Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದ್ಯುತ್ ಪೂರೈಕೆ ಸಮಸ್ಯೆ: ಒಡಿಶಾದಲ್ಲಿ...

ವಿದ್ಯುತ್ ಪೂರೈಕೆ ಸಮಸ್ಯೆ: ಒಡಿಶಾದಲ್ಲಿ ಚಂಡಮಾರುತ ಸಂತ್ರಸ್ತರಿಂದ ರಸ್ತೆ ತಡೆ

ವಾರ್ತಾಭಾರತಿವಾರ್ತಾಭಾರತಿ11 May 2019 10:11 PM IST
share
ವಿದ್ಯುತ್ ಪೂರೈಕೆ ಸಮಸ್ಯೆ: ಒಡಿಶಾದಲ್ಲಿ ಚಂಡಮಾರುತ ಸಂತ್ರಸ್ತರಿಂದ ರಸ್ತೆ ತಡೆ

ಭುವನೇಶ್ವರ, ಮೇ 11: ಕಳೆದ ವಾರ ಒಡಿಶಾಕ್ಕೆ ಅಪ್ಪಳಿಸಿದ ಘನಿ ಚಂಡಮಾರುತದಿಂದ ರಾಜ್ಯದ ಹಲವೆಡೆ ವಿದ್ಯುತ್ ಪೂರೈಕೆ ವ್ಯವಸ್ಥೆಗೆ ಹಾನಿಯಾಗಿದ್ದು ಇದನ್ನು ಸರಿಪಡಿಸಲು ಅಧಿಕಾರಿಗಳು ವಿಳಂಬಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜಗತ್‌ಸಿಂಗ್‌ಪುರ ಜಿಲ್ಲೆಯ ಚೋಪಡ ಗ್ರಾಮಸ್ಥರು ಶನಿವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದಾರೆ.

ರಾಜ್ಯದ ಹಲವೆಡೆ ಚಂಡಮಾರುತದಿಂದ ಸಂತ್ರಸ್ತರಾದವರು ವಿದ್ಯುಚ್ಛಕ್ತಿ ಅಥವಾ ಆಹಾರದ ಸಮರ್ಪಕ ಪೂರೈಕೆಯಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಚಂಡಮಾರುತ ಅಪ್ಪಳಿಸಿ ಒಂದು ವಾರ ಕಳೆದರೂ ಇನ್ನೂ ವಿದ್ಯುಚ್ಛಕ್ತಿಯ ಪೂರೈಕೆ ಸಮರ್ಪಕಗೊಂಡಿಲ್ಲ. ಬಿಸಿಲ ಧಗೆಯ ಮಧ್ಯೆ ವಿದ್ಯುಚ್ಛಕ್ತಿಯ ಪೂರೈಕೆಯಿಲ್ಲದೆ ನರಕಯಾತನೆ ಅನುಭವಿಸುತ್ತಿದ್ದೇವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವೆಡೆ ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನು ಮರು ಸ್ಥಾಪಿಸಲಾಗಿದ್ದರೂ ಲೋ ವೋಲ್ಟೇಜ್ ಸಮಸ್ಯೆಯ ಬಗ್ಗೆ ದೂರು ವ್ಯಕ್ತವಾಗಿದೆ. ಸುಮಾರು 3.5 ಮಿಲಿಯ ಜನತೆಯಲ್ಲಿ ಅರ್ಧಾಂಶದಷ್ಟು ಜನತೆಗೆ ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನು ಸರಿಪಡಿಸಬೇಕಿದ್ದು ಇದಕ್ಕಾಗಿ ಸಮರೋಪಾದಿಯಲ್ಲಿ ಕೆಲಸ ನಡೆಯುತ್ತಿದೆ . ಪುರಿ, ಖುರ್ಡ, ಜಗತ್‌ಸಿಂಗ್‌ಪುರ ಮತ್ತು ಜೈಪುರ ಜಿಲ್ಲೆಗಳಲ್ಲಿ ಮೂಲ ಸೌಕರ್ಯಗಳಿಗೆ ಹಾನಿಯಾಗಿದ್ದು 5030 ಕಿ.ಮೀನಷ್ಟು 33 ಕೆವಿ ಲೈನ್‌ಗಳು, 38,613 ಕಿ.ಮೀ.ನಷ್ಟು 11 ಕೆವಿ ಲೈನ್‌ಗಳು ಹಾಗೂ 79485 ಕಿ.ಮೀ.ನಷ್ಟು ಎಲ್‌ಟಿ ಲೈನ್‌ಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ 400 ಕೆವಿ ಸಾಮರ್ಥ್ಯದ 5 ವಿದ್ಯುತ್ ಗೋಪುರಗಳು, 130 ಕೆವಿ ಸಾಮರ್ಥ್ಯದ 21 ವಿದ್ಯುತ್ ಗೋಪುರಗಳು, 63,304 ವಿತರಣಾ ಪರಿವರ್ತಕಗಳು ಹಾನಿಗೊಳಗಾಗಿವೆ. ಭುವನೇಶ್ವರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ವಿತರಿಸುವ 220 ಕೆವಿ ಸಾಮರ್ಥ್ಯದ 4 ವಿದ್ಯುತ್ ಜಾಲ(ಗ್ರಿಡ್)ಗಳಿಗೆ, ಪುರಿ, ನಿಮಪಾದ, ಮಂಚೇಶ್ವರ ಮತ್ತು ರಣಸಿಂಗಪುರದಲ್ಲಿ 132 ಕೆವಿ ಸಾಮರ್ಥ್ಯದ ವಿದ್ಯುತ್ ಗ್ರಿಡ್‌ಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X