Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಬೆಳೆಗಾರರು, ರೈತರಿಗೆ ಇನ್ನೂ...

ಮಡಿಕೇರಿ: ಬೆಳೆಗಾರರು, ರೈತರಿಗೆ ಇನ್ನೂ ದೊರೆತಿಲ್ಲ ಮಳೆಹಾನಿ ಪರಿಹಾರ; ಆರೋಪ, ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ14 May 2019 11:22 PM IST
share
ಮಡಿಕೇರಿ: ಬೆಳೆಗಾರರು, ರೈತರಿಗೆ ಇನ್ನೂ ದೊರೆತಿಲ್ಲ ಮಳೆಹಾನಿ ಪರಿಹಾರ; ಆರೋಪ, ಪ್ರತಿಭಟನೆಯ ಎಚ್ಚರಿಕೆ

ಮಡಿಕೇರಿ ಮೇ 14 : ಕಳೆದ ವರ್ಷ ಸುರಿದ ಮಹಾಮಳೆಯಿಂದಾಗಿ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿಯಾಗಿದೆ. ಇದರಿಂದಾಗಿ ಬೆಳೆಗಾರರು ತೀವ್ರ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಆದರೆ ಇದುವರೆಗೆ ಸಂತ್ರಸ್ತ ಬೆಳೆಗಾರರಿಗೆ ಸಮರ್ಪಕವಾಗಿ ಮಳೆಹಾನಿ ಪರಿಹಾರ ವಿತರಿಸಿಲ್ಲವೆಂದು ತೀವ್ರ  ಅಸಮಾಧಾನ ವ್ಯಕ್ತಪಡಿಸಿರುವ ರೈತಪರ ಹಾಗೂ ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳು ಪರಿಹಾರ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. 

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಅವರ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರನ್ನು ಭೇಟಿ ಮಾಡಿದ ಪದಾಧಿಕಾರಿಗಳು, ಭೂಕುಸಿತ, ಪ್ರವಾಹದಿಂದ ಕಾಫಿ ತೋಟ. ಏಲಕ್ಕಿ ತೋಟ, ಭತ್ತದ ಗದ್ದೆಗಳನ್ನು ಕಳೆದುಕೊಂಡವರಿಗೆ ಪರಿಹಾರ ಹಾಗೂ  ಬದಲಿ ಜಾಗ ನೀಡಬೇಕು. ಮನೆ ಕಳೆದುಕೊಂಡವರಿಗೆ ಮನೆಗಳನ್ನು ಕೂಡಲೆ ನಿರ್ಮಿಸಿಕೊಡಬೇಕು. ಏಲಕ್ಕಿ, ಕಾಫಿ ತೋಟಗಳಲ್ಲಿ ಬಿದ್ದಿರುವ ಮರಗಳನ್ನು ತೋಟದ ಮಾಲಕರು ತೆರವುಗೊಳಿಸಲು ಅರಣ್ಯ ಇಲಾಖೆ ಅನುಮತಿ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. 

ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಕಳೆದ ವರ್ಷ ಸುರಿದ ಮಹಾಮಳೆಯಿಂದ ಸೋಮವಾರಪೇಟೆ ತಾಲೂಕಿನಲ್ಲಿ ಕಾಫಿ, ಏಲಕ್ಕಿ, ಕರಿಮೆಣಸು, ಕಿತ್ತಳೆ, ಭತ್ತ ಮುಂತಾದ ಬೆಳೆ ಶೇಕಡ 70ರಿಂದ 80ರಷ್ಟು ಹಾನಿಯಾಗಿದೆ. ಆದರೆ ಇದುವರೆಗೂ ಸಮರ್ಪಕವಾದ ಪರಿಹಾರ ಸಿಕ್ಕಿಲ್ಲ. ಬೆರಳಣಿಕೆ ಮಂದಿಗೆ ಒಂದೆರಡು ಸಾವಿರ ಪರಿಹಾರ ನೀಡಲಾಗಿದೆ. ಇಂತಹ ಅವೈಜ್ಞಾನಿಕ ಪರಿಹಾರದಿಂದ ರೈತಾಪಿ ವರ್ಗಕ್ಕೆ ಪ್ರಯೋಜನವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಕೂಡಲೇ ಸಂತ್ರಸ್ತ ಬೆಳೆಗಾರರಿಗೆ ಸಮರ್ಪಕವಾದ ಪರಿಹಾರವನ್ನು ವಿತರಿಸಬೇಕು. ತಪ್ಪಿದಲ್ಲಿ ಮೇ 23 ರ ಬಳಿಕ ಬೆಳೆಗಾರರನ್ನು ಒಗ್ಗೂಡಿಸಿ ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು. 

ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬೋಪಣ್ಣ, ಉಪಾಧ್ಯಕ್ಷ ಕೆ.ಪಿ.ಬಸಪ್ಪ, ಕಾಫಿ ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಎಂ.ಸಿ.ಮುದ್ದಪ್ಪ, ಬೆಳೆಗಾರರ ಸಂಘದ ಉಪಾಧ್ಯಕ್ಷ ಬಿ.ಎಂ.ಲವ, ಪದಾಧಿಕಾರಿಗಳಾದ ಸೋಮಶೇಖರ್, ಲಕ್ಷ್ಮಣ್, ರಾಮಚಂದ್ರ, ದಿನೇಶ್, ಕುಶಾಲಪ್ಪ, ಸುರೇಶ್ ಮತ್ತಿತರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X