Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಳೆಗಾಗಿ ಸಾಮೂಹಿಕ ಪ್ರಾರ್ಥನೆ: ಶಾಸಕ...

ಮಳೆಗಾಗಿ ಸಾಮೂಹಿಕ ಪ್ರಾರ್ಥನೆ: ಶಾಸಕ ಕಾಮತ್

ವಾರ್ತಾಭಾರತಿವಾರ್ತಾಭಾರತಿ13 May 2019 10:09 PM IST
share
ಮಳೆಗಾಗಿ ಸಾಮೂಹಿಕ ಪ್ರಾರ್ಥನೆ: ಶಾಸಕ ಕಾಮತ್

ಮಂಗಳೂರು, ಮೇ 13: ಎಲ್ಲ ಜಾತಿ, ಮತ, ಧರ್ಮದ ನಾಗರಿಕರು ಮೇ 15ರಂದು ತಮ್ಮ ಶ್ರದ್ಧಾ ಕೇಂದ್ರ, ಧಾರ್ಮಿಕ ಕೇಂದ್ರಗಳಲ್ಲಿ ಮಳೆಗಾಗಿ ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಮಂಗಳೂರಿನ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಮಂಗಳೂರಿನಲ್ಲಿ ನೀರಿನ ಕೊರತೆ ಉಂಟಾಗಿದೆ. ಈ ಸಂದರ್ಭ ನಾವೆಲ್ಲರೂ ಪರಸ್ಪರರ ಒಳಿತಿಗಾಗಿ, ಶುದ್ಧ ಅಂತಃಕರಣಪೂರ್ವಕವಾಗಿ ದೇವರನ್ನು ಪ್ರಾರ್ಥಿಸಿದರೆ ಅದರಿಂದ ಖಂಡಿತ ಒಳ್ಳೆಯದಾಗುತ್ತದೆ. ನೀರು ಪ್ರತಿಯೊಂದು ಜೀವಿಗೂ ಅತ್ಯವಶ್ಯಕವಾಗಿದೆ. ಮನುಷ್ಯನಿಗೆ ಮಾತ್ರವಲ್ಲ, ಪ್ರಾಣಿ, ಪಕ್ಷಿಗಳಿಗೂ ಬೇಕು. ಎಲ್ಲರೂ ಸೇರಿ ದೇವಸ್ಥಾನ, ಚರ್ಚು, ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ ಮಂಗಳೂರಿಗೆ ಬಂದಿರುವ ಈ ಸಂಕಟವನ್ನು ಪರಿಹರಿಸಲು ಬೇಡೋಣ ಎಂದು ಹೇಳಿಕೆಯಲ್ಲಿ ತಿಳಿಸಿದರು.

ಆಯಾ ಶ್ರದ್ಧಾ ಕೇಂದ್ರಗಳ ಪ್ರಮುಖರು, ಆಡಳಿತ ಮಂಡಳಿಗಳು, ಟ್ರಸ್ಟಿಗಳು, ಧರ್ಮಗುರುಗಳು ಬುಧವಾರ ಒಂದು ನಿರ್ದಿಷ್ಟ ಸಮಯವನ್ನು ಹೊಂದಿಸಿ ಆ ಪರಿಸರದ ನಾಗರಿಕರನ್ನು ಕರೆಸಿ ಸಾಮೂಹಿಕವಾಗಿ ಊರಿನ, ನಾಡಿನ ನೀರಿನ ಕೊರತೆಯನ್ನು ಬಗೆಹರಿಸಲು ಮಳೆಗಾಗಿ ಪ್ರಾರ್ಥಿಸೋಣ. ಎಲ್ಲರ ಪ್ರಾರ್ಥನೆ ಫಲಿಸಿ ಶೀಘ್ರದಲ್ಲಿ ಮಳೆ ಬಂದು ನಮ್ಮ ತೊಂದರೆಗಳು ಬಗೆಹರಿಯಬಹುದು ಎಂದು ಶಾಸಕ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.

ಮಂಗಳಾದೇವಿ ದೇವಸ್ಥಾನ, ಕದ್ರಿ ಮಂಜುನಾಥ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ಕಂಕನಾಡಿ ಗರೋಡಿ, ಕುಡುಪು ದೇವಸ್ಥಾನ, ಗಣಪತಿ ದೇವಸ್ಥಾನ ಉರ್ವಸ್ಟೋರ್, ಉರ್ವ ಮಾರಿಗುಡಿ ದೇವಸ್ಥಾನ, ಮುಖ್ಯಪ್ರಾಣ ದೇವಸ್ಥಾನ ಬೋಳಾರ, ಪಂಚಲಿಂಗೇಶ್ವರ ದೇವಸ್ಥಾನ ಪಾಂಡೇಶ್ವರ, ರಥಬೀದಿ ವೆಂಕಟರಮಣ ದೇವಸ್ಥಾನ, ಡೊಂಗರಕೇರಿ ವೆಂಕಟರಮಣ ದೇವಸ್ಥಾನ, ಮುಖ್ಯಪ್ರಾಣ ದೇವಸ್ಥಾನ ಬಜಿಲ್ ಕೇರಿ, ಕಾಳಿಕಾಂಬ ದೇವಸ್ಥಾನ, ಶರವು ಮಹಾಗಣಪತಿ ದೇವಸ್ಥಾನ, ಕಾವು ಪಂಚಲಿಂಗೇಶ್ವರ ದೇವಸ್ಥಾನ, ಮರೋಳಿ ಸೂರ್ಯನಾರಾಯಣ ದೇವಸ್ಥಾನ, ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರ, ಕಾತ್ಯಾಯಿನಿ ಮಠ ರಥಬೀದಿ ಇಲ್ಲೆಲ್ಲ ಪ್ರಮುಖರನ್ನು ಸೇರಿಸಿ ವಿಶೇಷವಾದ ಪ್ರಾರ್ಥನೆ ಮತ್ತು ಪೂಜೆಯನ್ನು ಸಲ್ಲಿಸಲಿದ್ದಾರೆ ಎಂದರು.

ಅದೇರೀತಿ ತಮ್ಮ ಶ್ರದ್ಧಾಕೇಂದ್ರಗಳಲ್ಲಿ ಮುಸ್ಲಿಮರು ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಸಲಿದ್ದಾರೆ. ಅದರೊಂದಿಗೆ ಕ್ರೈಸ್ತ ಕೂಡ ಮಳೆಗಾಗಿ ವಿಶೇಷವಾಗಿ ಪ್ರಾರ್ಥನೆಯನ್ನು ಸಲ್ಲಿಸಲಿದ್ದಾರೆ. ಮಂಗಳೂರಿನ ಜನತೆ ಈ ವಿಶೇಷ ಪ್ರಾರ್ಥನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೇವರಲ್ಲಿ ಭಕ್ತಿಯಿಂದ ಪ್ರಾರ್ಥಿಸಿ, ಪೂಜೆ ಪುನಸ್ಕಾರ ಮಾಡಿ, ಎಲ್ಲ ಜಾತಿ, ಮತ, ಧರ್ಮದವರು ಒಟ್ಟಾಗಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಶಾಸಕ ಕಾಮತ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X