Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯ ‘ಎ’ ವಿರುದ್ಧ ಭಾರತದ ಹಾಕಿ...

ಆಸ್ಟ್ರೇಲಿಯ ‘ಎ’ ವಿರುದ್ಧ ಭಾರತದ ಹಾಕಿ ತಂಡಕ್ಕೆ ಜಯ

ವಾರ್ತಾಭಾರತಿವಾರ್ತಾಭಾರತಿ11 May 2019 12:19 AM IST
share
ಆಸ್ಟ್ರೇಲಿಯ ‘ಎ’ ವಿರುದ್ಧ ಭಾರತದ ಹಾಕಿ ತಂಡಕ್ಕೆ ಜಯ

ಪರ್ತ್, ಮೇ 10: ಯುವ ಸ್ಟ್ರೈಕರ್ ಸುಮಿತ್ ಕುಮಾರ್ ಜೂನಿಯರ್ ಗಳಿಸಿದ ಅವಳಿ ಗೋಲು ಹಾಗೂ ತಂಡಕ್ಕೆ ವಾಪಸಾಗಿರುವ ರೂಪಿಂದರ್‌ಪಾಲ್ ಸಿಂಗ್ ಬಾರಿಸಿದ ಏಕೈಕ ಗೋಲು ನೆರವಿನಿಂದ ಶುಕ್ರವಾರ ಭಾರತದ ಪುರುಷರ ಹಾಕಿ ತಂಡ ಆಸ್ಟ್ರೇಲಿಯ ‘ಎ’ ವಿರುದ್ಧ 3-0 ಅಂತರದಿಂದ ಜಯ ದಾಖಲಿಸಿದೆ.

ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ಸುಮಾರು 8 ತಿಂಗಳ ಬಳಿಕ ಸಕ್ರಿಯ ಹಾಕಿಗೆ ವಾಪಸಾದ ಡ್ರಾಗ್-ಫ್ಲಿಕರ್ ರೂಪಿಂದರ್ ಆರನೇ ನಿಮಿಷದಲ್ಲಿ ಗೋಲು ಗಳಿಸಿ ಪ್ರವಾಸಿ ತಂಡಕ್ಕೆ 1-0 ಮುನ್ನಡೆ ಒದಗಿಸಿಕೊಟ್ಟರು. ಯುವ ಸ್ಟ್ರೈಕರ್ ಸುಮಿತ್ 12ನೇ ಹಾಗೂ 13ನೇ ನಿಮಿಷದಲ್ಲಿ ಗೋಲು ಗಳಿಸುವುದರೊಂದಿಗೆ ಭಾರತ ಸತತ ಎರಡನೇ ಪಂದ್ಯ ಜಯಿಸಲು ನೆರವಾದರು.

ಭಾರತೀಯ ಆಟಗಾರರು ಮೊದಲ ಕ್ವಾರ್ಟರ್‌ನಲ್ಲಿ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದರು. ನಿರಂತರವಾಗಿ ಸ್ಟ್ರೈಕಿಂಗ್ ಸರ್ಕಲ್ ಒಳಗೆ ಪ್ರವೇಶಿಸಲು ಯತ್ನಿಸಿದರು. ಈ ತಂತ್ರ ಯಶಸ್ವಿಯಾಗಿದ್ದು ಭಾರತ ಮೊದಲ ಕ್ವಾರ್ಟರ್‌ನಲ್ಲಿ ಮೂರು ಗೋಲುಗಳನ್ನು ಗಳಿಸಿ ಆತಿಥೇಯ ತಂಡವನ್ನು ಹಿಮ್ಮೆಟ್ಟಿಸಿತು.

 ಆರನೇ ನಿಮಿಷದಲ್ಲಿ ಎದುರಾಳಿ ತಂಡದ ಗೋಲ್‌ಕೀಪರ್‌ನ್ನು ವಂಚಿಸಿದ ರೂಪಿಂದರ್ ಸಮಯೋಚಿತ ಫ್ಲಿಕ್ ಮೂಲಕ ಭಾರತಕ್ಕೆ 1-0 ಮುನ್ನಡೆ ಒದಗಿಸಿಕೊಟ್ಟರು. ನಾಯಕ ಮನ್‌ಪ್ರೀತ್ ಸಿಂಗ್ ನೀಡಿದ ಉತ್ತಮ ಅಸಿಸ್ಟ್ ಬೆಂಬಲದಿಂದ ಸುಮಿತ್ 12ನೇ ನಿಮಿಷದಲ್ಲಿ ಅಮೋಘ ಫೀಲ್ಡ್ ಗೋಲು ಬಾರಿಸಿದರು.

13ನೇ ನಿಮಿಷದಲ್ಲಿ ತನ್ನ ಮೂರನೇ ಗೋಲು ಗಳಿಸಿದ ಭಾರತ ಆತಿಥೇಯ ತಂಡಕ್ಕೆ ಆಘಾತ ನೀಡಿತು. ಸ್ಟ್ರೈಕರ್ ಆಕಾಶ್‌ದೀಪ್ ಸಿಂಗ್ ನೆರವಿನಿಂದ 21ರ ಹರೆಯದ ಸುಮಿತ್ 13ನೇ ನಿಮಿಷದಲ್ಲಿ ಮತ್ತೊಂದು ಗೋಲು ಗಳಿಸಿದರು.

ಮೊದಲ ಕ್ವಾರ್ಟರ್‌ನಲ್ಲಿ 3-0 ಮುನ್ನಡೆ ಪಡೆದ ಭಾರತ ಉತ್ತಮ ರಕ್ಷಣಾತ್ಮಕ ಆಟದ ಮೂಲಕ ಆಸ್ಟ್ರೇಲಿಯದ ದಾಳಿಯನ್ನು ಒಗ್ಗಟ್ಟಿನಿಂದ ಎದುರಿಸಿತು. ಆಸ್ಟ್ರೇಲಿಯ ಎರಡನೇ ಕ್ವಾರ್ಟರ್‌ನಲ್ಲಿ ಗೋಲು ಗಳಿಸುವ ಏಕೈಕ ಅವಕಾಶ ಪಡೆದಿತ್ತು. ಆದರೆ, ಭಾರತದ ಗೋಲ್‌ಕೀಪರ್ ಕ್ರಿಶನ್ ಪಾಠಕ್ ಗೋಲು ನಿರಾಕರಿಸಿದರು.

 ಭಾರತ ಸೋಮವಾರ ಮತ್ತೊಂದು ಪಂದ್ಯವನ್ನಾಡಲಿದ್ದು ಆಸೀಸ್ ಪ್ರವಾಸದಲ್ಲಿ ಶ್ರೇಷ್ಠ ಪ್ರದರ್ಶನ ಮುಂದುವರಿಸುವ ವಿಶ್ವಾಸ ದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X