Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: 6 ವಿಭಾಗಗಳಾಗಿ ವಿಂಗಡಿಸಿ ನೀರು...

ಉಡುಪಿ: 6 ವಿಭಾಗಗಳಾಗಿ ವಿಂಗಡಿಸಿ ನೀರು ಪೂರೈಸಿದರೂ ತೀರದ ಬವಣೆ

ಮುಂದುವರೆದ ನೀರಿನ ಸಮಸ್ಯೆ: ಮತ್ತೆ ಒಂದನೆ ವಿಭಾಗಕ್ಕೆ ನೀರು

ವಾರ್ತಾಭಾರತಿವಾರ್ತಾಭಾರತಿ13 May 2019 9:30 PM IST
share
ಉಡುಪಿ: 6 ವಿಭಾಗಗಳಾಗಿ ವಿಂಗಡಿಸಿ ನೀರು ಪೂರೈಸಿದರೂ ತೀರದ ಬವಣೆ

ಉಡುಪಿ, ಮೇ 13: ಉಡುಪಿ ನಗರಸಭಾ ವ್ಯಾಪ್ತಿಯನ್ನು ಆರು ವಿಭಾಗ ಗಳಾಗಿ ವಿಂಗಡಿಸಿರುವ ಪ್ರದೇಶಗಳಿಗೆ ಕಳೆದ ಆರು ದಿನಗಳಿಂದ ನಿಗದಿಪಡಿಸಿ ದಂತೆ ನೀರು ಪೂರೈಕೆ ಮಾಡಲಾಗಿದ್ದು, ಇಂದಿಗೆ ಒಂದು ಸುತ್ತು ಪೂರ್ಣ ಗೊಂಡಿದೆ. ಆದರೂ ನೀರಿನ ಸಮಸ್ಯೆ ಮಾತ್ರ ನಗರದ ಎಲ್ಲ ಕಡೆಗಳಲ್ಲೂ ಮುಂದುವರಿದಿದೆ. ನಾಳೆ ಮತ್ತೆ ಒಂದನೆ ವಿಭಾಗಕ್ಕೆ ನೀರು ಪೂರೈಕೆ ಮಾಡಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ಆರು ವಿಭಾಗಗಳಲ್ಲಿ ಬಹುತೇಕ ಪ್ರದೇಶಗಳಿಗೆ ನೀರು ಸರಬರಾಜು ಮಾಡ ಲಾಗಿದ್ದು, ಸಾಧ್ಯವಾಗದ ಕಡೆಗಳಿಗೆ ಟ್ಯಾಂಕರ್ ಮೂಲಕ ಪೂರೈಸಲಾಗಿದೆ. ಆರು ದಿನಗಳಿಗೊಮ್ಮೆ ನೀರು ಬರುತ್ತಿರುವುದರಿಂದ ನೀರನ್ನು ಸಂಗ್ರಹಿಸಿ ಇಟ್ಟು ಕೊಳ್ಳುವುದೇ ದೊಡ್ಡ ಸಮಸ್ಯೆಯಾಗಿದೆ. ಕೆಳಗಡೆ ಟ್ಯಾಂಕ್ ಇಲ್ಲದವರು ಬಕೆಟ್, ಡ್ರಮ್‌ಗಳಲ್ಲಿ ನೀರು ತುಂಬಿಸಿಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದನ್ನು ಆರು ದಿನಗಳ ಕಾಲ ಉಳಿಸಿ ಇಡುವುದೇ ದೊಡ್ಡ ಸವಾಲಾಗಿದೆ ಎನ್ನುತ್ತಾರೆ ಕೊಡವೂರು ನಿವಾಸಿಗಳು.

‘ಆರು ದಿನಗಳಿಗೊಮ್ಮೆ ನೀರು ನೀಡುವ ಕಾರಣದಿಂದ ಮಧ್ಯದಲ್ಲಿ ನೀರಿನ ಅನಿವಾರ್ಯತೆ ಎದುರಾದ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಸರಬ ರಾಜು ಮಾಡುವ ವ್ಯವಸ್ಥೆ ಮಾಡಲಾಗುತ್ತದೆ. ಆದರೂ ನಾವು ರೇಷನಿಂಗ್ ಪ್ರಕಾರವೇ ನೀರು ಪೂರೈಕೆ ಮಾಡಲು ಪ್ರಮುಖ ಆದ್ಯತೆ ನೀಡುತ್ತೇವೆ ಎಂದು ಉಡುಪಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶ ಸಂತೋಷ್ ಕುಮಾರ್ ತಿಳಿಸಿದರು.

ಬಜೆಯಲ್ಲಿ ನೀರಿನ ಮಟ್ಟ ಏರಿಕೆ: ಸ್ವರ್ಣ ನದಿಯ ನಾಲ್ಕು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಡ್ರೆಡ್ಜಿಂಗ್ ನಡೆಸಿದ ಪರಿಣಾಮ ಇಂದು ನದಿಯಲ್ಲಿ ಹರಿವು ಹೆಚ್ಚಾಗಿ ಬಜೆ ಅಣೆಕಟ್ಟಿನಲಿ್ಲ ನೀರಿನ ಸಂಗ್ರಹದಲ್ಲಿ ಏರಿಕೆಯಾಗಿದೆ.

ಮೇ 7ರಿಂದ ಶಿರೂರು, ಮಾಣೈ, ಭಂಡಾರಿಬೆಟ್ಟು ಹಾಗೂ ಪುತ್ತಿಗೆ ಮಠದ ಬಳಿ ಸುಮಾರು 9 ಬೋಟುಗಳಲ್ಲಿ ಡ್ರೆಡ್ಜಿಂಗ್ ಕಾರ್ಯವನ್ನು ನಡೆಸುತ್ತಿದ್ದು, ಇಂದು ಕೂಡ ಆ ಕಾರ್ಯ ಮುಂದುವರೆದಿದೆ. ಇದರಿಂದ ಬಜೆ ಅಣೆಕಟ್ಟಿ ನಲ್ಲಿದ್ದ 1.20ಮೀಟರ್(ಮೇ12) ನೀರಿನ ಸಂಗ್ರಹವು ಇಂದು 1.60 ಮೀಟರ್‌ಗೆ ಹೆಚ್ಚಳವಾಗಿದೆ.

ನೀರಿನ ಹರಿವು ಹೆಚ್ಚಾಗಿರುವುದರಿಂದ ಬಜೆ ಅಣೆಕಟ್ಟಿನಲ್ಲಿ ಬೆಳಗ್ಗೆ 7ಗಂಟೆ ಗೆ ಆರಂಭಗೊಂಡ ಪಂಪಿಂಗ್ ಕಾರ್ಯ ನಿರಂತರವಾಗಿ ಸಂಜೆವರೆಗೂ ಮುಂದುವರೆದಿದೆ. ಸಾಮಾನ್ಯವಾಗಿ ಒಂದು ಗಂಟೆಗೆ 10.75ಲಕ್ಷ ಲೀಟರ್ ನೀರನ್ನು ಪಂಪ್ ಮಾಡಲಾಗುತ್ತದೆ. ಮುಂದೆ ಅದು ಫಿಲ್ಟರ್ ಆಗಿ ಮಣಿಪಾಲ ಶುದ್ದೀರಣ ಘಟಕಕ್ಕೆ ಸರಬರಾಜಾಗುತ್ತದೆ.

ಇಂದು ನಿಗದಿಪಡಿಸಿದ ಪ್ರದೇಶಗಳ ಪೈಕಿ ಕೆಲವು ಕಡೆಗಳಿಗೆ ನೀರು ಬಾರದ ಬಗ್ಗೆ ನಗರಸಭೆಗೆ ಒಟ್ಟು ಎಂಟು ದೂರುಗಳು ಬಂದಿದ್ದು, ಆ ಹಿನ್ನೆಲೆಯಲ್ಲಿ ಮಲ್ಪೆ, ಕಲ್ಸಂಕ, ಗುಂಡಿಬೈಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಯಿತು. ಈ ಪ್ರದೇಶಗಳಿಗೆ ಉಡುಪಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್, ಪೌರಾಯುಕ್ತ ಆನಂದ ಕಲ್ಲೋಳಿಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಸದ್ಯ ಸ್ವರ್ಣ ನದಿಯಲ್ಲಿ ಮೂರು ವಾರಗಳಿಗೆ ಬೇಕಾದಷ್ಟು ನೀರಿನ ಸಂಗ್ರಹ ವಿದ್ದು, ಪ್ರತಿದಿನ 9-10 ಎಂಎಲ್‌ಡಿ ನೀರು ಲಿಫ್ಟ್ ಮಾಡಲಾಗು ತ್ತಿದೆ. ಜೂನ್ ತಿಂಗಳ ಆರಂಭದಲ್ಲಿ ಮಳೆಗಾಲ ಪ್ರಾರಂಭವಾಗುವುದು ವಾಡಿಕೆ. ಒಂದು ವೇಳೆ ಮಳೆ ಬಾರದಿದ್ದರೆ ಜೂನ್ ಮೊದಲ ವಾರಕ್ಕೆ ಬೇಕಾದಷ್ಟು ನೀರಿನ ಸಂಗ್ರಹವನ್ನು ಇರಿಸಿಕೊಳ್ಳಲಾಗಿದೆ. ಟ್ಯಾಂಕರ್ ನೀರಿಗೆ ನಗರಸಭೆ ಹಾಗೂ ಜಿಲ್ಲಾಧಿಕಾರಿ ನಿಧಿಯಿಂದ ಹಣವನ್ನು ಬಳಕೆ ಮಾಡಲಾಗುತ್ತಿದೆ’
-ಸಂತೋಷ್ ಕುಮಾರ್, ಯೋಜನಾ ನಿರ್ದೇಶಕ, ನಗರಾಭಿವೃದ್ಧಿ ಕೋಶ, ಉಡುಪಿ.

ನೀರು ಪೂರೈಸುವ ಪ್ರದೇಶ
ಉಡುಪಿ ನಗರಸಭೆ ವ್ಯಾಪ್ತಿಯ ಕಲ್ಮಾಡಿ, ಬಂಕೇರಕಟ್ಟ, ಪಡುಕೆರೆ, ಶಾಂತಿನಗರ, ಕಲ್ಮಾಡಿ ಚರ್ಚ್ ಹಿಂಬದಿ, ಕೊಡವೂರು, ಕಾನಂಗಿ, ಕೊಡ ವೂರು ಮೂಡಬೆಟ್ಟು ರಸ್ತೆ, ಬಾಪುತೋಟ, ಶಸಿತೋಟ, ಮಲ್ಪೆ ಸೆಂಟ್ರಲ್, ಕೊಳ, ನೇರ್ಗಿ, ವಡಭಾಂಡೇಶ್ವರ, ಮಲ್ಪೆ ಬೀಚ್, ಪಾಳೆಕಟ್ಟೆ, ಕಾನಂಗಿ, ಚಿನ್ನಂಗಡಿ, ಹೆಬ್ಬಾರ್ ಮಾರ್ಗ, ಕೊಡವೂರು ಪೇಟೆ ಪ್ರದೇಶಗಳಿಗೆ ಮೇ 14 ರಂದು ನೀರು ಸರಬರಾಜು ಮಾಡಲಾಗುವುದು ಎಂದು ಪೌರಾಯುಕ್ತ ಆನಂದ ಕಲ್ಲೋಳಿಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X