ದ.ಕ. ಜಿಲ್ಲೆ: ಗ್ರಾಮ ಪಂಚಾಯತ್ಗಳ ಉಪಚುನಾವಣೆ
ಮಂಗಳೂರು, ಮೇ 13: ದ.ಕ. ಜಿಲ್ಲೆಯ ಮಂಗಳೂರು, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಮೇ 29ರಂದು ಉಪಚುನಾವಣೆ ನಡೆಯಲಿದೆ.
ಮೇ 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲಿಸುವ ದಿನ ಮೇ 17, ಉಮೇದುವಾರಿಕೆಯನ್ನು ಹಿಂದೆಗೆದುಕೊಳ್ಳುಲು ಕೊನೆಯ ದಿನ ಮೇ 20, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮೇ 29ರಂದು ಪೂರ್ವಾಹ್ನ 7ರಿಂದ ಸಂಜೆ 5 ಗಂಟೆಯವರೆಗೆ, ಮತಗಳ ಎಣಿಕೆ ಮೇ 31ರಂದು ಪೂರ್ವಾಹ್ನ 8 ಗಂಟೆಯಿಂದ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





