Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಆನ್‌ಲೈನ್ ಖರೀದಿಗಾರರ...

ಭಾರತದಲ್ಲಿ ಆನ್‌ಲೈನ್ ಖರೀದಿಗಾರರ ಬೆನ್ನುಬಿದ್ದಿರುವ ಹ್ಯಾಕರ್‌ಗಳು: ವರದಿಯಲ್ಲಿ ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ12 May 2019 10:15 PM IST
share
ಭಾರತದಲ್ಲಿ ಆನ್‌ಲೈನ್ ಖರೀದಿಗಾರರ ಬೆನ್ನುಬಿದ್ದಿರುವ ಹ್ಯಾಕರ್‌ಗಳು: ವರದಿಯಲ್ಲಿ ಉಲ್ಲೇಖ

ಹೊಸದಿಲ್ಲಿ, ಮೇ 12: ಭಾರತದಲ್ಲಿ ಅಂತರ್‌ಜಾಲ ಬಳಕೆದಾರರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿರುವಂತೆ ಹ್ಯಾಕರ್‌ಗಳು ಇದೀಗ ತಮ್ಮ ಗಮನವನ್ನು ಭಾರತದ ಆನ್‌ಲೈನ್ ಖರೀದಿಗಾರರ ಮೇಲೆ ಕೇಂದ್ರೀಕರಿಸಿರುವುದಾಗಿ ವರದಿಗಳು ತಿಳಿಸಿವೆ.

ಭಾರತದಲ್ಲಿ 450 ಮಿಲಿಯನ್ ಸ್ಮಾರ್ಟ್‌ಫೋನ್ ಬಳಕೆದಾರರು, 550 ಮಿಲಿಯನ್‌ಗೂ ಹೆಚ್ಚು ಅಂತರ್‌ಜಾಲ ಬಳಕೆದಾರರಿದ್ದಾರೆ. ಇದರಲ್ಲಿ ನಗರಪ್ರದೇಶದಲ್ಲಿ 366 ಮಿಲಿಯನ್ ಇಂಟರ್‌ನೆಟ್ ಚಂದಾದಾರರು, ಗ್ರಾಮೀಣ ಪ್ರದೇಶದಲ್ಲಿ 194 ಮಿಲಿಯನ್ ಇಂಟರ್‌ನೆಟ್ ಚಂದಾದಾರರಿದ್ದಾರೆ ಎಂದು ಭಾರತದ ಟೆಲಿಕಾಂ ನಿಯಂತ್ರಕ ಪ್ರಾಧಿಕಾರ(ಟ್ರಾಯ್)ದ ಇತ್ತೀಚಿನ ವರದಿಯಲ್ಲಿ ತಿಳಿಸಲಾಗಿದೆ.

ದುರುದ್ದೇಶಪೂರಿತ ವ್ಯಕ್ತಿಗಳು ತಮ್ಮ ನೆಟ್‌ವರ್ಕ್‌ನೊಳಗೆ ನುಸುಳುವುದನ್ನು ತಡೆಗಟ್ಟಲು ಕಂಪ್ಯೂಟರ್ ಆಧಾರಿತ ತರಬೇತಿ ಪರಿಣಾಮಕಾರಿಯಾಗುತ್ತದೆ ಎಂಬುದನ್ನು ಬಹುತೇಕ ಜನ ನಂಬುವುದಿಲ್ಲ ಎಂದು ‘ಸೊಫೋಸ್’ನ ಹಿರಿಯ ಭದ್ರತಾ ಸಲಹೆಗಾರ ಜಾನ್ ಶಿಯರ್ ಹೇಳಿದ್ದಾರೆ.

   ಭಾರತದ ಶೇ.86ರಷ್ಟು ಅಂತರ್‌ಜಾಲ ಬಳಕೆದಾರರು ತಮ್ಮ ಸಂಭಾಷಣೆಯನ್ನು ಕದ್ದಾಲಿಸುವ ಅಥವಾ ತಮ್ಮ ಕಂಪ್ಯೂಟರ್ ಅಥವಾ ಸ್ಮಾರ್ಟ್‌ಫೋನ್‌ನಿಂದ ಮಾಹಿತಿಗಳನ್ನು ದುರುಪಯೋಗಪಡಿಸಿಕೊಳ್ಳುವ ಬಗ್ಗೆ ಆತಂಕಿತರಾಗಿದ್ದಾರೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಸೈಬರ್ ಭದ್ರತೆ ಸಲಹಾತಜ್ಞರ ಸಂಸ್ಥೆ ಕೆಪಿಎಂಜಿಯ ವರದಿ ತಿಳಿಸಿದೆ. ತಮ್ಮ ಕುರಿತ ಮಾಹಿತಿಗಳನ್ನು ರಿಟೈಲರ್‌ಗಳು ದುರುಪಯೋಗ ಪಡಿಸುತ್ತಿದ್ದಾರೆ ಅಥವಾ ಅಕ್ರಮವಾಗಿ ಹಂಚುತ್ತಿದ್ದಾರೆ ಎಂಬ ಆತಂಕ ಶೇ.87ರಷ್ಟು ಗ್ರಾಹಕರಲ್ಲಿದೆ ಎಂದು ವರದಿ ತಿಳಿಸಿದೆ.

   ಅಂತರ್‌ಜಾಲ ಸಂಪರ್ಕದ ಪ್ರಸರಣವು ಮಾಹಿತಿ ಸುರಕ್ಷತೆ ಮತ್ತು ಗೌಪ್ಯತೆಯ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ನಿಯಂತ್ರಕರು ಕಡ್ಡಾಯ ಮಾಹಿತಿ ಭದ್ರತೆ ಅವಶ್ಯಕತೆಗಳನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಕೆಪಿಎಂಜಿ ಭಾರತದ ಮಾಹಿತಿ ತಂತ್ರಜ್ಞಾನ ಮತ್ತು ಸೈಬರ್ ಭದ್ರತೆ ವಿಭಾಗದ ಮುಖ್ಯಸ್ಥ ಅತುಲ್ ಗುಪ್ತಾ ಹೇಳಿದ್ದಾರೆ.

 ಇತ್ತೀಚೆಗೆ ವರದಿಯಾಗಿರುವ ಸೈಬರ್ ದಾಳಿಗಳು ಸಂಸ್ಥೆಗಳ ಒಳಗೆ ಮತ್ತು ಹೊರಗೆ ನಡೆಯುವ ಭದ್ರತಾ ಅಪಾಯಗಳ ಬಗ್ಗೆ ಬೆಳಕು ಚೆಲ್ಲುತ್ತವೆ. ಉದ್ಯೋಗಿಗಳು ಸುರಕ್ಷತಾ ಉಲ್ಲಂಘನೆಯ ಅಪಾಯದ ಬಗ್ಗೆ ಸೂಕ್ಷ್ಮಗ್ರಾಹಿಗಳಾಗುವ ಅನಿವಾರ್ಯತೆಯಿದೆ ಮತ್ತು ಇಂತಹ ಸಂದರ್ಭಗಳನ್ನು ಎದುರಿಸುವ ಬಗ್ಗೆ ಅವರಿಗೆ ತರಬೇತಿ ನೀಡಬೇಕಿದೆ ಎಂದು ಟಾಟಾ ಕಮ್ಯುನಿಕೇಷನ್ಸ್‌ನ ಸೈಬರ್ ಭದ್ರತೆ ವಿಭಾಗದ ನಿರ್ದೇಶಕಿ ಗೌರಿ ಬಜಾಜ್ ಹೇಳಿದ್ದಾರೆ.

ಸೈಬರ್ ಭದ್ರತೆಯ ನಿಟ್ಟಿನಲ್ಲಿ ಕಡಿಮೆ ವೆಚ್ಚದಲ್ಲಿ ಪ್ರತೀ ವ್ಯಕ್ತಿಗೆ ಸಂಬಂಧಿಸಿ ವ್ಯಕ್ತಿಗತ ಯೋಜನೆ ರೂಪಿಸುವ ಅಗತ್ಯವಿದೆ ಎಂದು ಜಿಒಕ್ಯುಐಐನ ಸ್ಥಾಪಕ ಮತ್ತು ಸಿಇಒ ವಿಶಾಲ್ ಗೊಂಡಾಲ್ ಅಭಿಪ್ರಾಯ ಪಟ್ಟಿದ್ದಾರೆ.

ಕೇವಲ ಮಾಹಿತಿ ತಂತ್ರಜ್ಞಾನ ಸುರಕ್ಷಾ ತಂಡವಿದ್ದರೆ ಸಾಲದು. ಭದ್ರತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಬೇಕು. ಆನ್‌ಲೈನ್‌ನಲ್ಲಿ ನಡೆಯುವ ಬ್ಯಾಂಕಿಂಗ್ ಹಾಗೂ ಇತರ ಆರ್ಥಿಕ ಸಂಸ್ಥೆಗಳ ವ್ಯವಹಾರಕ್ಕೆ ವಿಶಿಷ್ಟ , ಸಂಕೀರ್ಣ ಪಾಸ್‌ವರ್ಡ್ ಬಳಸಬೇಕು. ಇತರರಿಗೆ ಪಾಸ್‌ವರ್ಡ್ ಮ್ಯಾನೇಜರ್ ಬಳಸಬೇಕು. ಅಲ್ಲದೆ ಎರಡು ಅಂಶದ ದೃಢೀಕರಣ ವ್ಯವಸ್ಥೆ(2ಎಫ್‌ಎ)ಯ ಮೂಲಕ ಖಾತೆಗಳಿಗೆ ಹೆಚ್ಚುವರಿ ಸುರಕ್ಷಾ ವಲಯದ ಭದ್ರತೆ ಒದಗಿಸಬೇಕು ಎಂದು ಜಾನ್ ಶಿಯರ್ ಹೇಳಿದ್ದಾರೆ. ಇ-ಮೇಲ್‌ನಲ್ಲಿ ಅಪರಿಚಿತ ಮೂಲಗಳಿಂದ ಬರುವ ಆಕರ್ಷಕ ಕೊಡುಗೆಗಳಿಗೆ ಮಾರುಹೋಗಿ ಅವನ್ನು ಕ್ಲಿಕ್ ಮಾಡಿದರೆ ಅಪಾಯವನ್ನು ಆಹ್ವಾನಿಸಿದಂತಾಗುತ್ತದೆ ಎಂದವರು ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X