Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಗುಜರಾತಿ ಯುವಕನ ಅದ್ಧೂರಿ ವಿವಾಹಕ್ಕೆ...

ಈ ಗುಜರಾತಿ ಯುವಕನ ಅದ್ಧೂರಿ ವಿವಾಹಕ್ಕೆ ವಧು ಇಲ್ಲ...!

ಆದರೆ ಹೃದಯಸ್ಪರ್ಶಿ ಕಥೆ ಇದೆ

ವಾರ್ತಾಭಾರತಿವಾರ್ತಾಭಾರತಿ14 May 2019 9:43 AM IST
share
ಈ ಗುಜರಾತಿ ಯುವಕನ ಅದ್ಧೂರಿ ವಿವಾಹಕ್ಕೆ ವಧು ಇಲ್ಲ...!

ಅಹ್ಮದಾಬಾದ್: ಎಲ್ಲ ಗುಜರಾತಿ ವಿವಾಹಗಳಂತೆಯೇ ಈ ವಿವಾಹ ಕೂಡಾ ಅದ್ಧೂರಿಯಿಂದ ನಡೆಯಿತು. ಚಿನ್ನದ ಬಣ್ಣದ ಶೆರ್ವಾನಿ ತೊಟ್ಟು, ನೇರಳೆ ರುಮಾಲು ಸುತ್ತಿದ್ದ ಯುವಕ ಕುದುರೆ ಮೇಲೆ ಮೆರವಣಿಗೆ ನಡೆಸಿದ. ಕೆಂಪು- ಬಿಳಿ ಗುಲಾಬಿ ಮಾಲೆ ಧರಿಸಿದ್ದ. ಅದ್ಧೂರಿ ಮೆರವಣಿಗೆ ನಡೆಸಿದ.

ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತರ ನೃತ್ಯ ಮೆರವಣಿಗೆಗೆ ಉತ್ಸಾಹ ನೀಡಿತ್ತು. ಒಂದು ದಿನ ಮೊದಲು ಮೆಹಂದಿ ಹಾಗೂ ಸಂಗೀತ ಸಂಜೆ ಹೀಗೆ ಸಂಪ್ರದಾಯದಂತೆ ಎಲ್ಲವೂ ನಡೆಯಿತು. ಆದರೆ ಅಲ್ಲಿ ವಧು ಮಾತ್ರ ಇರಲಿಲ್ಲ !

ವಿಶೇಷ ಅಗತ್ಯತೆಯ ಯುವಕ ಅಜಯ್ ಬಾರೋಟ್ (27)ನ ಈ ವಿಶೇಷ ವಿವಾಹ ನಡೆದದ್ದು, ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯ ಹಿಮ್ಮತ್‌ನಗರ ಎಂಬಲ್ಲಿ. ಪ್ರತಿ ವಿವಾಹದಲ್ಲಿ ಪಾಲ್ಗೊಳ್ಳುವಾಗ ಕೂಡಾ ತನ್ನ ವಿವಾಹದ ಬಗ್ಗೆ ಆತ ಕುತೂಹಲದಿಂದ ಕೇಳುತ್ತಿದ್ದ ಎಂದು ಕುಟುಂಬದವರು ವಿವರಿಸಿದರು.
ಔಪಚಾರಿಕ ಶಿಕ್ಷಣ ಪಡೆಯದ ಅಜಯ್‌ಗೆ ವಧು ಹುಡುಕುವುದು ಸುಲಭವಲ್ಲ ಎನ್ನುವುದು ಪೋಷಕರಿಗೆ ತಿಳಿದಿತ್ತು. ಆತನ ತಂದೆ ವಿಷ್ಣುಭಾಯಿ ಬಾರೋಟ್ ಗುಜರಾತ್ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ.

"ಕಲಿಕಾ ವೈಕಲ್ಯಕ್ಕಾಗಿ ಮಗನಿಗೆ ಚಿಕಿತ್ಸೆ ನೀಡಲಾಗಿದೆ. ಚಿಕ್ಕವನಿದ್ದಾಗಲೇ ಆತ ತಾಯಿಯನ್ನು ಕಳೆದುಕೊಂಡ. ಇತರ ಯುವಕರ ವಿವಾಹ ಮೆರವಣಿಗೆ ಆತನಿಗೆ ಸಂತೋಷದ ವಿಚಾರ. ತನ್ನ ವಿವಾಹದ ಬಗ್ಗೆ ಸದಾ ಪ್ರಶ್ನಿಸುತ್ತಿದ್ದ. ಅತನಿಗೆ ಸಂಗಾತಿಯನ್ನು ಹುಡುಗಲು ಸಾಧ್ಯವಿಲ್ಲ ಎಂಬ ಕಾರಣದಿಂದ ಆತನ ಪ್ರಶ್ನೆಗೆ ಉತ್ತರಿಸಲು ನಮಗೆ ಸಾಧ್ಯವಾಗುತ್ತಿರಲಿಲ್ಲ" ಎಂದು ವಿಷ್ಣುಭಾಯ್ ವಿವರಿಸಿದರು.

"ಆತನ ವಿವಾಹದ ಕನಸು ನನಸಾಗಿಸುವ ಉದ್ದೇಶದಿಂದ ಕುಟುಂಬದ ಸದಸ್ಯರ ಜತೆ ಮಾತನಾಡಿ, ವಿವಾಹ ಮೆರವಣಿಗೆ ಆಯೋಜಿಸುವ ನಿರ್ಧಾರಕ್ಕೆ ಬಂದೆವು. ಸಮಾಜ ಏನು ಹೇಳುತ್ತದೆ ಎಂಬ ಬಗ್ಗೆ ಚಿಂತಿಸದೇ ವಿವಾಹ ಮೆರವಣಿಗೆ ಏರ್ಪಡಿಸುವ ಮೂಲಕ ಮಗನ ಬಯಕೆ ಈಡೇರಿಸಿದ ತೃಪ್ತಿ ನನಗಿದೆ" ಸುಮಾರು 800 ಮಂದಿಗೆ ಸಮುದಾಯ ಭವನದಲ್ಲಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಒಟ್ಟು 2 ಲಕ್ಷ ರೂಪಾಯಿಯನ್ನು ಈ ವಿಶೇಷ ವಿವಾಹಕ್ಕೆ ವ್ಯಯಿಸಲಾಗಿದೆ ಎಂದು ಹೇಳಿದರು.

ಅಜಯ್‌ಗೆ ಸಂಗೀತ, ನೃತ್ಯದಲ್ಲಿ ವಿಶೇಷ ಆಸಕ್ತಿ ಎಂದು ಚಿಕ್ಕಪ್ಪ ಕಮಲೇಶ್ ವಿವರಿಸಿದರು. "ಗ್ರಾಮದಲ್ಲಿ ನಡೆಯುವ ಯಾವ ವಿವಾಹವನ್ನೂ ಆತ ತಪ್ಪಿಸಿಕೊಳ್ಳುವುದಿಲ್ಲ. ಕಳೆದ ಫೆಬ್ರುವರಿಯಲ್ಲಿ ನನ್ನ ಮಗನ ವಿವಾಹದಲ್ಲಿ ಪಾಲ್ಗೊಂಡ ಬಳಿಕ ತನ್ನ ವಿವಾಹದ ಬಗ್ಗೆ ಪ್ರಶ್ನಿಸುತ್ತಿದ್ದ. ನನ್ನ ಸಹೋದರ ಈ ಯೋಚನೆಯೊಂದಿಗೆ ಬಂದಾಗ ಅದನ್ನು ಬೆಂಬಲಿಸಿದೆವು" ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X