Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಶಿಷ್ಟ ನೌಕರರ ಮುಂಭಡ್ತಿ ಮೀಸಲಾತಿ...

ಪರಿಶಿಷ್ಟ ನೌಕರರ ಮುಂಭಡ್ತಿ ಮೀಸಲಾತಿ ಕಾಯ್ದೆ: ಸುಪ್ರೀಂ ತೀರ್ಪಿಗೆ ಸಿಎಂ ಸೇರಿ ಹಲವರ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ10 May 2019 10:21 PM IST
share
ಪರಿಶಿಷ್ಟ ನೌಕರರ ಮುಂಭಡ್ತಿ ಮೀಸಲಾತಿ ಕಾಯ್ದೆ: ಸುಪ್ರೀಂ ತೀರ್ಪಿಗೆ ಸಿಎಂ ಸೇರಿ ಹಲವರ ಸ್ವಾಗತ

ಬೆಂಗಳೂರು, ಮೇ 10: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗ(ಎಸ್ಸಿ-ಎಸ್ಟಿ)ದ ನೌಕರರ ಮುಂಭಡ್ತಿ ಮೀಸಲಾತಿ ಕಲ್ಪಿಸುವ ಸಂಬಂಧ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವರು ಸ್ವಾಗತಿಸಿದ್ದಾರೆ.

ನಮ್ಮ ನಿರ್ಣಯ ಎತ್ತಿಹಿಡಿದಿದೆ: ಹಿಂದುಳಿದವರಿಗೆ ಅನ್ಯಾಯ ಆಗಬಾರದೆಂದು ಪರಿಶಿಷ್ಟ ನೌಕರರಿಗೆ ಭಡ್ತಿಯಲ್ಲಿ ಮೀಸಲಾತಿ ಕಲ್ಪಿಸಿ ಕಾಯ್ದೆ ತರಲಾಗಿತ್ತು. ಅದನ್ನು ಪ್ರಶ್ನಿಸಿ ಪವಿತ್ರಾ ಎಂಬವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಕೋರ್ಟ್ ನಾವು ತೆಗೆದುಕೊಂಡ ನಿರ್ಣಯವನ್ನು ಎತ್ತಿಹಿಡಿದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ವರಿಗೂ ನ್ಯಾಯ ಒದಗಿಸಲು ಕಾಂಗ್ರೆಸ್ ಸರಕಾರ ಕಟಿಬದ್ಧವಾಗಿದೆ. ಇನ್ನು ಬಿಜೆಪಿಗೆ ಶೋಷಿತರು ಕನಸು-ಮನಸಿನಲ್ಲೂ ಮತ ಹಾಕಬಾರದು. ಅವರು ದಲಿತ, ಹಿಂದುಳಿದ ಮತ್ತು ಸಂವಿಧಾನ ವಿರೋಧಿಗಳು ಎಂದು ಸಿದ್ದರಾಮಯ್ಯ ಇದೇ ವೇಳೆ ವಾಗ್ದಾಳಿ ನಡೆಸಿದರು.

ಕಾಯ್ದೆ ಅನುಷ್ಠಾನಕ್ಕೆ ಕ್ರಮ: ಪರಿಶಿಷ್ಟ ನೌಕರರ ಭಡ್ತಿ ಮೀಸಲಾತಿ ಸಂಬಂಧದ ನೂತನ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ. ಈ ಆದೇಶದಿಂದ ಪರಿಶಿಷ್ಟ ನೌಕರರಿಗೆ ನ್ಯಾಯ ಸಿಕ್ಕಿದೆ. ಉಳಿದ ಜನಾಂಗದವರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು. ಹೊಸ ಹುದ್ದೆ ಸೃಷ್ಟಿ, ಇತರರಿಗೆ ಯಾವ ರೀತಿಯಲ್ಲೂ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಪ್ರಮುಖ ಹೆಜ್ಜೆ: ಪರಿಶಿಷ್ಟ ನೌಕರರ ಹಿತ ಕಾಪಾಡಲು ರಾಜ್ಯ ಸರಕಾರ ರೂಪಿಸಿದ್ದ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ಇದು ಶೋಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ನಾವಿಟ್ಟ ಪ್ರಮುಖ ಹೆಜ್ಜೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತೀರ್ಪನ್ನು ಟ್ವಿಟ್ಟರ್ ಮೂಲಕ ಸ್ವಾಗತಿಸಿದ್ದಾರೆ.

‘ಪರಿಶಿಷ್ಟ ನೌಕರರ ಮುಂಭಡ್ತಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮೀಸಲು ಕಾಯ್ದೆಯನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್ ತೀರ್ಪುನ್ನು ಸ್ವಾಗತಿಸುವೆ. ನಮ್ಮ ಸರಕಾರ ಸಂವಿಧಾನಿಕ ಚೌಕಟ್ಟಿನಲ್ಲಿ ಸರಕಾರಿ ನೌಕರರ ಹಿತರಕ್ಷಣೆಗೆ ಬದ್ಧವಾಗಿ ಎಲ್ಲರಿಗೂ ಅವಕಾಶ ಒದಗಿಸುವ ರಾಜ್ಯ ಸರಕಾರದ ಸದುದ್ದೇಶವನ್ನು ಈ ತೀರ್ಪು ಬೆಂಬಲಿಸಿದೆ’

-ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ

ಅನ್ಯಾಯವಾಗಿದೆ, ಪುನರ್‌ಪರಿಶೀಲನಾ ಅರ್ಜಿಗೆ ಸಿದ್ಧತೆ

ಪರಿಶಿಷ್ಟರ ಭಡ್ತಿಯಲ್ಲಿ ಮೀಸಲಾತಿ ಸಂಬಂಧದ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು. ತೀರ್ಪು ತಪ್ಪಿನಿಂದ ಕೂಡಿದೆ ಮತ್ತು ‘ಅಹಿಂಸಾ’ ವರ್ಗಕ್ಕೆ ಅನ್ಯಾಯವಾಗಿದೆ. ಈ ಬಗ್ಗೆ ಸ್ಪಷ್ಟನೆಯನ್ನು ಕೋರಲು ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸುವುದು ಒಕ್ಕೂಟ ತೀರ್ಮಾನಿಸಿದೆ’

-ಎಂ.ನಾಗರಾಜ್ ಅಹಿಂಸಾ ಅಧ್ಯಕ್ಷ

‘ಪರಿಶಿಷ್ಟ ನೌಕರರ ಮುಂಭಡ್ತಿ ಮೀಸಲಾತಿಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹ. ಎಸ್ಸಿ-ಎಸ್ಟಿ ವರ್ಗದ ನೌಕರರ ದಕ್ಷತೆ, ಹಿಂದುಳಿದಿರುವಿಕೆಯನ್ನು ಪ್ರಶ್ನಿಸಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ತೀರ್ಪು ಅದಕ್ಕೆ ಉತ್ತರ ನೀಡಿದ್ದು, ಹಿಂಭಡ್ತಿಗೆ ಗುರಿಯಾಗಿದ್ದ ನೌಕರರಿಗೆ ಕೂಡಲೇ ಈ ಹಿಂದಿನ ಹುದ್ದೆಗಳನ್ನೇ ನೀಡಬೇಕು. ಸಮಾಜದ ಎಲ್ಲ ವರ್ಗಗಳ ಹಿತರಕ್ಷಣೆಯನ್ನು ಸರಕಾರ ಕಾಪಾಡಬೇಕು’

-ಡಾ.ವಿಜಯಕುಮಾರ್ ಪ್ರಧಾನ ಕಾರ್ಯದರ್ಶಿ, ರಾಜ್ಯ ಸರಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X