Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಡ್ವಾಣಿ ಕಣ್ಣುಗಳಲ್ಲಿ ನೀರು ತುಂಬಿತ್ತು,...

ಅಡ್ವಾಣಿ ಕಣ್ಣುಗಳಲ್ಲಿ ನೀರು ತುಂಬಿತ್ತು, ಆದರೆ ಅವರು ನನ್ನನ್ನು ತಡೆಯಲಿಲ್ಲ: ಶತ್ರುಘ್ನ ಸಿನ್ಹಾ

ವಾರ್ತಾಭಾರತಿವಾರ್ತಾಭಾರತಿ15 May 2019 5:12 PM IST
share
ಅಡ್ವಾಣಿ ಕಣ್ಣುಗಳಲ್ಲಿ ನೀರು ತುಂಬಿತ್ತು, ಆದರೆ ಅವರು ನನ್ನನ್ನು ತಡೆಯಲಿಲ್ಲ: ಶತ್ರುಘ್ನ ಸಿನ್ಹಾ

ಪಾಟ್ನಾ, ಮೇ 15: ತಾನು ಸರಿಯಾದ ದಿಕ್ಕಿನಲ್ಲಿ ಹಾಗೂ ಉತ್ತಮವಾದ ದಿಕ್ಕಿನಲ್ಲಿ ಸಾಗುತ್ತಿರುವುದಾಗಿ ಹಾಗೂ ಈ ನಿಟ್ಟಿನಲ್ಲಿ ತನಗೆ ಬಿಜೆಪಿಯ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಅವರ ಆಶೀರ್ವಾದವಿದೆ ಎಂದು ಬಿಜೆಪಿ ಜತೆಗಿನ ತಮ್ಮ 20 ವರ್ಷಗಳ ನಂಟು ಮುರಿದು ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಹಿರಿಯ ನಟ-ರಾಜಕಾರಣಿ ಶತ್ರುಘ್ನ ಸಿನ್ಹಾ ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

“ನಾನು ಒಂದು ಹೊಸ ಹಾಗೂ ಉತ್ತಮ ದಿಕ್ಕನ್ನು ಸೇರಿದಾಗ ಅಡ್ವಾಣಿ ಜಿ ಅವರ ಆಶೀರ್ವಾದ ಕೋರಿದ್ದೆ. ಅವರ ಕಣ್ಣುಗಳಲ್ಲಿ ನೀರಿತ್ತು ಆದರೆ ಹೋಗಬೇಡ ಎಂದು ಅವರು ಹೇಳಿಲ್ಲ,  ಸರಿ, ನಿನ್ನ ಮೇಲೆ ಪ್ರೀತಿಯಿದೆ ಎಂದು ಹೇಳಿದರು'' ಎಂದು ಸಿನ್ಹಾ ವಿವರಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ ಬಿಜೆಪಿ ಸೇರಿದ್ದ ಸಿನ್ಹಾ ಆಗಿನ ಕಾಲ ಮತ್ತು ಈಗಿನ ಕಾಲದ ನಡುವಿನ ವ್ಯತ್ಯಾಸದ ಬಗ್ಗೆ  ಹೇಳುತ್ತಾ ಅದು ಪ್ರಜಾಪ್ರಭುತ್ವ ಮತ್ತು ಸರ್ವಾಧಿಕಾರದ ನಡುವಿನ ವ್ಯತ್ಯಾಸವಿದ್ದಂತೆ ಎಂದರು. ಈಗಿನ ಬಿಜೆಪಿ ನಾಯಕತ್ವ ಪಕ್ಷದ ಹಿರಿಯರನ್ನು ಚೆನ್ನಾಗಿ ನೋಡಿಕೊಂಡಿಲ್ಲ ಎಂದು ಅಡ್ವಾಣಿ, ವಾಜಪೇಯಿ ಮುಂತಾದವರನ್ನು ಉಲ್ಲೇಖಿಸಿ ಸಿನ್ಹಾ ಹೇಳಿದರು.

“ಅವರಿಗೆ ನಾನು ಯಾವತ್ತೂ ತಲೆ ಬಾಗುವುದಿಲ್ಲ, ಅಡ್ವಾಣಿ ಜೀ ಅವರಂತೆ, ಅವರು ಕುಳಿತುಕೊಳ್ಳಲು ಹೇಳಿದರೆ ಕುಳಿತುಕೊಳ್ಳುವುದಿಲ್ಲ'' ಎಂದು ಸ್ಪಷ್ಟ ಪಡಿಸಿದರು.

ಬಾಲಕೋಟ್ ವಾಯುದಾಳಿ ಈ ಚುನಾವಣೆಯಲ್ಲಿ ಏನಾದರೂ ವ್ಯತ್ಯಾಸವುಂಟು ಮಾಡುವುದೇ ಎಂಬ ಪ್ರಶ್ನೆಗೆ “ಪ್ರತಿಯೊಬ್ಬ ಭಾರತೀಯ ರಾಷ್ಟ್ರವಾದಿ” ಎಂದರು. “ಆದರೆ ರಾಷ್ಟ್ರವಾದದ ವಿಚಾರವೆತ್ತಿ ಪ್ರಧಾನಿ ಪ್ರಶ್ನೆಗಳನ್ನು ದೂರ ಮಾಡುತ್ತಿದ್ದಾರೆ. ನಾವು ಉದ್ಯೋಗ ವಿಚಾರ ಎತ್ತಿದರೆ ಅವರು ಪುಲ್ವಾಮ ವಿಚಾರ ಮಾತನಾಡುತ್ತಾರೆ, ಜನರಿಗೆ ಬೇಕಾದ ಪ್ರಶ್ನೆಗಳಿಗೆ ಅವರೇಕೆ ಉತ್ತರಿಸುವುದಿಲ್ಲ ?, ಮತ ಎಣಿಕೆಯ ದಿನವಾದ ಮೇ 23ರ ನಂತರ ಅವರು ಪ್ರಧಾನಿಯಾಗಿ ಉಳಿಯುವುದಿಲ್ಲ, ಮಮತಾ ಬ್ಯಾನರ್ಜಿ ನನ್ನ ಸ್ನೇಹಿತೆಯಾಗಿದ್ದು ಮೋದಿ ಎಕ್ಸ್‍ಪೈರಿ ಪಿಎಂ ಎಂದು ಅವರು ಸರಿಯಾಗಿಯೇ ಹೇಳಿದ್ದಾರೆ.  ನಾನು ನನ್ನ ಚೀಲ ಎತ್ತಿಕೊಂಡು ಹೊರಟು ಹೋಗುತ್ತೇನೆ ಎಂದು ಅವರು ಹೇಳುತ್ತಿದ್ದರು. ಈಗ ಹಾಗೆ ಮಾಡುವ ಸಮಯ ಬಂದಿದೆ” ಎಂದರು ಸಿನ್ಹಾ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X