Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೇಸಿಗೆ ಶಿಬಿರದಲ್ಲಿ ಚಿಣ್ಣರ ಜಾದೂ:...

ಬೇಸಿಗೆ ಶಿಬಿರದಲ್ಲಿ ಚಿಣ್ಣರ ಜಾದೂ: ಮಸ್ತ್ ಮಜಾ ಮಾಡಿದ ಪುಟಾಣಿಗಳು

ವಾರ್ತಾಭಾರತಿವಾರ್ತಾಭಾರತಿ12 May 2019 10:52 PM IST
share

ಬೆಂಗಳೂರು, ಮೇ.12: ಬಾಲ ಭವನವು 5 ರಿಂದ 16 ವರ್ಷದ ಮಕ್ಕಳಿಗೆ ಕಳೆದ ಎಪ್ರಿಲ್ 12 ರಿಂದ ಮಾರ್ಚ್ 12ರವರೆಗೆ ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿತ್ತು. ಮಕ್ಕಳಿಗೆ ಸೃಜನಾತ್ಮಕ ಹಾಗೂ ಕ್ರೀಡೆ ಅಥವಾ ಸಾಹಸ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲೆ, ಜೇಡಿಮಣ್ಣಿನ ಕಲೆ, ಸುಗಮ ಸಂಗೀತ, ಗಿಟಾರ್, ತಬಲ, ಗಿಟಾರ್, ರಂಗ ತರಬೇತಿ, ಚೆಸ್, ಕೇರಂ ಬೋರ್ಡ್, ಫೋಟೋಗ್ರಾಫಿ, ಯೋಗ, ಕರಾಟೆ, ಸಾಹಸ ಕ್ರೀಡೆ ಇತ್ಯಾದಿಗಳಲ್ಲಿ ತರಬೇತಿ ನೀಡಲಾಗಿದೆ.

ಕೇಂದ್ರ ಬಾಲ ಭವನ, ಕಬ್ಬನ್ ಉದ್ಯಾನವನ ಮತ್ತು ರಾಜಾಜಿನಗರ ಮಿನಿ ಬಾಲ ಭವನಗಳಲ್ಲಿ ಬೇಸಿಗೆ ಶಿಬಿರವನ್ನು ನಡೆಸಲಾಗಿತ್ತು. ಈ ಬಾರಿ ಸುಮಾರು 300 ಕ್ಕೂ ಹೆಚ್ಚು ಮಕ್ಕಳು ಪ್ರವೇಶ ಪಡೆದಿದ್ದು, ಶಿಬಿರದಲ್ಲಿ ನುರಿತ ಬೋಧಕರಿಂದ ಮಕ್ಕಳಿಗೆ ಚಟುವಟಿಕೆಗಳನ್ನು ನಡೆಸಲಾಗಿತ್ತು.

ಪೂರ್ಣ ದಿನದ ಹಾಗೂ ಅರ್ಧ ದಿನದ ಪ್ಯಾಕೇಜ್ ಶಿಬಿರದಲ್ಲಿ ಪ್ರತಿ ಶನಿವಾರದಂದು ಈ ಬಾರಿ ವಿಶೇಷವಾಗಿ ದೇಸಿ ಆಟಗಳು, ಫಜಲ್, ತಾಯಂದಿರ ದಿನಾಚರಣೆ ಪ್ರಯುಕ್ತ, ಪತ್ರ ಸಂಸ್ಕೃತಿ ಚಟುವಟಿಕೆ, ಬಾಲ ಪಾಕ ಶಾಲೆ ಇತ್ಯಾದಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮನರಂಜನೆಗಾಗಿ ಚಿಣ್ಣರ ಅಚ್ಚು ಮೆಚ್ಚಿನ ಪುಟಾಣಿ ರೈಲು ವಿಹಾರ ಒದಗಿಸಲಾಗಿತ್ತು.

ಯುವಜನ ಕ್ರೀಡಾ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಈ ಬಾರಿ ಕ್ರೀಡೆ ಮತ್ತು ಸಾಹಸ ಚಟುವಟಿಕೆಗಳನೂ, ಏರ್ಪಡಿಸಲಾಗಿತ್ತು. ಇದರೊಂದಿಗೆ ಒಂದು ದಿನದ ಚಾರಣವನ್ನು ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿತ್ತು, ಮಕ್ಕಳಿಗೆ ಜಾನಪದ ಅರಿವು ಮೂಡಿಸುವ ನಿಟ್ಟಿನಲ್ಲಿ ಜಾನಪದ ಲೋಕಕ್ಕೂ ಕರೆದೊಯ್ಯಲಾಗಿತ್ತು.

ಇಂದು ಕೊನೆಯ ದಿನವಾದ ಹಿನ್ನೆಲೆ, ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಾ.ಇಂಧುಮತಿ ರಾವ್, ಕಾರ್ಯದರ್ಶಿ ರತ್ನ ಕಲಮದಾನಿ, ಆಡಳಿತಾಧಿಕಾರಿ ಎಲ್.ಎಂ.ಪ್ರಭ ಉದ್ಘಾಟನೆ ಮಾಡಿದರು. ಶಿಬಿರದಲ್ಲಿ ಮಕ್ಕಳು ಮಾಡಿದ ಎಲ್ಲ ಚಿತ್ರಕಲೆಯನ್ನ ಪ್ರದರ್ಶನಕ್ಕೆ ಇಡಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಬೇಸಿಗೆ ಶಿಬಿರಕ್ಕೆ ಅದ್ಧೂರಿ ತೆರೆ ಎಳೆಯಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X