Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಾಂಡವಪುರ: ವಿಶಿಷ್ಠ ರೀತಿಯಲ್ಲಿ ವಿಶ್ವ...

ಪಾಂಡವಪುರ: ವಿಶಿಷ್ಠ ರೀತಿಯಲ್ಲಿ ವಿಶ್ವ ತಾಯಂದಿರ ದಿನಾಚರಣೆ; ಹಿರಿಯರಿಗೆ ಸನ್ಮಾನ

'ಸಾರ್ಥಕ ಬದುಕು' ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 May 2019 10:34 PM IST
share
ಪಾಂಡವಪುರ: ವಿಶಿಷ್ಠ ರೀತಿಯಲ್ಲಿ ವಿಶ್ವ ತಾಯಂದಿರ ದಿನಾಚರಣೆ; ಹಿರಿಯರಿಗೆ ಸನ್ಮಾನ

ಪಾಂಡವಪುರ, ಮೇ 14: ತಾಲೂಕಿನ ಮಹದೇಶ್ವರಪುರ ಗ್ರಾಮದಲ್ಲಿ ದಿ.ಬೆಟ್ಟಮ್ಮ ಹಾಗೂ ಗಿರಿಗೌಡರ ಕುಟುಂಬಸ್ಥರು 'ಸಾರ್ಥಕ ಬದುಕು' ಕಾರ್ಯಕ್ರಮದ ಮೂಲಕ ವಿಶ್ವ ತಾಯಂದಿರ ದಿನವನ್ನು ಬಹಳ ವಿಶಿಷ್ಠವಾಗಿ ಆಚರಿಸಿದರು.

ಐದು ತಲೆಮಾರಿನ ಸದಸ್ಯರಾದ ಅಜ್ಜ-ಅಜ್ಜಿ, ಅಪ್ಪ-ಅಮ್ಮ, ದೊಡ್ಡಪ್ಪ-ದೊಡ್ಡಮ್ಮ, ಚಿಕ್ಕಮ್ಮ-ಚಿಕ್ಕಪ್ಪ, ಮಕ್ಕಳು-ಮೊಮ್ಮಕ್ಕಳ, ಮರಿ ಮಕ್ಕಳು ಸೇರಿ ಸುಮಾರು 150ಕ್ಕೂ ಹೆಚ್ಚು ಒಂದೇ ಕುಟುಂಬದ ಸದಸ್ಯರು ಒಟ್ಟಿಗೆ ಸಾರ್ಥಕ ಬದುಕು ನಡೆಸುತ್ತಿದ್ದಾರೆ. ಅದರಲ್ಲಿ ಕೆಲವರು ಮಾತ್ರ ಉನ್ನತ ವಿದ್ಯಾಭ್ಯಾಸ, ಉದ್ಯೋಗ, ವ್ಯವಹಾರಕ್ಕಾಗಿ ಬೇರೆ ಬೇರೆ ಸ್ಥಳಗಳಲ್ಲಿ ಇದ್ದಾರೆ. ಆದರೆ, ಅವರೆಲ್ಲರೂ ರಜಾದಿನಗಳಲ್ಲಿ, ಹಬ್ಬ ಹರಿದಿನಗಳಲ್ಲಿ, ಶುಭ-ಸಂದರ್ಭಗಳಲ್ಲಿ ಒಟ್ಟಾಗಿ ಮನೆಯಲ್ಲಿ ಇರುತ್ತಾರೆ.

ವಿಶ್ವ ತಾಯಂದಿರ ದಿನವಾದ ರವಿವಾರದಂದು ಕುಟುಂಬದ ಸದಸ್ಯರೆಲ್ಲರೂ ಒಗ್ಗೂಡಿ 'ಸಾರ್ಥಕ ಬದುಕು' ಕಾರ್ಯಕ್ರಮದ ಮೂಲಕ ಬನ್ನಿ ಹಿರಿಯರನ್ನು ಗೌರವಿಸೋಣ ಎಂಬ ಸಂದೇಶ ನೀಡುವ ಮೂಲಕ ವಿನೂತನ ಹಾಗೂ ವಿಶೇಷ ಕಾರ್ಯಕ್ರಮ ಆಚರಿಸಿ ಸಮಾಜಕ್ಕೆ ಒಂದು ಒಳ್ಳೆಯ ಸಂದೇಶ ನೀಡುವಲ್ಲಿ ಯಶಸ್ವಿಯಾದರು. ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ತಾವು ಕಿರಿಯರು, ಹಿರಿಯರೆನ್ನದೇ ವೇದಿಕೆಯೇರಿ ವಿವಿಧ ಗೀತೆಗಳಿಗೆ ನೃತ್ಯ ಪ್ರದರ್ಶನ ಮಾಡುವ ಮೂಲಕ ಕುಣಿದು ಕುಪ್ಪಳಿಸಿದರು.

ದಿ.ಬೆಟ್ಟಮ್ಮ-ಗಿರಿಗೌಡರ ಜನ್ಮದಿನವನ್ನು ತಮ್ಮ ಗ್ರಾಮದ ಹಬ್ಬದಂತೆ ಆಚರಿಸಿ ಸಂಭ್ರಮಿಸಿದರು. ಗಿರಿಗೌಡರ ಇಬ್ಬರು ಸೊಸೆಯಂದಿರಾದ ಜವರಮ್ಮ (96), ಪುಟ್ಟಮ್ಮ (93) ಅವರನ್ನು ಅತ್ಯಂತ ಗೌರವದಿಂದ ಕುಟುಂಬ ಸದಸ್ಯರು ಅಭಿನಂದಿಸಿದರು. ಜತೆಗೆ ಮಳವಳ್ಳಿ ತಾಲೂಕಿನಲ್ಲಿ ಗಿಡ-ಮರಗಳನ್ನು ಬೆಳೆಸಿ, ಕೆರೆ-ಕಟ್ಟೆ ಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಿರುವ 'ಆಧುನಿಕ ಭಗಿರಥ' ಎಂದೇ ಕರೆಯಲ್ಪಡುವ ಕಲ್ಮನೆ ಕಾಮೇಗೌಡರನ್ನೂ ಸನ್ಮಾನಿಸಿ ಅಭಿನಂದಿಸಲಾಯಿತು.

ಗ್ರಾಮದ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿದ ಕುಟುಂಬ ಸದಸ್ಯರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಸಾರ್ಥಕ ಬದುಕು ನಡೆಸಿದ ಕೆಲವು ಹಿರಿಯನ್ನು ಗೌರವಿಸಿ, ಸಾಧನೆ ಮಾಡಿದ ಕಿರಿಯರಿಗೆ ಗೌರವ ಸಲ್ಲಿಸಿದರು. ನಂತರ, ನೃತ್ಯ, ನಾಟಕ ಪ್ರದರ್ಶನ ನಡೆಯಿತು.

ಬಳಿಕ ದಿ.ಬೆಟ್ಟಮ್ಮ-ಗಿರಿಗೌಡರ ಸಾರ್ಥಕ ಬದುಕು ನಡೆಸಿದ ಅವಿಭಕ್ತ ಕುಟುಂಬದ ಸದಸ್ಯರ ಮಾಹಿತಿಯುಳ್ಳ 30 ನಿಮಿಷದ ಕಿರುಚಿತ್ರವೊಂದನ್ನು ಎಲ್‍ಇಡಿ ಪರದೆ ಮೂಲಕ ಪ್ರದರ್ಶಿಸಲಾಯಿತು. ಅಲ್ಲದೇ ಸುತ್ತಮುತ್ತಲ ಗ್ರಾಮದಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನೂ ಗೌರವಿಸಲಾಯಿತು.

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಪರಿಸರ ಪ್ರೇಮಿ ಮಳವಳ್ಳಿ ತಾಲೂಕಿನ ಕಲ್ಮನೆ ಕಾಮೇಗೌಡ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X