿಶ್ವಾಸವಿದೆ’’ ಎಂದು ಜ್ಯೋತಿರಾದಿತ್ಯ ಅಭಿಪ್ರಾಯಿಸಿದರು.

‘‘ಕಳೆದ ಐದು ವರ್ಷಗಳಲ್ಲಿ ನರೇಂದ್ರ ಮೋದಿ ಸರಕಾರದಿಂದ ತಮಗಾದ ಅನ್ಯಾಯಕ್ಕೆ ಸೂಕ್ತ ಉತ್ತರ ನೀಡಲು ಭಾರತದ ಜನತೆಯು ಕಾಯುತ್ತಿದ್ದರೆಂದು ನಾನು ಭಾವಿಸಿದ್ದೇನೆ’’ ಎಂದವರು ಹೇಳಿದರು.

 ಬಿಜೆಪಿ ಅಥವಾ ಕಾಂಗ್ರೆಸ್ ಅಥವಾ ಇನ್ನಾವುದೇ ಪಕ್ಷವಾಗಲಿ, ಈ ಸಲದ ಲೋಕಸಭಾ ಚುನಾವಣೆಯಲ್ಲಿ ನಿಚ್ಚಳ ಬಹುಮತವನ್ನು ಪಡೆಯಲಾರದು ಎಂದು ಜ್ಯೋತಿರಾದಿತ್ಯ ತಿಳಿಸಿದರು.

ದೇಶದಲ್ಲಿ ಕಳೆದ 25-30 ವರ್ಷಗಳಿಂದ ನಡೆದುಕೊಂಡು ಬಂದಿರುವಂತೆ ಈ ಬಾರಿ, ಕೇಂದ್ರದಲ್ಲಿ ಸಮ್ಮಿಶ್ರ ಸರಕಾರವು ಅಧಿಕಾರಕ್ಕೇರಲಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.

ಅಭಿವೃದ್ಧಿಗೆ ಸಂಬಂಧಿಸಿದ ವಿಷಯದಲ್ಲಿ ಬಿಜೆಪಿಗೆ ಹೇಳಿಕೊಳ್ಳಲು ಏನೂ ಇಲ್ಲವಾದ್ದರಿಂದ ಅದು ರಾಷ್ಟ್ರೀಯವಾದಕ್ಕೆ ಸಂಬಂಧಿಸಿದ ವಿಷಯಗಳನ್ನು ಆಲಾಪಿಸುತ್ತಿದೆಯೆಂದು ಅವರು ಹೇಳಿದರು.

 ‘‘ಕಳೆದ ಸಲ ಅವರು ಅಧಿಕಾರದಲ್ಲಿದ್ದಾಗ ಭಾರತ ಪ್ರಕಾಶಿಸುತ್ತಿದೆಯೆಂಬ ಘೋಷಣೆ ಕೂಗಿದರು. ಭಾರತವು ಬಿಜೆಪಿಯ ಪಾಲಿಗೆ ಮಾತ್ರವೇ ಪ್ರಕಾಶಿಸಿತ್ತೇ ಹೊರತು, ದೇಶದ ಉಳಿದ ಜನರಿಗಲ್ಲ’’ ಎಂದು ಜ್ಯೋತಿರಾದಿತ್ಯ ವ್ಯಂಗ್ಯವಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X