Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಬ್ಬರು ನ್ಯಾಯಾಧೀಶರ ಪದೋನ್ನತಿಗೆ...

ಇಬ್ಬರು ನ್ಯಾಯಾಧೀಶರ ಪದೋನ್ನತಿಗೆ ಕೇಂದ್ರದ ಆಕ್ಷೇಪ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಜ. ಬಿ.ಆರ್. ಗವಾಯಿ, ಜ.ಸೂರ್ಯಕಾಂತ್ ಹೆಸರು ಶಿಫಾರಸು

ವಾರ್ತಾಭಾರತಿವಾರ್ತಾಭಾರತಿ9 May 2019 12:50 PM IST
share
ಇಬ್ಬರು ನ್ಯಾಯಾಧೀಶರ ಪದೋನ್ನತಿಗೆ ಕೇಂದ್ರದ ಆಕ್ಷೇಪ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಮೇ 9:  ಇಬ್ಬರು ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟಿಗೆ ಪದೋನ್ನತಿಗೊಳಿಸುವುದಕ್ಕೆ ಕೇಂದ್ರ ಸಲ್ಲಿಸಿದ ಆಕ್ಷೇಪಗಳನ್ನು ತಿರಸ್ಕರಿಸಿದ ದೇಶದ ಅತ್ಯುನ್ನತ ನ್ಯಾಯಾಲಯ, ಜ್ಯೇಷ್ಠತೆಗಿಂತ  ಅರ್ಹತೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕೆಂದು ಹೇಳಿತು.

ಜಸ್ಟಿಸ್ ಅನಿರುದ್ಧ ಬೋಸ್ ಹಾಗೂ ಜಸ್ಟಿಸ್ ಎ ಎಸ್ ಬೋಪಣ್ಣ ಅವರನ್ನು ಪದೋನ್ನತಿಗೊಳಿಸುವ ಬಗ್ಗೆ ಐದು ಮಂದಿ ಅತ್ಯಂತ ಹಿರಿಯ ನ್ಯಾಯಾಧೀಶರಿರುವ ಸುಪ್ರೀಂ ಕೋರ್ಟಿನ ಕೊಲೀಜಿಯಂ ತನ್ನ ಎಪ್ರಿಲ್ 12ರ ತೀರ್ಮಾನವನ್ನು ಪುನರುಚ್ಛರಿಸಿದೆ.

“ಅರ್ಹತೆಗೆ ಹೆಚ್ಚು ಮಹತ್ವ ನೀಡಬೇಕು, ನ್ಯಾಯಾಧೀಶರ ಸ್ಪರ್ಧಾತ್ಮಕತೆ, ನಡತೆ ಯಾ ಘನತೆಯ ಬಗ್ಗೆ ಯಾವುದೇ ವ್ಯತಿರಿಕ್ತ ಅಭಿಪ್ರಾಯವನ್ನು ಸರಕಾರ ವ್ಯಕ್ತಪಡಿಸಿಲ್ಲ'' ಎಂದು ಸುಪ್ರೀಂ ಕೊರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.

ಅನಿರುದ್ಧ ಬೋಸ್ ಅವರು ಜಾರ್ಖಂಡ್ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿದ್ದರೆ, ಎ ಎಸ್ ಬೋಪಣ್ಣ ಗುವಾಹಟಿ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.

``ಸುಪ್ರೀಂ ಕೋರ್ಟಿನ ನಿಯಮಗಳಂತೆ ಹೈಕೋರ್ಟುಗಳಲ್ಲಿ ನ್ಯಾಯಾಧೀಶರುಗಳ ಜ್ಯೇಷ್ಠತೆ ಹಾಗೂ ಅಖಿಲ ಭಾರತ ಮಟ್ಟದಲ್ಲಿ ಅವರ ಜ್ಯೇಷ್ಠತೆಗೆ ಮಹತ್ವ ನೀಡಬೇಕಾಗಿದೆಯಾದರೂ ಅರ್ಹತೆಗೆ ಅದಕ್ಕಿಂತ ಹೆಚ್ಚು ಮಹತ್ವ ನೀಡಬೇಕಿದೆ ಎಂಬುದು ಕೊಲೀಜಿಯಂ ಅಭಿಪ್ರಾಯವಾಗಿದೆ'' ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೊಲೀಜಿಯಂನಲ್ಲಿ  ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ಜಸ್ಟಿಸ್ ಎಸ್ ಎ ಬೊಬ್ಡೆ, ಜಸ್ಟಿಸ್ ಎನ್ ವಿ ರಮಣ, ಜಸ್ಟಿಸ್ ಅರುಣ್ ಮಿಶ್ರ ಹಾಗೂ ಜಸ್ಟಿಸ್ ಆರ್ ಎಫ್ ನಾರಿಮನ್ ಇದ್ದಾರೆ.

ಜಸ್ಟಿಸ್ ಅನಿರುದ್ಧ ಬೋಸ್ ಹಾಗೂ ಎ ಎಸ್ ಬೋಪಣ್ಣ ಅವರ ನೇಮಕಾತಿಗೆ ಕೇಂದ್ರದ ಆಕ್ಷೇಪದ ಹೊರತಾಗಿಯೂ ಇಂದು ಕೊಲಿಜಿಯಂ ಇನ್ನೆರಡು ನ್ಯಾಯಾಧೀಶರುಗಳಾದ ಜಸ್ಟಿಸ್ ಬಿ ಆರ್ ಗವಾಯಿ ಹಾಗೂ ಸೂರ್ಯ ಕಾಂತ್ ಅವರ ಹೆಸರುಗಳನ್ನು ಶಿಫಾರಸು ಮಾಡಿದೆ. ಜಸ್ಟಿಸ್ ಗವಾಯಿ ಅವರು ಬಾಂಬೆ ಹೈಕೋರ್ಟಿನ ನ್ಯಾಯಾಧೀಶರಾಗಿದ್ದರೆ, ಜಸ್ಟಿಸ್ ಕಾಂತ್ ಅವರು ಹಿಮಾಚಲ ಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.

ಜಸ್ಟಿಸ್ ಗವಾಯಿ ಅವರ ಪದೋನ್ನತಿಯಿಂದಾಗಿ ಸುಪ್ರೀಂ ಕೋಟೀಗೆ ದಶಕದ ನಂತರ ಪರಿಶಿಷ್ಟ ಜಾತಿಗೆ ಸೇರಿದ ನ್ಯಾಯಾಧೀಶರು ದೊರಕಲಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಸುಪ್ರೀಂ ಕೋರ್ಟಿಗೆ ಒಟ್ಟು 31 ನ್ಯಾಯಾಧೀಶರು ಮಂಜೂರಾಗಿದ್ದರೂ ಸದ್ಯ ಅಲ್ಲಿ 27 ಮಂದಿ ಕಾರ್ಯಾಚರಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X