Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನದ ಪಠ್ಯಪುಸ್ತಕಗಳಲ್ಲಿ ಇನ್ನು...

ರಾಜಸ್ಥಾನದ ಪಠ್ಯಪುಸ್ತಕಗಳಲ್ಲಿ ಇನ್ನು ಮುಂದೆ ಸಾವರ್ಕರ್ ‘ವೀರ ಕ್ರಾಂತಿಕಾರಿ'ಯಲ್ಲ

ಬ್ರಿಟಿಷರಿಗೆ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯ ಮಾಹಿತಿ ಪಠ್ಯಕ್ಕೆ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ14 May 2019 5:45 PM IST
share
ರಾಜಸ್ಥಾನದ ಪಠ್ಯಪುಸ್ತಕಗಳಲ್ಲಿ ಇನ್ನು ಮುಂದೆ ಸಾವರ್ಕರ್ ‘ವೀರ ಕ್ರಾಂತಿಕಾರಿಯಲ್ಲ

ಜೈಪುರ್, ಮೇ 14: ವಸುಂಧರಾ ರಾಜೇ ನೇತೃತ್ವದ ಬಿಜೆಪಿ ಆಡಳಿತಾವಧಿಯಲ್ಲಿ ರಾಜಸ್ಥಾನ ಪಠ್ಯಪುಸ್ತಕ ಮಂಡಳಿಯು ಪಠ್ಯಪುಸ್ತಕಗಳಲ್ಲಿ ಮಾಡಿದ್ದ ಕೆಲ ಮಾರ್ಪಾಟುಗಳನ್ನು ವಾಪಸ್ ಪಡೆಯಲು ಈಗಿನ ಕಾಂಗ್ರೆಸ್ ಸರಕಾರ ನಿರ್ಧರಿಸಿದೆ. ಅದರಂತೆ  ಆರೆಸ್ಸೆಸ್ ನಾಯಕ ‘ವಿನಾಯಕ್ ಸಾವರ್ಕರ್ ವೀರ ಕ್ರಾಂತಿಕಾರಿ' ಎಂಬ ಉಲ್ಲೇಖವನ್ನು ತೆಗೆದು ಸಾವರ್ಕರ್ ಬ್ರಿಟಿಷರಿಗೆ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯ ಮಾಹಿತಿ ನೀಡಲಾಗುವುದು.

ಹತ್ತನೇ ತರಗತಿಯ ಭಾರತದ ಸ್ವಾತಂತ್ರ್ಯ ಸಂಗ್ರಾಮ ಅಧ್ಯಾಯದಲ್ಲಿ ಸಾವರ್ಕರ್ ಕುರಿತ ಮಾಹಿತಿಯಿದೆ. ವಸುಂಧರಾ ರಾಜೆ ಆಡಳಿತಾವಧಿಯಲ್ಲಿ ಪಠ್ಯದಲ್ಲಿ ಮಾರ್ಪಾಡು ಮಾಡಿ, “ಸಾವರ್ಕರ್ ಒಬ್ಬ ವೀರ ಕ್ರಾಂತಿಕಾರಿಯಾಗಿದ್ದರು ಹಾಗೂ ಎರಡು ಜೀವಾವಧಿ ಶಿಕ್ಷೆಗೆ ಒಳಗಾಗಿದ್ದರು. ವಿಭಜನೆ ತಪ್ಪಿಸಲು ಅವಿರತ ಶ್ರಮ ಪಟ್ಟಿದ್ದರು'' ಎಂದು ಬಣ್ಣಿಸಿ ನೆಹರೂ ಅವರನ್ನು ಕಡೆಗಣಿಸಲಾಗಿತ್ತು.

ಮಹಾತ್ಮ ಗಾಂಧಿ ಹತ್ಯೆ ಹಾಗೂ 2002ರ ಗುಜರಾತ್ ಹತ್ಯಾಕಾಂಡದ ಬಗ್ಗೆಯೂ ಪಠ್ಯಪುಸ್ತಕಗಳಲ್ಲಿ ಉಲ್ಲೇಖವಿರಲಿಲ್ಲ. ಮೋದಿ ಸರಕಾರದ ಅಮಾನ್ಯೀಕರಣ ನೀತಿ, ಸರ್ಜಿಕಲ್ ಸ್ಟ್ರೈಕ್ ಗಳ ಬಗ್ಗೆಯೂ ಪಠ್ಯಪುಸ್ತಕಗಳಲ್ಲಿ ಉಲ್ಲೇಖವಿತ್ತಲ್ಲದೆ ಅವುಗಳನ್ನು ಐತಿಹಾಸಿಕ ಎಂದೂ ವರ್ಣಿಸಲಾಗಿತ್ತು.

ಕಳೆದ ವರ್ಷದ ಡಿಸೆಂಬರ್ ನಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಕಾಂಗ್ರೆಸ್ ಸರಕಾರ ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮಿತಿಯನ್ನು ರಚಿಸಿತ್ತು. ಇದೀಗ ಈ ಸಮಿತಿ ಸಾವರ್ಕರ್ ಕುರಿತಾದ ಮಾಹಿತಿಗಳನ್ನು ಪರಿಷ್ಕರಿಸುವಂತೆ ಹೇಳಿದೆ.

 ಈ ಕುರಿತಂತೆ ಸೋಮವಾರ ಮಾಹಿತಿ ನೀಡಿದ ರಾಜ್ಯ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ದೊತಸರ, ಹಿಂದಿನ ಸರಕಾರ ಶಿಕ್ಷಣ ಕ್ಷೇತ್ರವನ್ನು ಆರೆಸ್ಸೆಸ್ ಪ್ರಯೋಗಶಾಲೆಯನ್ನಾಗಿಸಿತ್ತು ಹಾಗೂ ಸಾವರ್ಕರ್, ದೀನ್ ದಯಾಳ್ ಉಪಾಧ್ಯಾಯ ಅವರಂತಹವರನ್ನು ವೈಭವೀಕರಿಸಿತ್ತು ಎಂದು ಆರೋಪಿಸಿದರು.

ಆದರೆ ಈಗಿನ ಸರಕಾರದ ಕ್ರಮ ಹಿಂದುತ್ವ ವಿರೋಧಿ ಎಂದು ಮಾಜಿ ಶಿಕ್ಷಣ ಸಚಿವ ವಸುದೇವ್ ದೇವ್ನಾನಿ ದೂರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X