Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 33 ರೂ.ಗಾಗಿ 2 ವರ್ಷ ಹೋರಾಟ ನಡೆಸಿದ...

33 ರೂ.ಗಾಗಿ 2 ವರ್ಷ ಹೋರಾಟ ನಡೆಸಿದ ಇಂಜಿನಿಯರ್ !

ವಾರ್ತಾಭಾರತಿವಾರ್ತಾಭಾರತಿ8 May 2019 11:07 PM IST
share
33 ರೂ.ಗಾಗಿ 2 ವರ್ಷ ಹೋರಾಟ ನಡೆಸಿದ ಇಂಜಿನಿಯರ್ !

ಜೈಪುರ, ಮೇ 8: ಜಿಎಸ್‌ಟಿ ಜಾರಿಗೊಳ್ಳುವ ಮೊದಲೇ ತಾನು ಟಿಕೆಟ್‌ನ್ನು ರದ್ದು ಮಾಡಿದ್ದರೂ ಭಾರತೀಯ ರೈಲ್ವೆಯು ಸೇವಾ ತೆರಿಗೆಯಾಗಿ ತನ್ನಿಂದ ಪಡೆದುಕೊಂಡಿದ್ದ 33 ರೂ.ಗಳನ್ನು ವಾಪಸ್ ಪಡೆಯಲು ರಾಜಸ್ಥಾನದ ಕೋಟಾ ನಿವಾಸಿ ಇಂಜಿನಿಯರ್ ಸುಜೀತ್ ಸ್ವಾಮಿ(30) ಯಶಸ್ವಿಯಾಗಿದ್ದಾರೆ. ಇದಕ್ಕಾಗಿ ಅವರು ಎರಡು ವರ್ಷಗಳ ಕಾಲ ಪಟ್ಟು ಬಿಡದೆ ಹೋರಾಡಿದ್ದರು.

ಸ್ವಾಮಿ ಜು.2ರಂದು ಕೋಟಾದಿಂದ ಹೊಸದಿಲ್ಲಿಗೆ ಪ್ರಯಾಣಿಸಲು ಜಿಎಸ್‌ಟಿ ಜಾರಿಗೊಳ್ಳುವ ಮೊದಲೇ 2017,ಎಪ್ರಿಲ್‌ನಲ್ಲಿ 765 ರೂ.ಗಳನ್ನು ತೆತ್ತು ಟಿಕೆಟ್ ಅನ್ನು ಬುಕ್ ಮಾಡಿದ್ದರು. ಆದರೆ ಅವರ ಟಿಕೆಟ್ ವೇಟಿಂಗ್ ಲಿಸ್ಟ್‌ನಲ್ಲಿದ್ದರಿಂದ ಅದನ್ನು ರದ್ದುಗೊಳಿಸಿದ್ದರು ಮತ್ತು ಐಆರ್‌ಸಿಟಿಸಿ ಅವರಿಗೆ 665 ರೂ.ಗಳನ್ನು ವಾಪಸ್ ಮಾಡಿತ್ತು.

ವೇಟಿಂಗ್ ಲಿಸ್ಟ್‌ನ ಟಿಕೆಟ್ ರದ್ದು ಮಾಡಿದ್ದಕ್ಕಾಗಿ 65 ರೂ.ಬದಲಿಗೆ 100 ರೂ.ಗಳನ್ನು ಕಡಿತಗೊಳಿಸಲಾಗಿತ್ತು. ಜಿಎಸ್‌ಟಿ ಜಾರಿಗೊಳ್ಳುವ ಮೊದಲೇ ಸ್ವಾಮಿ ಟಿಕೆಟ್‌ನ್ನು ರದ್ದು ಮಾಡಿದ್ದರೂ 35 ರೂ.ಗಳ ಹೆಚ್ಚುವರಿ ಮೊತ್ತವನ್ನು ಸೇವಾ ತೆರಿಗೆಯನ್ನಾಗಿ ಮುರಿದುಕೊಳ್ಳಲಾಗಿತ್ತು. ಆಗಿನಿಂದಲೂ 35 ರೂ.ಗಳ ಮರುಪಾವತಿಗಾಗಿ ಸ್ವಾಮಿ ಐಆರ್‌ಸಿಟಿಸಿಯ ಬೆನ್ನ ಹಿಂದೆ ಬಿದ್ದಿದ್ದರು ಮತ್ತು ಅವರಿಗೆ ಹಣವನ್ನು ಮರುಪಾವತಿಸುವುದಾಗಿ ಕೇವಲ ಭರವಸೆಗಳನ್ನಷ್ಟೇ ನೀಡಲಾಗುತ್ತಿತ್ತು.

ಸ್ವಾಮಿ ಆರ್‌ಟಿಐ ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ ಉತ್ತರಿಸಿದ್ದ ಐಆರ್‌ಸಿಟಿಸಿ,ರೈಲ್ವೆ ಸಚಿವಾಲಯದ ಸೂಚನೆಯಂತೆ ಜಿಎಸ್‌ಟಿ ಜಾರಿಗೆ ಮುನ್ನ ಬುಕ್ ಮಾಡಿದ ಟಿಕೆಟ್‌ನ್ನು ಜಿಎಸ್‌ಟಿ ಜಾರಿಯ ಬಳಿಕ ರದ್ದುಗೊಳಿಸಿದರೆ ಬುಕ್ ಮಾಡಿದ ಸಂದರ್ಭದಲ್ಲಿ ಪಾವತಿಸಲಾದ ಸೇವಾ ತೆರಿಗೆಯನ್ನು ಮರಳಿಸಲಾಗುವುದಿಲ್ಲ. ಹೀಗಾಗಿ 65 ರೂ.ಶುಲ್ಕದ ಜೊತೆಗೆ 35 ರೂ.ಸೇವಾ ತೆರಿಗೆಯನ್ನು ವಿಧಿಸಲಾಗಿದೆ ಎಂದು ತಿಳಿಸಿತ್ತು.

 ಜಿಎಸ್‌ಟಿ ಜಾರಿಗೆ ಬಂದ 2017,ಜು.1ರ ಮೊದಲು ಬುಕ್ ಮಾಡಿ ರದ್ದು ಮಾಡಿದ ಟಿಕೆಟ್‌ಗಳಿಗೆ ಸೇವಾ ತೆರಿಗೆಯನ್ನು ವಿಧಿಸದಿರಲು ನಂತರ ನಿರ್ಧರಿಸಲಾಗಿದೆ ಎಂದೂ ಉತ್ತರವು ತಿಳಿಸಿತ್ತು.

ಅಂತೂ 2019,ಮೇ 1ರಂದು 33 ರೂ.ಗಳು ಸ್ವಾಮಿಯ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಅವರಿಗೆ ಮರುಪಾವತಿಸಬೇಕಿದ್ದ 35 ರೂ.ಗಳಲ್ಲೂ 2 ರೂ.ಗಳನ್ನು ಐಆರ್‌ಸಿಟಿಸಿ ಕಡಿತಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X