Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಬಿಜಿಯಲ್ಲಿ ಜಾತಿಯಾಧಾರಿತ ನೇಮಕಾತಿ...

ಪಿಬಿಜಿಯಲ್ಲಿ ಜಾತಿಯಾಧಾರಿತ ನೇಮಕಾತಿ ‘ಸೂಕ್ಷ್ಮ ವಿಷಯ’ ಎಂಬ ಸರಕಾರದ ಹೇಳಿಕೆಯಿಂದ ದಿಲ್ಲಿ ಹೈಕೋರ್ಟ್ ಗರಂ

ವಾರ್ತಾಭಾರತಿವಾರ್ತಾಭಾರತಿ9 May 2019 10:40 PM IST
share
ಪಿಬಿಜಿಯಲ್ಲಿ ಜಾತಿಯಾಧಾರಿತ ನೇಮಕಾತಿ ‘ಸೂಕ್ಷ್ಮ ವಿಷಯ’ ಎಂಬ ಸರಕಾರದ ಹೇಳಿಕೆಯಿಂದ ದಿಲ್ಲಿ ಹೈಕೋರ್ಟ್ ಗರಂ

ಹೊಸದಿಲ್ಲಿ,ಮೇ 9: ರಾಷ್ಟ್ರಪತಿಗಳ ಅಂಗರಕ್ಷಕ ಪಡೆ (ಪಿಬಿಜಿ)ಗೆ ಜಾತಿಯಾಧಾರಿತ ನೇಮಕವನ್ನು ಸರಕಾರವು ಸಮರ್ಥಿಸಿಕೊಂಡಿದ್ದರ ವಿರುದ್ಧ ದಿಲ್ಲಿ ಉಚ್ಚ ನ್ಯಾಯಾಲಯವು ತೀಕ್ಷ್ಣ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಜಾಟ್ ಸಿಖ್,ಜಾಟ್ ಮತ್ತು ರಜಪೂತ ಜಾತಿಗಳಿಗೆ ಸೇರಿದವರು ಮಾತ್ರ ರಾಷ್ಟ್ರಪತಿಗಳ ಅಂಗರಕ್ಷಕರ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಬಹುದು,ಇತರ ಜಾತಿಗಳ ಪುರುಷರಿಗೆ ನೇಮಕಾತಿಗೆ ಅವಕಾಶವಿಲ್ಲ.

  ಇದೊಂದು ‘ಸೂಕ್ಷ್ಮ ವಿಷಯ’ವಾಗಿದೆ ಎಂದು ಕೇಂದ್ರವು ಬಣ್ಣಿಸಿದಾಗ ಆರು ವಾರಗಳಲ್ಲಿ ತನ್ನ ಅಭಿಪ್ರಾಯಗಳನ್ನು ಪ್ರತಿ ಪ್ರಮಾಣಪತ್ರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಅದಕ್ಕೆ ಸೂಚಿಸಿದ ನ್ಯಾಯಮೂರ್ತಿಗಳಾದ ವಿಪಿನ್ ಸಾಂಘಿ ಮತ್ತು ರೇಖಾ ಪಳ್ಳಿ ಅವರ ಪೀಠವು,ಇಂತಹ ನೇಮಕಾತಿ ನೀತಿಯು ಸಮಾನತೆಯ ಸಾಂವಿಧಾನಿಕ ಖಾತರಿಗೆ ಅನುಗುಣವಾಗಿದೆಯೇ ಎಂಬ ಕುರಿತು ವಿವೇಚನೆಯನ್ನು ಬಳಸದಿರುವುದರಿಂದ ಯಥಾಸ್ಥಿತಿ ಮುಂದುವರಿಯುತ್ತಿರುವದನ್ನು ನಾವು ಆಗಾಗ್ಗೆ ನೋಡುತ್ತಿರುತ್ತೇವೆ ಎಂದು ಹೇಳಿತು.

 1773ರಲ್ಲಿ ಸ್ಥಾಪನೆಯಾದ ಪಿಬಿಜಿ ಭಾರತದ ರಾಷ್ಟ್ರಪತಿಗಳಿಗಾಗಿ ವಿಧ್ಯುಕ್ತ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಭಾರತೀಯ ಸೇನೆಯ ಅತ್ಯಂತ ಹಿರಿಯ ರೆಜಿಮೆಂಟ್ ಆಗಿದೆ. ಪಿಬಿಜಿ ಸಿಬ್ಬಂದಿಗಳು ಅತ್ಯುತ್ತಮ ಅಶ್ವಾರೋಹಿಗಳು, ಸಮರ್ಥ ಟ್ಯಾಂಕ್ ನಿರ್ವಾಹಕರು ಮತ್ತು ಪ್ಯಾರಾಟ್ರೂಪರ್‌ಗಳಾಗಿದ್ದಾರೆ ಎಂದು ರಾಷ್ಟ್ರಪತಿಗಳ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಬಣ್ಣಿಸಲಾಗಿದೆ. ಆದರೆ ಮೂರು ಜಾತಿಗಳಿಗೆ ಸೇರಿದವರು ಮಾತ್ರ ಪಿಬಿಜಿಯಲ್ಲಿ ನೇಮಕಾತಿಗೆ ಅರ್ಜಿಗಳನ್ನು ಸಲ್ಲಿಸಬಹುದು ಎನ್ನುವುದನ್ನು ಅದು ಮುಚ್ಚಿಟ್ಟಿದೆ.

ಸ್ವಾತಂತ್ರಾನಂತರದ ಈ ಎಲ್ಲ ವರ್ಷಗಳಲ್ಲಿ ಈ ತಾರತಮ್ಯದ ಪದ್ಧತಿಯು ಅಧಿಕೃತ ಒಪ್ಪಿಗೆಯನ್ನು ಪಡೆದುಕೊಂಡಿದೆ ಎನ್ನುವುದು ಪ್ರಜಾಪ್ರಭುತ್ವಕ್ಕೇ ಅವಮಾನವಾಗಿದೆ. ಆದರೂ ಸರಕಾರವು ದಿಲ್ಲಿ ಉಚ್ಚ ನ್ಯಾಯಾಲಯದಲ್ಲಿ ಇದೊಂದು ಸೂಕ್ಷ್ಮ ವಿಷಯ ಎಂದು ಹೇಳಿಕೊಂಡಿರುವುದು ಇದನ್ನು ಸಮರ್ಥಿಸಿಕೊಳ್ಳಲು ಅದರ ಬಳಿ ಸೂಕ್ತ ಕಾರಣಗಳಿವೆಯೇ ಎಂಬ ಪ್ರಶ್ನೆಯನ್ನು ಹುಟ್ಟು ಹಾಕಿದೆ.

ಅರ್ಜಿದಾರ ಗೌರವ ಯಾದವ ಅವರು 2017,ಸೆ.4ರಂದು ಪಿಬಿಜಿ ನೇಮಕಾತಿಗಾಗಿ ದಿಲ್ಲಿಯಲ್ಲಿ ನಡೆದಿದ್ದ ಆಯ್ಕೆ ರ್ಯಾಲಿಯಲ್ಲಿ ಭಾಗವಹಿಸಿದ್ದರು. ಆದರೆ ಅವರು ಆಹಿರ್ ಜಾತಿಗೆ ಸೇರಿದ್ದರಿಂದ ಅವರನ್ನು ತಿರಸ್ಕರಿಸಲಾಗಿತ್ತು. ಪಿಬಿಜಿ ನೇಮಕಾತಿಯು ಕೇವಲ ಮೂರು ಜಾತಿಗಳಿಗೆ ಸೀಮಿತವಾಗಿರುವುದು ಸಂವಿಧಾನದ 14,15 ಮತ್ತು 16ನೇ ವಿಧಿಗಳಡಿ ಖಾತರಿ ಪಡಿಸಲಾಗಿರುವ ತನ್ನ ಮೂಲಭೂತ ಹಕ್ಕುಗಳನು ಉಲ್ಲಂಘಿಸಿದೆ ಎಂದು ಅವರು ಅರ್ಜಿಯಲ್ಲಿ ವಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X