Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಣದಲ್ಲಿರುವ ಪ್ರತಿ ಐವರು...

ಕಣದಲ್ಲಿರುವ ಪ್ರತಿ ಐವರು ಅಭ್ಯರ್ಥಿಗಳಲ್ಲಿ ಓರ್ವನ ವಿರುದ್ಧ ಕ್ರಿಮಿನಲ್ ಪ್ರಕರಣ!

ಲೋಕಸಭಾ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ14 May 2019 10:34 PM IST
share
ಕಣದಲ್ಲಿರುವ ಪ್ರತಿ ಐವರು ಅಭ್ಯರ್ಥಿಗಳಲ್ಲಿ ಓರ್ವನ ವಿರುದ್ಧ ಕ್ರಿಮಿನಲ್ ಪ್ರಕರಣ!

ಹೊಸದಿಲ್ಲಿ,ಮೇ 14: 2019ರ ಲೋಕಸಭಾ ಚುನಾವಣಾ ಕಣದಲ್ಲಿರುವ ಸುಮಾರು 8,000 ಅಭ್ಯರ್ಥಿಗಳ ಪೈಕಿ ಸುಮಾರು ಶೇ.10ರಷ್ಟು ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಬಾಕಿಯಿವೆ ಎಂದು ಘೋಷಿಸಿಕೊಂಡಿದ್ದಾರೆ. ಅಂದರೆ ಪ್ರತಿ ಐವರು ಅಭ್ಯರ್ಥಿಗಳ ಪೈಕಿ ಓರ್ವರು ಕ್ರಿಮಿನಲ್ ಪ್ರಕರಣಗಳ ಸರದಾರರಾಗಿದ್ದಾರೆ.

ಶೇ.29ರಷ್ಟು ಅಭ್ಯರ್ಥಿಗಳು ಒಂದು ಕೋಟಿ ರೂ.ಮತ್ತು ಅದಕ್ಕೂ ಹೆಚ್ಚಿನ ವೌಲ್ಯದ ಆಸ್ತಿಗಳನ್ನು ಹೊಂದಿದ್ದಾರೆ. ಚುನಾವಣೆಗಳ ಮೇಲೆ ನಿಗಾಯಿರಿಸಿರುವ ಅಸೋಸಿಯೇಷನನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ಸೋಮವಾರ ಬಿಡುಗಡೆಗೊಳಿಸಿರುವ ವರದಿಯು ಇದನ್ನು ಬೆಟ್ಟು ಮಾಡಿದೆ. ಚುನಾವಣಾ ಆಯೋಗಕ್ಕೆ ಅಭ್ಯರ್ಥಿಗಳು ಸಲ್ಲಿಸಿರುವ ಅಫಿಡವಿಟ್‌ಗಳ ವಿಶ್ಲೇಷಣೆಯ ಆಧಾರದಲ್ಲಿ ಈ ವರದಿಯನ್ನು ಸಿದ್ಧಗೊಳಿಸಲಾಗಿದೆ.

   ಸತತ ಎರಡನೇ ಸಾರ್ವತ್ರಿಕ ಚುನಾವಣೆಯಲ್ಲಿ ಈ ಅಂಕಿಸಂಖ್ಯೆಗಳು ಏರಿಕೆಯನ್ನು ಕಂಡಿವೆ. 2009ರ ಚುನಾವಣೆಯಲ್ಲಿ ಕ್ರಿಮಿನಲ್ ಪ್ರಕರಣವನ್ನು ಹೊಂದಿದ್ದ ಅಭ್ಯರ್ಥಿಗಳ ಪ್ರಮಾಣ ಶೇ.15ರಷ್ಟಿದ್ದರೆ 2019ರಲ್ಲಿ ಅದು ಶೇ.4ರಷ್ಟು ಏರಿಕೆಯನ್ನು ಕಂಡಿದೆ. ಇದೇ ರೀತಿ ಕೋಟ್ಯಧಿಪತಿ ಅಭ್ಯರ್ಥಿಗಳ ಪ್ರಮಾಣ ಶೇ.13ರಷ್ಟಿದ್ದುದು ಶೇ.16ರಷ್ಟು ಏರಿಕೆಯನ್ನು ದಾಖಲಿಸಿದೆ.

 ಹಾಗೆಂದು ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿರುವ ಎಲ್ಲ ಅಭ್ಯರ್ಥಿಗಳೂ ಗಂಭೀರ ಸ್ವರೂಪದ ಆರೋಪಗಳನ್ನು ಹೊಂದಿಲ್ಲ. 1070(ಒಟ್ಟು ಅಭ್ಯರ್ಥಿಗಳ ಶೇ.13) ಅಭ್ಯರ್ಥಿಗಳು ತಮ್ಮ ವಿರುದ್ಧ ಗಂಭೀರ ಸ್ವರೂಪದ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ. ಇವು ಕೊಲೆ,ಕೊಲೆ ಯತ್ನ,ಅಪಹರಣ,ಅತ್ಯಾಚಾರ ಮತ್ತು ಮಹಿಳೆಯರ ವಿರುದ್ಧ ಇತರ ಅಪರಾಧಗಳಿಗೆ ಸಂಬಂಧಿಸಿವೆ. ಅಂದ ಹಾಗೆ ಚುನಾವಣೆಯಿಂದ ಚುನಾವಣೆಗೆ ತಮ್ಮ ವಿರುದ್ಧ ಗಂಭೀರ ಪ್ರಕರಣಗಳನ್ನು ಹೊಂದಿರುವ ಅಭ್ಯರ್ಥಿಗಳ ಸಂಖ್ಯೆಯೂ ಹೆಚ್ಚಾಗಿದೆ.

55 ಪ್ರಕರಣಗಳು ಕೊಲೆ,184 ಪ್ರಕರಣಗಳು ಕೊಲೆ ಯತ್ನ,126 ಪ್ರಕರಣಗಳು ಮಹಿಳೆಯರ ವಿರುದ್ಧ ಅಪರಾಧ(ಅತ್ಯಾಚಾರ ಸೇರಿದಂತೆ),47 ಪ್ರಕರಣಗಳು ಅಪಹರಣ ಮತ್ತು 95 ಪ್ರಕರಣಗಳು ದ್ವೇಷ ಭಾಷಣಕ್ಕೆ ಸಂಬಂಧಿಸಿವೆ.

 ಕ್ರಿಮಿನಲ್ ಪ್ರಕರಣಗಳಿರುವ ಅಭ್ಯರ್ಥಿಗಳಲ್ಲಿ ದೊಡ್ಡ ಪಾಲು ಪ್ರಮುಖ ರಾಜಕೀಯ ಪಕ್ಷಗಳು ಹೊಂದಿವೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಪ್ರತಿ ಹತ್ತರಲ್ಲಿ ನಾಲ್ವರು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ. ಏಳು ರಾಷ್ಟ್ರೀಯ ಪಕ್ಷಗಳ ಪೈಕಿ ಸಿಪಿಎಂ ಇಂತಹ ಅಭ್ಯರ್ಥಿಗಳ ಅತ್ಯಂತ ಹೆಚ್ಚಿನ ಪಾಲು(ಶೇ.58) ಹೊಂದಿದ್ದರೆ ಬಿಎಸ್‌ಪಿ ಅತ್ಯಂತ ಕಡಿಮೆ(ಶೇ.22) ಅಭ್ಯರ್ಥಿಗಳನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X