Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಯಿಘರ್ ಮುಸ್ಲಿಮರ ಮೇಲಿನ ದಾಳಿಯ ಕುರಿತು...

ಉಯಿಘರ್ ಮುಸ್ಲಿಮರ ಮೇಲಿನ ದಾಳಿಯ ಕುರಿತು ಮೌನ ಮುರಿಯಿರಿ: ಇ. ಅಬೂಬಕರ್

ವಾರ್ತಾಭಾರತಿವಾರ್ತಾಭಾರತಿ14 May 2019 3:00 PM IST
share
ಉಯಿಘರ್ ಮುಸ್ಲಿಮರ ಮೇಲಿನ ದಾಳಿಯ ಕುರಿತು ಮೌನ ಮುರಿಯಿರಿ: ಇ. ಅಬೂಬಕರ್

ಹೊಸದಿಲ್ಲಿ: ಚೀನಾದೊಳಗೆ ತುರ್ಕಿಸ್ತಾನಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಚೀನಾ ಸರಕಾರದಿಂದ ನಡೆಯುತ್ತಿರುವ ಬಹಿರಂಗ ಅನ್ಯಾಯ ಸೇರಿದಂತೆ ಮಾನವ ಹಕ್ಕು ಉಲ್ಲಂಘನೆಯ ಕುರಿತಂತೆ ತಮ್ಮ ಮೌನ ಮುರಿಯಬೇಕೆಂದು ಅಂತಾರಾಷ್ಟ್ರೀಯ ‌ನಾಯಕರು, ಮಾನವ ಹಕ್ಕು ಸಂಘಟನೆಗಳು ಮತ್ತು ‌ಜಾಗತಿಕ ಮುಸ್ಲಿಮ್ ‌ಸಮುದಾಯದೊಡನೆ ಪಾಪ್ಯುಲರ್ ಫ್ರಂಟ್ ಅಫ್ ‌ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಇ. ಅಬೂಬಕ್ಕರ್ ಮನವಿ ಮಾಡಿದ್ದಾರೆ.

ಮತೀಯ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ, ಅದರಲ್ಲೂ ಪೂರ್ವ ತುರ್ಕಿಸ್ತಾನದ ಉಯಿಘರ್ ಮುಸ್ಲಿಮರ ಜನಾಂಗೀಯ ಶುದ್ಧೀಕರಣ ನಡೆಸುವ ಪ್ರಯತ್ನವನ್ನು  ಚೀನಾ ಸರಕಾರವು ವ್ಯವಸ್ಥಿತವಾಗಿ ನಡೆಸುತ್ತಿರುವ ಕುರಿತು ಚೀನಾದಿಂದ ದೊರಕುತ್ತಿರುವ ವರದಿಗಳು ಬೆಚ್ಚಿ ಬೀಳಿಸುವಂಥದ್ದಾಗಿದೆ. ಇಲ್ಲಿ ಜನರು ಸ್ವಾತಂತ್ರ್ಯವಿಲ್ಲದೆ, ಹಕ್ಕು ನಿರಾಕರಿಸಲ್ಪಟ್ಟು ಜೀವಿಸಲು ನಿರ್ಬಂಧಿತರಾಗಿದ್ದು, ಇಸ್ಲಾಮಿನ ಕನಿಷ್ಠ ಆಚರಣೆಗಳಾದ ಸಲಾಮ್ ಹೇಳುವುದು, ಮಾತೃ ಭಾಷೆಯಲ್ಲಿ ಮಾತನಾಡುವುದು ಮತ್ತು ಮದ್ಯ ನಿರಾಕರಿಸುವುದು ಕಂಡು ಬಂದಲ್ಲಿ ಅವರನ್ನು ಕಾರಾಗೃಹ ಕೇಂದ್ರಗಳಿಗೆ ಕಳುಹಿಸಲಾಗುತ್ತಿದೆ. ವರದಿಗಳ ಪ್ರಕಾರ, ಸುಮಾರು 20 ಲಕ್ಷ ಮಂದಿಯನ್ನು ಇಂತಹ ಶಿಬಿರಗಳಿಗೆ ಕಳುಹಿಸಲಾಗಿದ್ದು, ಇದು ನಾಝಿಗಳ ಜನಾಂಗೀಯ ಶುದ್ಧೀಕರಣದ ಶಿಬಿರಗಳನ್ನು ನೆನಪಿಸುವಂತಿದೆ ಎಂದರು.

ವೃತ್ತಿಪರ ತರಬೇತಿ ಕೇಂದ್ರ ಎಂದು ಹೇಳಿಕೊಳ್ಳುತ್ತಿರುವ  ಚೀನಾ ಸರಕಾರದ ಈ ಕೇಂದ್ರಗಳಲ್ಲಿ ಬಂಧನಕ್ಕೊಳಗಾದವರು ಅಮಾನವೀಯ ಚಿತ್ರಹಿಂಸೆಗೆ ಒಳಗಾಗುತ್ತಾರೆ ಮತ್ತು ಅವರಿಗೆ  ಕ್ರೂರ ಉಪದೇಶಗಳನ್ನು ನೀಡಲಾಗುತ್ತದೆ. ಆದರೆ  ಶಿಬಿರಾರ್ಥಿಗಳ ಬಗ್ಗೆ ಮಾಧ್ಯಮಗಳಿಗೆ ಅಥವಾ ಅವರ ಕುಟುಂಬಸ್ಥರಿಗೆ ಯಾವುದೇ ಮಾಹಿತಿಗಳನ್ನು ನೀಡಲಾಗುವುದಿಲ್ಲ ಮತ್ತು  ಬಂಧಿತರು ಮೃತರಾದರೆ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಕೂಡ ನಿಷೇಧಿಸಲಾಗಿದೆ. ಚೀನಾದ ಒತ್ತಡಕ್ಕೆ ಒಳಗಾಗಿರುವ ನೆರೆಯ ಮುಸ್ಲಿಂ ರಾಷ್ಟ್ರಗಳ ನಾಯಕರು ಸೇರಿದಂತೆ ವಿಶ್ವ ನಾಯಕರು ಪ್ರಸಕ್ತ ವಿಷಯದ ಬಗ್ಗೆ ಮೌನವಾಗಿದ್ದಾರೆ. ಉಯಿಘರ್ ಮುಸ್ಲಿಮರ ಮೇಲೆ ನಡೆಯುತ್ತಿರುವ ಕ್ರೌರ್ಯ ವಿಚಾರದಲ್ಲಿ ಚೀನಾದ ವಿರುದ್ಧ ಯಾವುದೇ ನಿರ್ಬಂಧಗಳನ್ನು ವಿಧಿಸಲು ಅಮೆರಿಕ ಮತ್ತು ಅದರ ಪಾಶ್ಚಿಮಾತ್ಯ ಮಿತ್ರರು ನಿರಾಸಕ್ತಿ ತೋರುತ್ತಿದ್ದಾರೆ. ಇತರ ದೇಶಗಳ ಮುಸ್ಲಿಮರ ಸೌಭಾಗ್ಯಗಳ ಕುರಿತು ಸದಾ ಮಾತನಾಡುವ ಪಾಕಿಸ್ತಾನ ಕೂಡ ಈ ವಿಚಾರದಲ್ಲಿ ಚೀನಾ ಸರಕಾರಕ್ಕೆ ಒತ್ತಡ ಹೇರದೆ ಮೌನಪರಾಧ ತಾಳಿರುವುದು ವಿಪರ್ಯಾಸವಾಗಿದೆ. ಮಾನವ ಹಕ್ಕು ಮತ್ತು ಸ್ವಾತಂತ್ರ್ಯವನ್ನು  ಗೌರವಿಸುವ ಜಗತ್ತಿನ ಪ್ರತಿಯೊಬ್ಬರೂ ಚೀನಾದ ಸರಕಾರವು ಅಲ್ಪಸಂಖ್ಯಾತ ಸಮುದಾಯದ ಮೇಲೆ ನಡೆಸುತ್ತಿರುವ ಅಮಾನವೀಯ ಕ್ರೌರ್ಯವನ್ನು ಖಂಡಿಸಬೇಕು ಮತ್ತು ಚೀನಾ ಸರಕಾರವು ದೌರ್ಜನ್ಯವನ್ನು ನಿಲ್ಲಿಸುವಂತೆ ಒತ್ತಡ ಹೇರಲು ತಮ್ಮ ತಮ್ಮ ದೇಶದ ಸರಕಾರಗಳನ್ನು ಒತ್ತಾಯಿಸಬೇಕು ಎಂದು ಪಾಪ್ಯುಲರ್ ಫ್ರಂಟ್ ವಿಶ್ವದ ನಾಗರಿಕರಿಗೆ ಕರೆ ನೀಡುತ್ತದೆ.

ಇದೇ ವೇಳೆ ಭಾರತದಲ್ಲಿ ರಾಜಕೀಯ ಎಡಪಕ್ಷಗಳು ಮತ್ತು ನಾಗರಿಕ ಸ್ವಾತಂತ್ರ್ಯದ ಹೋರಾಟಗಾರರು ಎಂದು ಕರೆಸಿಕೊಳ್ಳುವವರು ಚೀನಾ ಸರಕಾರದ ಕ್ರೌರ್ಯ ಬಗ್ಗೆ ತನಗಿರುವ ಮೌನವನ್ನು ಪಾಪ್ಯುಲರ್ ಫ್ರಂಟ್ ಚೆಯರ್ ಮ್ಯಾನ್ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X