Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ.ಬಂಗಾಳ: ಬಿಜೆಪಿ ಅಭ್ಯರ್ಥಿಯ...

ಪ.ಬಂಗಾಳ: ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿದ್ದ 1ಲಕ್ಷ ರೂ. ಜಪ್ತಿ

ವಾರ್ತಾಭಾರತಿವಾರ್ತಾಭಾರತಿ10 May 2019 10:42 PM IST
share
ಪ.ಬಂಗಾಳ: ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿದ್ದ 1ಲಕ್ಷ ರೂ. ಜಪ್ತಿ

ಕೋಲ್ಕತಾ, ಮೇ 10: ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಅಧಿಕಾರಿ, ಈಗ ಬಿಜೆಪಿ ಅಭ್ಯರ್ಥಿಯಾಗಿರುವ ಭಾರತಿ ಘೋಷ್ ಅವರ ಕಾರಿನಲ್ಲಿ 1 ಲಕ್ಷ ರೂ.ಗಿಂತಲೂ ಹೆಚ್ಚಿನ ನಗದು ಹಣ ಪತ್ತೆಯಾಗಿದ್ದು, ಅದನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ, ಆರೋಪವನ್ನು ನಿರಾಕರಿಸಿರುವ ಭಾರತಿ ಘೋಷ್, ರಾಜ್ಯದ ಟಿಎಂಸಿ ಸರಕಾರ ತನ್ನ ವಿರುದ್ಧ ನಡೆಸಿರುವ ಷಡ್ಯಂತ್ರ ಇದಾಗಿದೆ ಎಂದು ಆರೋಪಿಸಿದ್ದಾರೆ. ಶುಕ್ರವಾರ ಬೆಳಗ್ಗಿನ ಜಾವ ಸುಮಾರು 2 ಗಂಟೆ ವೇಳೆಗೆ ಪಿಂಗ್ಲ ಎಂಬಲ್ಲಿ ರಸ್ತೆ ಬದಿಯ ಪೊಲೀಸ್ ತಪಾಸಣಾ ಕೇಂದ್ರದಲ್ಲಿ ಭಾರತಿ ಘೋಷ್ ಪ್ರಯಾಣಿಸುತ್ತಿದ್ದ ಕಾರನ್ನು ತಡೆದು ಪರಿಶೀಲನೆ ನಡೆಸಲಾಯಿತು. ಈ ಸಂದರ್ಭ ತಮ್ಮಲ್ಲಿರುವ ಹಣವನ್ನು ಚೀಲವೊಂದಕ್ಕೆ ಹಾಕುವಂತೆ ಕಾರಿನಲ್ಲಿದ್ದವರಿಗೆ ಸೂಚಿಸಲಾಗಿದೆ. ಆಗ ಭಾರತಿ 50 ಸಾವಿರ ರೂ, ಅವರ ಸಹಾಯಕ 50 ಸಾವಿರ ರೂ. ಹಾಗೂ ಕಾರಿನ ಚಾಲಕ 13,895 ರೂ. ಹಾಕಿದ್ದಾನೆ ಎನ್ನಲಾಗಿದೆ.

ಈ ಹಣವನ್ನು ಜಪ್ತಿ ಮಾಡಿಕೊಂಡ ಪೊಲೀಸರು 1,13,895 ರೂ. ಹಣ ಜಪ್ತಿ ಮಾಡಿರುವ ಪತ್ರಕ್ಕೆ ಸಹಿ ಹಾಕುವಂತೆ ಭಾರತಿ ಘೋಷ್‌ಗೆ ತಿಳಿಸಿದಾಗ ಅವರು ನಿರಾಕರಿಸಿದ್ದಾರೆ. ತನ್ನ ಬಳಿ ಇದ್ದ ಹಣಕ್ಕೆ ಮಾತ್ರ ತಾನು ಜವಾಬ್ದಾರಳಾಗಿದ್ದು ಆ ಮೊತ್ತಕ್ಕೆ ಸಹಿ ಹಾಕುತ್ತೇನೆ. ಉಳಿದ ಮೊತ್ತಕ್ಕೆ ಸಹಾಯಕ ಮತ್ತು ಚಾಲಕ ಸಹಿ ಹಾಕಬೇಕು ಎಂದು ವಾದಿಸಿದ್ದಾರೆ. ಬಳಿಕ ಅವರನ್ನು ವಿಚಾರಣೆಗೆಂದು ವಶಕ್ಕೆ ಪಡೆದು ಸುಮಾರು 3 ಗಂಟೆಯ ಬಳಿಕ ತೆರಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಬಂಗಾಳ ಚುನಾವಣಾ ಕಚೇರಿ ಸೂಚಿಸಿದೆ. ಘಾಟಲ್ ಸಂಸದೀಯ ಕ್ಷೇತ್ರದಲ್ಲಿ ಭಾರತಿ ಘೋಷ್ ಬಿಜೆಪಿ ಅಭ್ಯರ್ಥಿಯಾಗಿದ್ದರೆ ಟಿಎಂಸಿಯಿಂದ ಬಂಗಾಳ ಸಿನೆಮಾ ನಟ ದೀಪಕ್ ಅಧಿಕಾರಿ ಕಣಕ್ಕಿಳಿದಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X