Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟೈಮ್ ಮ್ಯಾಗಝಿನ್ ನ ‘ಡಿವೈಡರ್ ಇನ್ ಚೀಫ್’...

ಟೈಮ್ ಮ್ಯಾಗಝಿನ್ ನ ‘ಡಿವೈಡರ್ ಇನ್ ಚೀಫ್’ ಲೇಖನದ ಬಗ್ಗೆ ಮೋದಿ ಪ್ರತಿಕ್ರಿಯೆ…

ವಾರ್ತಾಭಾರತಿವಾರ್ತಾಭಾರತಿ15 May 2019 8:48 PM IST
share
ಟೈಮ್ ಮ್ಯಾಗಝಿನ್ ನ ‘ಡಿವೈಡರ್ ಇನ್ ಚೀಫ್’ ಲೇಖನದ ಬಗ್ಗೆ ಮೋದಿ ಪ್ರತಿಕ್ರಿಯೆ…

ಹೊಸದಿಲ್ಲಿ,ಮೇ 15: ತನ್ನ ಚಿತ್ರವನ್ನು ಹೊಂದಿರುವ ಅಮೆರಿಕದ ಟೈಮ್ ನಿಯತಕಾಲಿಕದ ಮುಖಪುಟದ ಲೇಖನದ ಕುರಿತು ತನ್ನ ಮೌನವನ್ನು ಕೊನೆಗೂ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು,ತನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನಗಳನ್ನು ಮಾಡುವವರಿಗೇ ಅವು ತಿರುಗುಬಾಣಗಳಾಗಿ ಪರಿಣಮಿಸಿವೆ ಮತ್ತು ಅವರ ಸ್ವಂತ ವ್ಯಕ್ತಿತ್ವಗಳಿಗೆ ಹಾನಿಯನ್ನುಂಟು ಮಾಡಿವೆ ಎಂದು ಹೇಳಿದ್ದಾರೆ.

ಕಳೆದ 20 ವರ್ಷಗಳಿಂದಲೂ ತನ್ನ ವ್ಯಕ್ತಿತ್ವಕ್ಕೆ ಕಳಂಕ ಹಚ್ಚುವ ಪ್ರಯತ್ನಗಳು ನಡೆಯುತ್ತಲೇ ಇವೆ,ಆದರೆ ಅವರ ಪ್ರಯತ್ನಗಳೆಲ್ಲ ವಿಫಲಗೊಂಡಿವೆ. ತನಗೆ ಅವರ ಬಗ್ಗೆ ಮರುಕವೆನಿಸುತ್ತದೆ ಎಂದು ತನ್ನನ್ನು ಭಾರತದ ‘ಡಿವೈಡರ್ ಇನ್ ಚೀಫ್(ಮುಖ್ಯ ವಿಭಜನಕಾರ)’ ಎಂದು ಬಣ್ಣಿಸಿರುವ ಟೈಮ್ ರಕ್ಷಾಪುಟವನ್ನು ಪ್ರಸ್ತಾಪಿಸಿ ಮೋದಿ ಹೇಳಿದರು.

  ಪಾಟ್ನಾದಲ್ಲಿ ರ್ಯಾಲಿಯೊಂದರ ನೇಪಥ್ಯದಲ್ಲಿ ಆಂಗ್ಲ ಸುದ್ದಿವಾಹಿನಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು,ವಿಭಜನೆಯು ‘ಲಂಬವೋ ಅಥವಾ ಅಡ್ಡವೋ’ ಎನ್ನುವುದನ್ನು ತಿಳಿಯಬೇಕಾದ ಅಗತ್ಯವಿದೆ. ವಿಭಜನೆಯಿರುವುದು ಹೌದಾದರೆ ಇಂದು ಬಡವರೆಲ್ಲ ಧ್ರುವೀಕರಣಗೊಂಡಿದ್ದಾರೆ ಮತ್ತು ಮೋದಿ ಜೊತೆಗೆ ಗುರುತಿಸಿಕೊಂಡಿದ್ದಾರೆ. ಬಡವರು ತಮ್ಮ ಸ್ಥಿತಿಯನ್ನು,ಜೊತೆಗೆ ದೇಶದ ಸ್ಥಿತಿಯನ್ನೂ ಉತ್ತಮಗೊಳಿಸಲು ಬಯಸಿದ್ದರೆ ಅದರಲ್ಲಿ ಸಮಸ್ಯೆಯೇನಿದೆ? ಬಡವರು ಜಾತಿ,ಸಮುದಾಯದ ಶೃಂಖಲೆಗಳನ್ನು ಮುರಿದು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಮುಂದೆ ಬಂದರೆ ಜನರೇಕೆ ಅಸಮಾಧಾನಗೊಳ್ಳಬೇಕು ಎಂದು ಪ್ರಶ್ನಿಸಿದರು. ಬಡವರು ತಮ್ಮ ಮಕ್ಕಳ ಭವಿಷ್ಯದಲ್ಲಿ ದೇಶದ ಭವಿಷ್ಯವನ್ನು ಕಾಣುತ್ತಿದ್ದರೆ ನಾವು ಅದಕ್ಕಾಗಿ ಹೆಮ್ಮೆ ಪಟ್ಟುಕೊಳ್ಳಬೇಕು ಎಂದರು.

 ಕಳೆದ 70 ವರ್ಷಗಳಲ್ಲಿ ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗಿದ್ದವರು ಮುಸ್ಲಿಮರಲ್ಲಿ ಭೀತಿಯನ್ನು ಹುಟ್ಟಿಸಿದ್ದರು ಮತ್ತು ಅದರ ಹೊಣೆಯನ್ನು ವಿವಿಧ ವ್ಯಕ್ತಿಗಳಿಗೆ,ಸಂಘಟನೆಗಳಿಗೆ ವರ್ಗಾಯಿಸಿದ್ದರು ಎಂದ ಮೋದಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X