Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಉಪ ಚುನಾವಣೆ: ತಾರಕಕ್ಕೇರಿದ...

ರಾಜ್ಯ ಉಪ ಚುನಾವಣೆ: ತಾರಕಕ್ಕೇರಿದ ಪ್ರಚಾರದ ಭರಾಟೆ

‘ಮುಖ್ಯಮಂತ್ರಿ’ ಕನವರಿಕೆಯಲ್ಲಿ ಆರೋಪ-ಪ್ರತ್ಯಾರೋಪ

ವಾರ್ತಾಭಾರತಿವಾರ್ತಾಭಾರತಿ11 May 2019 12:46 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಜ್ಯ ಉಪ ಚುನಾವಣೆ: ತಾರಕಕ್ಕೇರಿದ ಪ್ರಚಾರದ ಭರಾಟೆ

ಬೆಂಗಳೂರು, ಮೇ 11: ಕುಂದಗೋಳ, ಚಿಂಚೋಳಿ ಕ್ಷೇತ್ರಗಳ ಉಪ ಚುನಾವಣೆ (ಮೇ 19)ಗೆ ಕೇವಲ ಏಳು ದಿನ ಬಾಕಿಯಿದ್ದು, ಎರಡೂ ಕ್ಷೇತ್ರಗಳ ಗೆಲುವಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಾಗೂ ವಿಪಕ್ಷ ಬಿಜೆಪಿ ಮುಖಂಡರು ಭರ್ಜರಿ ಬೆವರು ಹರಿಸುತ್ತಿದ್ದಾರೆ.

ಈ ಮಧ್ಯೆ ‘ಮುಖ್ಯಮಂತ್ರಿ’ ಹುದ್ದೆಯ ಕನವರಿಕೆಯಲ್ಲೆ ರಾಜಕೀಯ ಪಕ್ಷಗಳ ಮುಖಂಡರು ಉಪ ಚುನಾವಣೆ ನಡೆಯಲಿರುವ ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಆದರೆ, ಕ್ಷೇತ್ರಗಳಲ್ಲಿನ ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿಯ ಬಗ್ಗೆ ಮಾತನಾಡುವ ಬದಲಿಗೆ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪದಲ್ಲೆ ಮುಳುಗಿದ್ದಾರೆ.

‘ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು’ ಎಂದು ಕಾಂಗ್ರೆಸಿನ ಕೆಲ ಸಚಿವರು, ಶಾಸಕರು ಪ್ರತಿಪಾದಿಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿ ಇನ್ನಿತರ ಮುಖಂಡರು ‘ಮೇ 23ರ ನಂತರ ಮೈತ್ರಿ ಸರಕಾರ ಪತನಗೊಳ್ಳಲಿದೆ’ ಎಂಬ ಹೇಳಿಕೆ ನೀಡುವ ಮೂಲಕ ಅವರೂ ಮುಖ್ಯಮಂತ್ರಿ ಹುದ್ದೆ ಕನವರಿಕೆಯಲ್ಲಿದ್ದಾರೆ.

ಮತ್ತೊಂದು ಕಡೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿನ ಮೈತ್ರಿ ಸರಕಾರ ಪತನಗೊಳ್ಳಲು ಸಾಧ್ಯವಿಲ್ಲ. ಈ ಸರಕಾರ ಇನ್ನೂ ನಾಲ್ಕು ವರ್ಷ ಸುಭದ್ರವಾಗಿರಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮೈತ್ರಿ ಮುಖಂಡರು ಪ್ರತಿಪಾದಿಸುತ್ತಿದ್ದಾರೆ.

ನಿನ್ನೆಯಷ್ಟೇ ‘ಕಾಂಗ್ರೆಸಿನ 20 ಶಾಸಕರಿಗೆ ಈ ಸರಕಾರದ ಬಗ್ಗೆ ಅತೃಪ್ತಿ ಇದ್ದು, ಯಾವಾಗ ಏನೂ ಬೇಕಾದರೂ ಆಗಬಹುದು’ ಎಂದಿದ್ದ ಯಡಿಯೂರಪ್ಪ, ಇಂದು ನಾನು ಹಾಗೇ ಹೇಳಿಯೇ ಇಲ್ಲ. ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಸರಕಾರದ ಬಗ್ಗೆ ಅಸಮಾಧಾನವಿದೆ ಎಂದಷ್ಟೇ ಹೇಳಿದ್ದೆ ಎಂದು ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದ್ದಾರೆ.

ಯಾವುದೇ ರಾಜಕೀಯ ಹೇಳಿಕೆಗಳಿಗೆ ತಕ್ಷಣವೇ ಪ್ರತಿಕ್ರಿಯೆ ನೀಡುತ್ತಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ರಾಂತಿ ನೆಪದಲ್ಲಿ ಕೊಡಗು ಜಿಲ್ಲೆ ಮಡಿಕೇರಿಯ ರೆಸಾರ್ಟ್‌ಗೆ ತೆರಳಿದ್ದು, ಲೋಕಸಭೆ ಚುನಾವಣೆ ಫಲಿತಾಂಶದ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

‘ದುಡ್ಡು ಕೊಟ್ಟು ಶಾಸಕರನ್ನು ಖರೀದಿಸಿ, ಮೈತ್ರಿ ಸರಕಾರವನ್ನು ಬೀಳಿಸುವುದು ವಿರೋಧ ಪಕ್ಷದ ಕೆಲಸವೇ? ಯಡಿಯೂರಪ್ಪಗೆ ಸರಕಾರ ರಚನೆಗೆ ರಾಜ್ಯಪಾಲರು ಅವಕಾಶ ಮಾಡಿಕೊಟ್ಟಿದ್ದರು. ಆದರೆ, ಸಂಖ್ಯಾಬಲ ತೋರಿಸಲು ಬಿಎಸ್‌ವೈಗೆ ಆಗಲಿಲ್ಲ. ಹೀಗಾಗಿ ಹತಾಶರಾಗಿ ಮನಸೋ ಇಚ್ಛೆ ಮಾತನಾಡುತ್ತಿದ್ದಾರೆ’

-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X