Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಟ್ ಏರ್‌ವೇಸ್‌ನ ಸಿಇಒ,ಇತರ ಮೂವರ...

ಜೆಟ್ ಏರ್‌ವೇಸ್‌ನ ಸಿಇಒ,ಇತರ ಮೂವರ ರಾಜೀನಾಮೆ

24 ಗಂಟೆಗಳಲ್ಲಿ ಕಂಪನಿಗೆ ಗುಡ್‌ಬೈ ಹೇಳಿದ ನಾಲ್ವರು ಹಿರಿಯ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ14 May 2019 11:14 PM IST
share
ಜೆಟ್ ಏರ್‌ವೇಸ್‌ನ ಸಿಇಒ,ಇತರ ಮೂವರ ರಾಜೀನಾಮೆ

 ಹೊಸದಿಲ್ಲಿ,ಮೇ 14: ಸಾಲದ ಸುಳಿಯಲ್ಲಿ ಸಿಲುಕಿ ತನ್ನ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಜೆಟ್ ಏರ್‌ವೇಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ(ಸಿಇಒ) ವಿನಯ ದುಬೆ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಮಂಗಳವಾರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು,ಇದರ ಬೆನ್ನಿಗೇ ಅದರ ಚೀಫ್ ಪೀಪಲ್ ಆಫೀಸರ್ ರಾಹುಲ್ ತನೇಜಾ ಕೂಡ ಹುದ್ದೆಯನ್ನು ತೊರೆದಿದ್ದಾರೆ.

ತನ್ಮಧ್ಯೆ ಕಂಪನಿ ಕಾರ್ಯದರ್ಶಿ ಹಾಗೂ ಮುಖ್ಯ ಅನುಸರಣೆ ಅಧಿಕಾರಿ ಕುಲದೀಪ್ ಶರ್ಮಾ ಕೂಡ ರಾಜೀನಾಮೆ ಸಲ್ಲಿಸಿದ್ದಾರೆಂದು ಜೆಟ್ ಏರ್‌ವೇಸ್ ಶೇರು ವಿನಿಮಯ ಕೇಂದ್ರಗಳಿಗೆ ತಿಳಿಸಿದೆ. ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಅಮಿತ್ ಅಗರವಾಲ್ ಅವರೂ ರಾಜೀನಾಮೆ ಸಲ್ಲಿಸಿದ್ದು, ಮೇ 13ರಿಂದಲೇ ಅನ್ವಯಗೊಂಡಿದೆ ಎಂದು ಕಂಪನಿಯು ಮಂಗಳವಾರ ಬೆಳಿಗ್ಗೆ ತಿಳಿಸಿತ್ತು. ಇದರೊಂದಿಗ  ಕಳೆದ 24 ಗಂಟೆಗಳಲ್ಲಿ ಕಂಪನಿಯ ನಾಲ್ವರು ಹಿರಿಯ ಅಧಿಕಾರಿಗಳು ಹುದ್ದೆಗೆ ಕೈಮುಗಿದಿದ್ದಾರೆ. 1.2 ಶತಕೋಟಿ ಡಾ.ಸಾಲವನ್ನು ತೀರಿಸಲು ಹೆಣಗಾಡುತ್ತಿರುವ ಜೆಟ್ ಏರ್‌ವೇಸ್ ಕಳೆದ ತಿಂಗಳು ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿತ್ತು.

 ದುಬೆ ಅವರು ಜೆಟ್ ಏರ್‌ವೇಸ್‌ನ್ನು ಆಗಸ್ಟ್2017ರಲ್ಲಿ,ತನೇಜಾ ಫೆಬ್ರುವರಿ 2016ರಲ್ಲಿ,ಶರ್ಮಾ ಜನವರಿ 2015ರಲ್ಲಿ ಮತ್ತು ಅಗರವಾಲ್ ಕೂಡ 2015ರಲ್ಲಿ ಸೇರಿದ್ದರು. ತನ್ಮಧ್ಯೆ ಹುದ್ದೆಗಳನ್ನು ತೊರೆದಿರುವ ನಾಲ್ವರು ಅಧಿಕಾರಿಗಳ ಬದಲಿ ನೇಮಕಗಳ ಬಗ್ಗೆ ಕಂಪನಿಯು ಉಲ್ಲೇಖಿಸಿಲ್ಲ.

ದುಬೆ ಅವರು ಜೆಟ್‌ಗೆ ಸೇರುವ ಮುನ್ನ 30 ವರ್ಷಗಳ ಕಾಲ ಅಮೆರಿಕ,ಯುರೋಪ್ ಮತ್ತು ಏಷ್ಯಾಗಳಲ್ಲಿ ಡೆಲ್ಟಾ ಏರ್‌ಲೈನ್ಸ್,ಸೇಬ್ರ್ ಮತ್ತು ಅಮೆರಿಕನ್ ಏರ್‌ಲೈನ್ಸ್‌ಗಳಲ್ಲಿ ಸೇವೆ ಸಲ್ಲಿಸಿದ್ದರು.

  ಜೆಟ್ ಏರ್‌ವೇಸ್‌ನ್ನು ಸ್ವಾಧೀನ ಪಡಿಸಿಕೊಂಡಿರುವ ಸಾಲದಾತ ಬ್ಯಾಂಕುಗಳು ತಮ್ಮ ಬಾಕಿಯನ್ನು ವಸೂಲುಮಾಡಲು ಕಂಪನಿಯನ್ನು ಮಾರಾಟ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿವೆಯಾದರೂ ಅದು ನಿರೀಕ್ಷಿತ ಫಲವನ್ನು ನೀಡಿಲ್ಲ. ಪಾಲು ಬಂಡವಾಳದ ಖರೀದಿಗೆ ಆಸಕ್ತ ಕಂಪನಿಗಳು ಬಿಡ್‌ಗಳನ್ನು ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿದ್ದು,ಇತಿಹಾದ್ ಸೇರಿದಂತೆ ನಾಲ್ಕು ಕಂಪನಿಗಳು ಬಿಡ್‌ಗಳನ್ನು ಸಲ್ಲಿಸಿವೆ.

 ತನ್ಮಧ್ಯೆ ರಾಷ್ಟ್ರೀಯ ಶೇರು ವಿನಿಮಯ ಕೇಂದ್ರ(ಎನ್‌ಎಸ್‌ಇ)ದಲ್ಲಿ ಜೆಟ್ ಏರ್‌ವೇಸ್‌ನ ಶೇರು ಶೇ.7.33ರಷ್ಟು ಕುಸಿತ ದಾಖಲಿಸಿದ್ದು,128.90 ರೂ.ಗೆ ಮುಕ್ತಾಯಗೊಂಡಿದೆೆ. ಸಂಸ್ಥೆಯ ಸ್ಥಾಪಕ ಹಾಗೂ ಅಧ್ಯಕ್ಷ ನರೇಶ ಗೋಯಲ್ ಅವರು ಕಳೆದ ಮಾರ್ಚ್‌ನಲ್ಲಿ ಪತ್ನಿ ಅನಿತಾ ಗೋಯಲ್ ಜೊತೆ ಜೆಟ್ ಆಡಳಿತ ಮಂಡಳಿಗೆ ರಾಜೀನಾಮೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X