Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈತ್ರಿ ಸರಕಾರದ 20ಕ್ಕೂ ಹೆಚ್ಚು 'ಕೈ'...

ಮೈತ್ರಿ ಸರಕಾರದ 20ಕ್ಕೂ ಹೆಚ್ಚು 'ಕೈ' ಶಾಸಕರಿಗೆ ಅತೃಪ್ತಿ: ಬಿ.ಎಸ್.ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ10 May 2019 8:18 PM IST
share
ಮೈತ್ರಿ ಸರಕಾರದ 20ಕ್ಕೂ ಹೆಚ್ಚು ಕೈ ಶಾಸಕರಿಗೆ ಅತೃಪ್ತಿ: ಬಿ.ಎಸ್.ಯಡಿಯೂರಪ್ಪ

ಹುಬ್ಬಳ್ಳಿ, ಮೇ 10: ‘ಮೈತ್ರಿ ಸರಕಾರದ ಬಗ್ಗೆ ಕಾಂಗ್ರೆಸ್ ಪಕ್ಷದ 20ಕ್ಕೂ ಅಧಿಕ ಮಂದಿ ಶಾಸಕರಿಗೆ ಅತೃಪ್ತಿ ಇದ್ದು, ಮೇ 23ರ ಬಳಿಕ ಅವರು ಯಾವುದೇ ನಿರ್ಧಾರವನ್ನಾದರೂ ಕೈಗೊಳ್ಳಬಹುದೆಂದು ಕಾದು ನೋಡಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ 104 ಮಂದಿ ಶಾಸಕರಿದ್ದು, ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದ್ದು, ನಮ್ಮ ಸಂಖ್ಯೆ 106ಕ್ಕೆ ಏರಿಕೆಯಾಗಲಿದೆ. ಮೂವರು ಪಕ್ಷೇತರ ಶಾಸಕರು ಬಿಜೆಪಿ ಬೆಂಬಲಿಸಲಿದ್ದು ಬಿಜೆಪಿ ಸಂಖ್ಯೆ 109ಕ್ಕೆ ಏರಿಕೆಯಾಗಲಿದೆ ಎಂದು ಹೇಳಿದರು.

ಸಿಎಂ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಯಾವುದೇ ಕಾರಣಕ್ಕೂ ಅವಧಿ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದ ಯಡಿಯೂರಪ್ಪ, ಮಂಡ್ಯ, ತುಮಕೂರು ಕ್ಷೇತ್ರಗಳಲ್ಲಿಯೂ ಸೋಲಿನ ಭಯದಿಂದಲೇ ಕುಮಾರಸ್ವಾಮಿ ಮತ್ತು ದೇವೇಗೌಡ ರೆಸಾರ್ಟ್‌ಗೆ ತೆರಳುತ್ತಿದ್ದಾರೆಂದು ಲೇವಡಿ ಮಾಡಿದರು.

ಮೈತ್ರಿ ಸ್ಫೋಟ: ಜೆಡಿಎಸ್‌ಗೆ ಬೆಂಬಲ ನೀಡಿರುವುದು ಕಾಂಗ್ರೆಸ್ ಶಾಸಕರಿಗೆ ಇಷ್ಟವಿಲ್ಲ. ಬಿಎಸ್‌ವೈ ಹೇಳಿದಂತೆ ಇಪ್ಪತ್ತು ಶಾಸಕರಲ್ಲ ಇನ್ನೂ ಹೆಚ್ಚಿನ ಶಾಸಕರಿಗೆ ಅಸಮಾಧಾನವಿದೆ. ಈ ಬೆಂಕಿ ಲಾವಾರಸವಾಗಿದ್ದು ಮೇ 23ರ ಬಳಿಕ ಸ್ಫೋಟ ಆಗುವುದು ನಿಶ್ಚಿತ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಭವಿಷ್ಯ ನುಡಿದರು.

ಮೇ 23ರ ಲೋಕಸಭೆ ಚುನಾವಣಾ ಫಲಿತಾಂಶದ ಬಳಿಕ ಏನು ಬೇಕಾದರೂ ಆಗಬಹುದು. ಮೈತ್ರಿ ಸರಕಾರ ಬಿದ್ದರೆ ನಾವೇನು ಸನ್ಯಾಸಿಗಳಲ್ಲ. ರಾಜಕೀಯ ಮಾಡಲು ನಾವು ಇರುವುದು. ದೇವರ ಮೊರೆ ಹೊಕ್ಕರೆ ಬಂಡಾಯ ತಡೆಗಟ್ಟಲು ಸಾಧ್ಯವಿಲ್ಲ ಎಂದು ಅಶೋಕ್ ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X