Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲೋಕಸಭಾ ಚುನಾವಣೆ: ವಿಚಾರವಾದಿಗಳಿಂದ...

ಲೋಕಸಭಾ ಚುನಾವಣೆ: ವಿಚಾರವಾದಿಗಳಿಂದ ಜ್ಯೋತಿಷಿಗಳಿಗೆ ಒಂದು ಕೋಟಿ ರೂ. ಬಹುಮಾನದ ಸವಾಲು

ವಾರ್ತಾಭಾರತಿವಾರ್ತಾಭಾರತಿ13 May 2019 3:14 PM IST
share
ಲೋಕಸಭಾ ಚುನಾವಣೆ: ವಿಚಾರವಾದಿಗಳಿಂದ ಜ್ಯೋತಿಷಿಗಳಿಗೆ ಒಂದು ಕೋಟಿ ರೂ. ಬಹುಮಾನದ ಸವಾಲು

ಬೆಂಗಳೂರು, ಮೇ 13: ಚುನಾವಣಾ ಭವಿಷ್ಯ ಹೇಳುವ ಜ್ಯೋತಿಷಿಗಳ ಭವಿಷ್ಯ ವಾಣಿಗಳ ಸತ್ಯಾ ಸತ್ಯತೆಗಳ ಬಗ್ಗೆ  ಜ್ಯೋತಿಷ್ಯ ಶಾಸ್ತ್ರ ಕಲಿತು ಭವಿಷ್ಯ ಹೇಳುವವರಿಗೆ ಅಖಿಲ ಕರ್ನಾಟಕ ವಿಚಾರವಾದಿ ಸಂಘ(ರಿ)ವು ಒಂದು ಕೋಟಿ ರೂ ಬಹುಮಾನ ನೀಡುವ ಸವಾಲು ಮುಂದಿಟ್ಟಿದೆ.

2019ರ ಲೋಕಸಭೆ ಚುನಾವಣೆಯಲ್ಲಿ  ಚುನಾವಣಾ ಆಯೋಗದಿಂದ ಅಂಗೀಕೃತವಾದ ರಾಜಕೀಯ ಪಕ್ಷಗಳು ಇಡೀ ಭಾರತದಲ್ಲಿ ಈಗ ಲೋಕಸಭೆಗೆ ನಡೆದ, ನಡೆಯುತ್ತಿರುವ ಚುನಾವಣೆಯ ಎಲ್ಲಾ ಒಟ್ಟು ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಪಕ್ಷಾವಾರು ಎಷ್ಟೆಷ್ಟು  ಸ್ಥಾನಗಳನ್ನು ಗೆಲ್ಲುತ್ತಾರೆ ಎಂಬ ಸಂಖ್ಯೆಗಳು  ಮತ್ತು ಅಂಗೀಕೃತ ಅಲ್ಲದ ಪಕ್ಷ ಇಲ್ಲವೇ ಪಕ್ಷೇತರ ಸ್ವತಂತ್ರ ಅಭ್ಯರ್ಥಿ ಗಳಾಗಿ ಸ್ಪರ್ಧಿಸಿದವರು  ಯಾವ ಯಾವ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ  ಎಂದು ಮುಂಚಿತ ಭವಿಷ್ಯ  ಹೇಳಬೇಕು. ಹಾಗು ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರ್ಯಾರು ಗೆಲ್ಲುತ್ತಾರೆ ಎಂದು ತಿಳಿಸ ಬೇಕು.

ಸವಾಲಿಗೆ ನಿಯಮಗಳು ಇಂತಿವೆ

ದೇಶದ ಯಾವ ಜ್ಯೋತಿಷಿಗಳು ಇದರಲ್ಲಿ ಭಾಗವಹಿಸಬಹುದು. ಭಾಗವಹಿಸುವವರು ಗಣಿತ ನೈಪುಣ್ಯದ ಮೇಲೆ ಹಾಗೂ ಊಹೆಯ ಮೇಲೆ ಹಲವು ವಿವಿಧ ಸಂಯೋಜನೆಗಳ ಮೇಲೆ ಲೆಕ್ಕಹಾಕಿ (multiple combinations) ಮಾಡಿ ಬಹುಮುಖ ಉತ್ತರಗಳನ್ನು, ಒಬ್ಬರೇ ಬೇರೆ ಬೇರೆ ಹೆಸರಿನಿಂದ ಹಲವಾರು ಉತ್ತರಗಳನ್ನು ಕಳುಹಿಸ ಬಾರದೆಂಬ ಕಾರಣಕ್ಕಾಗಿ ಹಾಗೂ ಈ ಸ್ಪರ್ಧೆಗೆ  ಒಂದು ಗಂಭೀರತೆ ಹಾಗು ಸತ್ಯದ ದೃಢತೆಯ ಮನಸಾಕ್ಷಿಗಾಗಿ, ಕಳುಹಿಸುವ ಪ್ರತೀ ಉತ್ತರದ ಅರ್ಜಿಗೆ ತಲಾ  ಹತ್ತು ಸಾವಿರ ರೂ. ನ್ನು  ಭದ್ರತಾ ಠೇವಣಿಯಾಗಿ ನೀಡ ಬೇಕಾಗುತ್ತದೆ.

ಠೇವಣಿಯನ್ನು "ವಿಚಾರವಾದಿ ಸಂಘ ಬೆಂಗಳೂರು" - ಈ ಹೆಸರಿಗೆ ಡಿ.ಡಿ. ಕಳುಹಿಸ ಬೇಕು. ಗೆದ್ದವರಿಗೆ ಮಾತ್ರ ಠೇವಣಿ ಹಣ ಹಿಂದಿರುಗಿಸಲಾಗುವುದು ಮತ್ತು ಜೊತೆಗೆ ಒಂದು ಕೋಟಿ ರೂ. ಬಹುಮಾನವನ್ನು ನೀಡಲಾಗುವುದು. ಒಂದಕ್ಕಿಂತ ಹೆಚ್ಚು ಸ್ಪರ್ಧಿಗಳು ಸರಿ ಉತ್ತರ ಕೊಟ್ಟರೆ ಬಹುಮಾನ ಹಣವನ್ನು ಗೆದ್ದವರಿಗೆ ಸಮನಾಗಿ ಹಂಚಲಾಗುತ್ತದೆ. 

ಮೇ 20ನೇ ತಾರೀಖಿನ ಒಳಗೆ ಈ ಕೆಳಗಿನ ಬೆಂಗಳೂರಿನ ನಮ್ಮ ಕಚೇರಿಗೆ ಉತ್ತರವನ್ನು ದಾಖಲಾತಿ ಮೂಲಕ

 ಅಖಿಲ ಕರ್ನಾಟಕ ವಿಚಾರವಾದಿ ಸಂಘ (ರಿ ) 43. ರೋಹಿಣಿ   5ನೇ ಮೇನ್ ಪದ್ಮನಾಭನಗರ, ಬೆಂಗಳೂರು- 560070. ಕಾರ್ಯದರ್ಶಿ- ಮೊ: 9342176030 ಈ ವಿಳಾಸಕ್ಕೆ ತಲುಪಿಸಬೇಕು.

ಸ್ಪರ್ಧೆ ಹಾಗು ಉತ್ತರ ಮತ್ತು ಭದ್ರತಾ ಠೇವಣಿಯ ಹಾಗು ಸ್ಪರ್ಧೆ ನಡೆಸುವ ಜವಾಬ್ದಾರಿಗಾಗಿ ನಮ್ಮ ಸಂಘವು ನೇಮಿಸಿದ ಒಂದು ತಜ್ಞರ ಸಮಿತಿಯು ನಿರ್ವಹಿಸುತ್ತದೆ.

ವಿಚಾರವಾದಿ ಸಂಘ ಕಡೆಯಿಂದ ಒಂದು ಕೋಟಿ ರೂ.ಗೆ ಭದ್ರತೆಗಾಗಿ ಠೇವಣಿ ಪತ್ರ, ಶೇರು ಪತ್ರ, ಸ್ಥಿರಾಸ್ತಿ ಪತ್ರ ಇವುಗಳಲ್ಲಿ ಯಾವುದನ್ನು ಸಂಘದಿಂದ ನೇಮಕಗೊಂಡ ಅದೇ ಸಮಿತಿಯ ವಶ ಕೊಡಲಾಗುತ್ತದೆ. ಆದರೆ ಯಾವುದೇ ಸ್ಪರ್ಧಿಗಳ ಕೈಗೆ ಕೊಡಲಾಗುವುದಿಲ್ಲ. ಸ್ಪರ್ಧೆಯ ಫಲಿತಾಂಶವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಗೆದ್ದ ಸ್ಪರ್ಧಿಯನ್ನು ಮಾತ್ರ ಸಂಪರ್ಕಿಸಲಾಗುವುದು ಎಂದು ಸಂಘದ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X