Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶೇ.15 ರಷ್ಟು ನೀರಿನ ದರ ಹೆಚ್ಚಳಕ್ಕೆ...

ಶೇ.15 ರಷ್ಟು ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ10 May 2019 10:43 PM IST
share
ಶೇ.15 ರಷ್ಟು ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಸಿದ್ಧತೆ

ಬೆಂಗಳೂರು, ಮೇ 10: ನಗರದಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ನೀರಿಗಾಗಿ ಪರಿತಪಿಸುತ್ತಿರುವ ಸಂದರ್ಭದಲ್ಲಿ ಜಲಮಂಡಳಿಯಿಂದ ಕಾವೇರಿ ನೀರಿನ ದರ ಶೇ.15 ರಷ್ಟು ಏರಿಕೆ ಮಾಡಲು ಸಿದ್ಧತೆ ನಡೆಸಿದೆ.

ಜಲಮಂಡಳಿಯು ಐದು ವರ್ಷಗಳ ಬಳಿಕ ನೀರಿನ ದರವನ್ನು ಪರಿಷ್ಕರಣೆ ಮಾಡಿದ್ದು, ಸದ್ಯದಲ್ಲಿಯೇ ದರಗಳು ಏರಿಕೆಯಾಗಲಿವೆ. ನೀರಿನ ದರ ಏರಿಕೆ ಸಂಬಂಧ ಜಲಮಂಡಳಿಯು ಮೇ 20 ರಂದು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ.

ಸಮಿತಿ ರಚನೆ: ನೀರಿನ ದರ ಏರಿಕೆ ಮಾಡಲು ಜಲಮಂಡಳಿ ಆಂತರಿಕ ಸಮಿತಿಯನ್ನು ರಚಿಸಿದ್ದು, ಪ್ರಸ್ತುತ ಖರ್ಚು, ವೆಚ್ಚಗಳನ್ನು ಲೆಕ್ಕ ಹಾಕುವುದರೊಂದಿಗೆ ಮುಂದಿನ ಐದಾರು ವರ್ಷಕ್ಕೆ ಲೆಕ್ಕ ಸರಿದೂಗುವಂತೆ ನೋಡಿಕೊಂಡು ದರಗಳನ್ನು ಹೆಚ್ಚಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ದರ ಏರಿಕೆ ಮಾಡುವ ಸಂಬಂಧ ನೇಮಕ ಮಾಡಿರುವ ಸಮಿತಿಯು ಸಾಕಷ್ಟು ವಿಚಾರದಲ್ಲಿ ಲೆಕ್ಕಾಚಾರ ಮಾಡಿ ಕರಡು ಪ್ರತಿಯನ್ನು ಸಿದ್ಧಪಡಿಸಿದೆ. ಎರಡು-ಮೂರು ವಿಧಗಳಲ್ಲಿ ದರ ಪರಿಷ್ಕರಿಸಲು ಚಿಂತಿಸಿದ್ದು, ಮಂಡಳಿಯನ್ನು ಲಾಭದಲ್ಲಿ ತರುವ ಕಡೆ ಒಂದು ಲೆಕ್ಕ, ಸಾರ್ವಜನಿಕರಿಗೆ ಹೊರೆಯಾಗದಂತೆ ಮತ್ತೊಂದು ಲೆಕ್ಕಾಚಾರದ ಪಟ್ಟಿ ಸಿದ್ಧಪಡಿಸಲಾಗಿದೆ. ಅದನ್ನು ಸರಕಾರಕ್ಕೆ ಸಲ್ಲಿಸಲಿದ್ದು, ಅನುಮೋದನೆ ಸಿಗಬೇಕಿದೆ.

ನೀರು ಪೂರೈಕೆ ಪ್ರಸ್ತುತ ದರ: ಗೃಹ ಸಂಪರ್ಕಗಳಿಗೆ 0-8,000 ಲೀಟರ್ ಗಳವರೆಗೆ ಪ್ರತಿ ಸಾವಿರ ಲೀಟರ್‌ಗೆ 7 ರೂ. ದರ ನಿಗದಿಪಡಿಸಲಾಗಿದೆ. 8,001-25 ಸಾವಿರ ಲೀಟರ್ ನೀರು ಬಳಸುವ ಕಟ್ಟಡಗಳಿಗೆ ಪ್ರತಿ ಸಾವಿರ ಲೀಟರ್‌ಗೆ 11 ರೂ. ದರವಿದೆ. 25,001 ರಿಂದ 50 ಸಾವಿರ ಲೀಟರ್‌ವರೆಗೆ ನೀರು ಬಳಸುವ ಕಟ್ಟಡಕ್ಕೆ ಪ್ರತಿ ಸಾವಿರ ಲೀಟರ್‌ಗೆ 26 ರೂ. ನಿಗದಿಪಡಿಸಲಾಗಿದೆ.

50 ಸಾವಿರ ಲೀಟರ್ ಮೇಲ್ಪಟ್ಟು ನೀರು ಬಳಸುವ ಕಟ್ಟಡದಲ್ಲಿ ಪ್ರತಿ ಸಾವಿರ ಲೀಟರ್‌ಗೆ 45 ರೂ. ದರ ಇದೆ. 8 ಸಾವಿರ ಲೀಟರ್‌ವರೆಗೆ ನೀರು ಬಳಸುವ ಕಟ್ಟಡಗಳಿಗೆ 14 ರೂ.ಒಳಚರಂಡಿ ಶುಲ್ಕವಿದ್ದು, ಅದರ ಮೇಲ್ಪಟ್ಟ ಕಟ್ಟಡಗಳಿಗೆ ಶೇ.25 ಹೆಚ್ಚುವರಿ ಶುಲ್ಕ ಪಡೆಯಲಾಗುತ್ತದೆ. ಬೊರ್‌ವೆಲ್‌ಗೂ 100 ರೂ. ದರವಿದೆ.

ಸಗಟು ಬಳಕೆದಾರರಿಗೆ ವಿಭಿನ್ನ ದರಗಳಿವೆ. ಕೈಗಾರಿಕೆ ಹಾಗೂ ಈಜುಕೊಳ, ಬಿಐಎಎಲ್, ಬಿಡದಿ ಕೈಗಾರಿಕೆ ಪ್ರದೇಶಗಳಿಗೆ ಸಾವಿರ ಲೀಟರ್‌ಗೆ 90 ರೂ. ದರವಿದೆ. ಸಗಟು ಬಳಕೆದಾರರಿಗೆ ಪ್ರತಿ ಸಾವಿರ ಲೀ.ಗೆ 10 ರೂ. ದರ ನಿಗದಿಯಾಗಿದ್ದು, ಶೇ. 25 ಒಳಚರಂಡಿ ಶುಲ್ಕವಿದೆ. ಅಗರ ಗ್ರಾಪಂ ವ್ಯಾಪ್ತಿ, ಬಿಬಿಎಂಪಿ ವ್ಯಾಪ್ತಿಯ 7 ಸಿಎಂಸಿ, 1 ಟಿಎಂಸಿ ವ್ಯಾಪ್ತಿಯಲ್ಲಿ ಪ್ರತಿ ಸಾವಿರ ಲೀಟರ್‌ಗೆ 19 ರೂ. ಹಾಗೂ ಶೇ.25 ಒಳಚರಂಡಿ ಶುಲ್ಕ ವಿಧಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X