Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಿರಡ್ಡಿ ಗೋವಿಂದರಾಜ ಬಹುಮುಖ...

ಗಿರಡ್ಡಿ ಗೋವಿಂದರಾಜ ಬಹುಮುಖ ವ್ಯಕ್ತಿತ್ವದ ಸಾಹಿತಿ: ಸಿ.ಎನ್.ರಾಮಚಂದ್ರನ್

ವಾರ್ತಾಭಾರತಿವಾರ್ತಾಭಾರತಿ11 May 2019 8:35 PM IST
share

ಬೆಂಗಳೂರು, ಮೇ 11: ಹಿರಿಯ ಸಾಹಿತಿ ಗಿರಡ್ಡಿ ಗೋವಿಂದರಾಜ ಸಾಹಿತ್ಯ ವಿಮರ್ಶಕರಾಗಿ ಮಾತ್ರ ಪ್ರಸಿದ್ಧಿಗೊಂಡಿದ್ದರೂ ಅತ್ಯುತ್ತಮ ಕಾವ್ಯ, ಕತೆಗಳನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಬಹುಮುಖ ವ್ಯಕ್ತಿತ್ವದ ಸಾಹಿತಿಯಾಗಿ ಗುರುತಿಸಿಕೊಂಡಿದ್ದರು ಎಂದು ಹಿರಿಯ ವಿಮರ್ಶಕ ಪ್ರೊ.ಸಿ.ಎನ್.ರಾಮಚಂದ್ರನ್ ಅಭಿಪ್ರಾಯಿಸಿದ್ದಾರೆ.

ಶನಿವಾರ ಕೆಪಿಟಿಎಲ್ ಲೆಕ್ಕಾಧಿಕಾರಿಗಳ ಸಂಘ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಕನ್ನಡ ಸಾಹಿತ್ಯಕ್ಕೆ ಗಿರಡ್ಡಿ ಗೋವಿಂದರಾಜರ ಕೊಡುಗೆ’ ಕುರಿತು ಮಾತನಾಡಿದ ಅವರು, ನವ್ಯ ಪಂಥದ ಮೌಲ್ಯಯುತ ಚಿಂತನೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಖರವಾಗಿ ಬೆಳೆಯಲು ಗಿರಡ್ಡಿ ಗೋವಿಂದರಾಜ ಅವರ ಬರಹಗಳು ಸಾಕಷ್ಟು ಕೊಡುಗೆ ನೀಡಿವೆ ಎಂದು ತಿಳಿಸಿದರು.

ಗಿರಡ್ಡಿ ಗೋವಿಂದರಾಜ ನಾಡಿನಲ್ಲಿ ಪ್ರಸಿದ್ಧ ವಿಮರ್ಶಕರೆಂದು ಗುರುತಿಸಿಕೊಂಡಿದ್ದರೂ ಅವರ ಆರಂಭದ ಬರಹ ಕಾವ್ಯವಾಗಿತ್ತು. ಅವರು ರಸವಂತಿ ಎಂಬ ಕಾವ್ಯ ಸಂಕಲದ ಮೂಲಕ ಸಾಹಿತ್ಯ ಕ್ಷೇತ್ರವನ್ನು ಪ್ರವೇಶಿಸಿದರು. ಇದರಲ್ಲಿ 35 ಕವನಗಳಿದ್ದು, ಇವು ನವೋದಯ, ಪ್ರಗತಿಶೀಲ ಹಾಗೂ ನವ್ಯ ಪ್ರಕಾರಗಳಲ್ಲಿ ಕೂಡಿವೆ. ಸುಮಾರು 60ರ ದಶಕದಲ್ಲಿ ಸಾಹಿತ್ಯ ರಚಿಸಲು ಪ್ರಾರಂಭಿಸಿದ ಬರಹಗಾರರಿಗೆ ನಾವು ಯಾವ ಪ್ರಕಾರದಲ್ಲಿ ಸಾಹಿತ್ಯ ರಚಿಸಬೇಕೆಂಬ ಗೊಂದಲದಲ್ಲಿಯೆ ಬರವಣಿಗೆ ನಡೆಸಿದ್ದರು. ಹೀಗಾಗಿಯೆ ಗಿರಡ್ಡಿ ಅವರ ಪ್ರಾರಂಭಿಕ ಕವನ ಸಂಕಲನ ಎಲ್ಲ ಪ್ರಕಾರಗಳಿಂದ ಕೂಡಿತ್ತು ಎಂದು ಅವರು ಹೇಳಿದರು.

1975ರಲ್ಲಿ ಪ್ರಕಟಗೊಂಡ ಮರ್ಲಿನ್ ಮನ್ರೋ ಎಂಬ ಗಿರಡ್ಡಿ ಅವರ ಎರಡನೆ ಕವನ ಸಂಕಲನ ಸಂಪೂರ್ಣ ನವ್ಯದಿಂದ ಕೂಡಿದ್ದು, ಅದರಲ್ಲಿನ ಪ್ರತಿ ಕವನವು ಉತ್ತಮವಾಗಿವೆ. ಈ ಕವನಗಳನ್ನು ವಿಮರ್ಶೆಗೆ ಒಳಪಡಿಸಿದಾಗ ಗಿರಡ್ಡಿ ಗೋವಿಂದರಾಜ ಅವರು ಅತ್ಯುತ್ತಮ ಕವಿಯಾಗಿ ರೂಪಗೊಳ್ಳಬಹುದಾದ ಎಲ್ಲ ಸಾಧ್ಯತೆಗಳಿದ್ದವು. ಆದರೆ, ಅವರು ವಿಮರ್ಶಾ ಕ್ಷೇತ್ರವನ್ನು ಪ್ರಧಾನವಾಗಿ ಆಯ್ಕೆ ಮಾಡಿಕೊಂಡರು ಎಂದು ಅವರು ಹೇಳಿದರು.

ಗಿರಡ್ಡಿ ಅವರು ‘ಆ ಮುಖ ಈ ಮುಖ’ ಕಥಾ ಸಂಕಲನ, ‘ಮಣ್ಣು ’ ಎಂಬ ನೀಳ್ಗತೆ ಸೇರಿದಂತೆ ಮೂರು ಕಥಾ ಸಂಕಲನವನ್ನು ಪ್ರಕಟಗೊಳಿಸಿದ್ದಾರೆ. ಇದರಲ್ಲಿ ಹಂಗು ಎಂಬ ಕತೆಯು ಪುಟ್ಟಣ್ಣ ಕಣಗಾಲ್ ನಿರ್ದೇಶನದಲ್ಲಿ ಸಿನೆಮಾ ಆಗಿದೆ. ಅವರ ‘ಮಣ್ಣು’ ಕತೆಯಲ್ಲಿ ಮನುಷ್ಯನಿಗೆ ತನ್ನ ಬದುಕಿನಲ್ಲಿ ಎದುರಾಗಬಹುದಾದ ವೈರುಧ್ಯಗಳನ್ನು ಮನೋಜ್ಞವಾಗಿ ಕಟ್ಟಿಕೊಡಲಾಗಿದೆ ಎಂದು ಅವರು ಹೇಳಿದರು.

‘ಸಣ್ಣಕತೆಯ ಹೊಸ ನಿಲುವುಗಳು’ ಎಂಬ ವಿಮರ್ಶಾ ಕೃತಿಯ ಮೂಲಕ ಗಿರಡ್ಡಿ ಗೋವಿಂದರಾಜ ವಿಮರ್ಶಕರಾಗಿ ಹೆಚ್ಚು ಪ್ರಸಿದ್ಧಿಗೊಂಡರು. ಅಲ್ಲಿಂದ ಅವರು ತಮ್ಮ ಮುಂದಿನ ನಾಲ್ಕು ದಶಕಗಳ ಸಾಹಿತ್ಯ ಕೃಷಿಯನ್ನು ಬಹುತೇಕ ವಿಮರ್ಶೆಗೆ ಮೀಸಲಿಟ್ಟರು. ಅವರ ವಿಮರ್ಶಾ ಕೃತಿಗಳು ಅನೇಕ ಒಳನೋಟಗಳಿಂದ ಕೂಡಿದ್ದು ಸಾಹಿತ್ಯ ಚಿಂತಕರಲ್ಲಿ ಚರ್ಚೆಗೆ ಈಡುಮಾಡಿವೆ ಎಂದು ಅವರು ಹೇಳಿದರು.

ವಿಮರ್ಶೆಯೆಂದರೆ ಕೇವಲ ಮೌಲ್ಯಮಾಪನವಲ್ಲ. ಅದೊಂದು ಗಂಭೀರ ಕಾರ್ಯವೆಂದು ಗಿರಡ್ಡಿ ಗೋವಿಂದರಾಜ ಭಾವಿಸಿದ್ದರು. ನವ್ಯ ಬರಹಗಾರರಾಗಿ ಗುರುತಿಸಿಕೊಂಡಿದ್ದ ಅವರು, ಕೃತಿಯಲ್ಲಿ ಮಾನವೀಯ ಮೌಲ್ಯಗಳು ಇಲ್ಲದಿದ್ದರೆ ಆ ಕೃತಿ ಎಷ್ಟೆ ಜನಪ್ರಿಯಗೊಂಡಿದ್ದರು ಶ್ರೇಷ್ಠ ಕೃತಿಯೆಂದು ಪರಿಗಣಿಸಲಾಗದು ಎಂದು ತಮ್ಮ ವಿಮರ್ಶ ಕೃತಿಗಳಲ್ಲಿ ಸ್ಪಷ್ಟವಾಗಿ ದಾಖಲಿಸಿದ್ದಾರೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಜಯಂತಿ ನಾಯಕ ಅವರಿಂದ ಸುಗಮ ಸಂಗೀತ ಆಯೋಜಿಸಲಾಗಿತ್ತು. ಹಾಗೂ ಡಾ.ನಿರಂಜನ ಯೆಲ್ಲೂರು ಅವರಿಂದ ‘ಭಾರತೀಯ ದೃಷ್ಟಿಯಲ್ಲಿ ಆರೋಗ್ಯ’ ವಿಷಯದ ಕುರಿತು ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X