Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರದ ಉಳಿಯುವಿಕೆ ಕುಮಾರಸ್ವಾಮಿಯ...

ಸರಕಾರದ ಉಳಿಯುವಿಕೆ ಕುಮಾರಸ್ವಾಮಿಯ ನಡತೆಯನ್ನು ಅವಲಂಬಿಸಿದೆ: ಎನ್.ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ9 May 2019 10:30 PM IST
share
ಸರಕಾರದ ಉಳಿಯುವಿಕೆ ಕುಮಾರಸ್ವಾಮಿಯ ನಡತೆಯನ್ನು ಅವಲಂಬಿಸಿದೆ: ಎನ್.ಚಲುವರಾಯಸ್ವಾಮಿ

ಮಂಡ್ಯ, ಮೇ 9: ಅಧಿಕಾರದಲ್ಲಿ ಮುಂದುವರಿಯುವುದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಡತೆಯನ್ನು ಅವಲಂಬಿಸಿದೆ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಧ್ಯಂತರ ಚುನಾವಣೆ ಬಗ್ಗೆ ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ ಎಂಬ ವದಂತಿಯಲ್ಲಿ ಹುರುಳಿಲ್ಲ. ಸರಕಾರವನ್ನು ಉಳಿಸಿಕೊಳ್ಳುವುದು, ಕಳೆದುಕೊಳ್ಳುವುದು, ಚುನಾವಣೆ ಘೋಷಣೆ ಮಾಡುವುದು ಕುಮಾರಸ್ವಾಮಿ ಅವರಿಗೆ ಬಿಟ್ಟ ವಿಚಾರ ಎಂದರು.

ನೀವು ಹೀಗೆ ನಡೆದುಕೊಳ್ಳಬೇಕು, ಹಾಗೇ ನಡೆದುಕೊಳ್ಳಬೇಕೆಂದು 37 ಸ್ಥಾನ ಗೆದ್ದು ಸಿಎಂ ಆಗಿರುವ ಕುಮಾರಸ್ವಾಮಿ ಅವರು 80 ಸ್ಥಾನ ಗೆದ್ದಿರುವ ರಾಷ್ಟ್ರೀಯ ಪಕ್ಷದವರಿಗೆ ಸೂಚನೆ ಕೊಡುತ್ತಾರೆ. ಇದು ಅವರ ಧೋರಣೆಯಲ್ಲಿ ಬದಲಾವಣೆ ಆಗದಿರುವುದನ್ನು ತೋರಿಸುತ್ತದೆ. ಯಾವುದೇ ಮೈತ್ರಿ ಸರಕಾರದಲ್ಲಿ ಈ ರೀತಿಯ ನಡವಳಿಕೆ ನಾವು ನೋಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರು ಸಿಎಂ ಆಗಬೇಕು ಎಂದು ಜಾತ್ಯತೀತವಾಗಿ, ಪಕ್ಷಾತೀತವಾಗಿ ಶಾಸಕರು, ಮುಖಂಡರು ಬಯಸಿದ್ದಾರೆ. ಅದು ತಪ್ಪು ಅಂತ ಹೇಳಿದರೆ ಏನು ಹೇಳಬೇಕೆಂದು ಗೊತ್ತಾಗಲ್ಲ. ನಾಳೆ ಬೆಳಗ್ಗೆಯೇ ಕುಮಾರಸ್ವಾಮಿಯನ್ನು ಬದಲಾವಣೆ ಮಾಡಿ ಸಿದ್ದರಾಮಯ್ಯರನ್ನು ಸಿಎಂ ಮಾಡಿ ಎಂದು ಯಾರೂ ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನಾಲ್ಕು ವರ್ಷಕ್ಕೆ ಚುನಾವಣೆಯಾಗಲಿ, ಒಂದು ವರ್ಷಕ್ಕೆ ಆಗಲಿ, ಮುಂದೆ ಸಿದ್ದರಾಮಯ್ಯ ಅವರು ಸಿಎಂ ಆಗಲಿ ಎಂದು ಬಯಸುವುದು ತಪ್ಪೇನು ಎಂದು ಪ್ರಶ್ನಿಸಿದ ಚಲುವರಾಯಸ್ವಾಮಿ, ಸಿದ್ದರಾಮಯ್ಯನವರನ್ನು ಎಲ್ಲಾ ಶೋಷಿತ ವರ್ಗವೂ ಇಷ್ಟ ಪಡುತ್ತೆ ಎಂದು ಸಮರ್ಥಿಸಿಕೊಂಡರು.

ಕಳೆದ ಚುನಾವಣೆಯಲ್ಲಿ  ಲಿಂಗಾಯತ, ಒಕ್ಕಲಿಗ ಸಮುದಾಯದಲ್ಲಿ ಒಂದಷ್ಟು ಅಸಮಾಧಾನ ಇತ್ತು. ಅದು ಅನಗತ್ಯ ಎಂಬುದು ಈಗ ಅವರಿಗೂ ಅರ್ಥವಾಗಿದೆ. ಸಿದ್ದರಾಮಯ್ಯ ಯಾವುದೇ ಜಾತಿ ವಿರೋಧಿಯಲ್ಲ. ಎಲ್ಲಾ ಜಾತಿಗಳ ಬಡವರ ಪರ ಇದ್ದಾರೆ. ಅವರ ಆಡಳಿತ ಅವಶ್ಯಕತೆ ಇದೆ. ಆದರೆ, ಈ ಕ್ಷಣಕ್ಕೆ ಅದು ಅಪ್ರಸ್ತುತ ಎಂದು ಅವರು ವಿಶ್ಲೇಷಿಸಿದರು.

ರಾಜ್ಯ ಸರಕಾರ ನಡೆಸುವುದಕ್ಕೆ ಮತ್ತು ಸಂಸತ್ ಚುನಾವಣೆಗೆ ಮಾತ್ರ ಮೈತ್ರಿ. ಸ್ಥಳೀಯ ಚುನಾವಣೆಯಲ್ಲಿ ಮೈತ್ರಿ ಇಲ್ಲ. ಆರು ತಿಂಗಳ ಹಿಂದೆಯೂ ಫ್ರೆಂಡ್ಲಿ ಫೈಟ್ ಆಗಿತ್ತು. ಅದೆ ರೀತಿ ಈ ಸ್ಥಳೀಯ ಚುನಾವಣೆ ನಡೆಯುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಫಲಿತಾಂಶ ಮತದಾರರಿಗೆ ಬಿಟ್ಟಿದ್ದು:

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮತದಾರರು ಉತ್ತಮ ಫಲಿತಾಂಶ ಕೊಡುತ್ತಾರೆ. ಸ್ವಾಭಿಮಾನ ಉಳಿಸಬೇಕು ಎಂದು ಹಗಲು ರಾತ್ರಿ ಕಷ್ಟಪಟ್ಟು ಹೋರಾಟ ನಡೆಸಿರುವವರು ಮತದಾರರು. ಅದರಲ್ಲಿ ಫಲಿತಾಂಶ ಯಾರ ಪರ ಇದೆ ಅಂತ ಹೇಗೆ ಹೇಳೋದು? ಎಲ್ಲಾ ಆ ಪುಣ್ಯಾತ್ಮರಿಗೇ ಸಲ್ಲಬೇಕು  ಎಂದು ಅವರು ಹೇಳಿದರು.

ಇದರಲ್ಲಿ ಚಲುವರಾಯಸ್ವಾಮಿ ಅಥವಾ ಇನ್ಯಾರದೋ ಪಾತ್ರ ಇದೆ ಎಂದರೆ ನಾವು ದಡ್ಡರು. ಸುಮಲತಾ ಹಿಂದೆ ಯಾರು ನಿಂತಿದ್ದರು ಅನ್ನೋದು ಬೇರೆ ವಿಚಾರ. ಚುನಾವಣೆಯ ಕೀರ್ತಿ ಮತದಾರರಿಗೆ ಸಲ್ಲುತ್ತದೆ. ಮುಂದೆ ಏನಾಗುತ್ತದೆ ಎಂಬುದು ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಅವರು ನುಡಿದರು. ಯಾರು ಯಾರನ್ನೂ ಟಾರ್ಗೆಟ್ ಮಾಡಲು ಸಾಧ್ಯವಿಲ್ಲ. ನಾವೂ ಇದೇ ಜಿಲ್ಲೆಯ ನೀರು ಕುಡಿದು ಬದುಕಿರುವವರು ಎಂದು ಅವರು ಜೆಡಿಎಸ್ ಮುಖಂಡರು ಮಂಡ್ಯ ಕಾಂಗ್ರೆಸ್ ಟಾರ್ಗೆಟ್ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X