ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕ ಮೃತ್ಯು
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಸಂತೋಷ್(27) ಎಂದು ಗುರುತಿಸಲಾಗಿದೆ.
ಈತ ತನ್ನ ಗೆಳೆಯರೊಂದಿಗೆ ಬೈಕಿನಲ್ಲಿ ಧರ್ಮಸ್ಥಳಕ್ಕೆ ಬಂದಿದ್ದು, ಗೆಳೆಯರೆಲ್ಲರೂ ಒಟ್ಟಾಗಿ ನೇತ್ರಾವತಿ ಹಳೆ ಸೇತುವೆಯ ಸಮೀಪ ಸ್ನಾನಕ್ಕೆ ಇಳಿದಿದ್ದರು ಈ ವೇಳೆಗೆ ಆತ ಕಾಲುಜಾರಿ ನೀರಿನ ಗುಂಡಿಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story