Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಜೆಯಲ್ಲಿ ಮುಂದುವರಿದ ಪಂಪಿಂಗ್ ಕಾರ್ಯ,...

ಬಜೆಯಲ್ಲಿ ಮುಂದುವರಿದ ಪಂಪಿಂಗ್ ಕಾರ್ಯ, ನೀರಿನ ಮಟ್ಟ ಅಲ್ಪ ಏರಿಕೆ

ವಾರ್ತಾಭಾರತಿವಾರ್ತಾಭಾರತಿ15 May 2019 9:53 PM IST
share
ಬಜೆಯಲ್ಲಿ ಮುಂದುವರಿದ ಪಂಪಿಂಗ್ ಕಾರ್ಯ, ನೀರಿನ ಮಟ್ಟ ಅಲ್ಪ ಏರಿಕೆ

ಉಡುಪಿ, ಮೇ 15: ನಗರಕ್ಕೆ ಕುಡಿಯುವ ನೀರನ್ನು ಒದಗಿಸುವ ಹಿರಿಯಡ್ಕ ಸಮೀಪದ ಬಜೆ ಅಣೆಕಟ್ಟಿನಲ್ಲಿ ನೀರಿನ ಪಂಪಿಂಗ್ ಕಾರ್ಯ ಇಂದು ಮುಂದು ವರಿದಿದೆ. ಶಿರೂರು ಅಣೆಕಟ್ಟು ಕಡೆಯಿಂದ ಡ್ರೆಡ್ಜಿಂಗ್ ನಡೆಸಿದ ಪರಿಣಾಮ ಹೊಂಡದಲ್ಲಿದ್ದ ನೀರು ಬಜೆ ಜಾಕ್‌ವೆಲ್‌ಗೆ ಹರಿದು ಬರುತಿದ್ದು, ಇದರಿಂದ ನೀರಿನ ಮಟ್ಟ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಮಂಗಳವಾರ ಬಜೆಯಲ್ಲಿ ನೀರಿನ ಮಟ್ಟ 1.80ಮೀ. ಇದ್ದಿದ್ದರೆ, ಇಂದು ಅದು 1.82ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ತಡವಾಗಿ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಈಗ ಬಜೆ ಅಣೆಕಟ್ಟಿನಲ್ಲಿ ಬಿರುಸಿನ ಕಾರ್ಯಾಚರಣೆಗೆ ಇಳಿದಿದ್ದಾರೆ.

ಒಂದೆಡೆ ನಗರಸಭೆಯಿಂದ ಪಂಪಿಂಗ್ ಪ್ರಕ್ರಿಯೆ ನಡೆಯುತಿದ್ದರೆ ಮತ್ತೊಂದು ಕಡೆ ಹಿಟಾಚಿ ಮೂಲಕ ಬಂಡೆಗಳನ್ನು ತೆರವುಗೊಳಿಸಿ ನೀರಿನ ಹರಿವನ್ನು ಸರಾಗಗೊಳಿಸಲಾಗುತ್ತಿದೆ. ಇನ್ನೊಂದು ಕಡೆ ನದಿಯ ಅಲ್ಲಲ್ಲಿ ದೊಡ್ಡ ದೊಡ್ಡ ಹಳ್ಳಗಳಲ್ಲಿ ತುಂಬಿರುವ ನೀರನ್ನು ಪಂಪ್ ಮಾಡಲಾಗುತ್ತಿದೆ.

ಕಳೆದ ಐದಾರು ದಿನಗಳಿಂದ ಉಡುಪಿ ಶಾಸಕರ ನೇತೃತ್ವದಲ್ಲಿ ಉಡುಪಿಯ ಸಾರ್ವಜನಿಕರು ಶ್ರಮದಾನದ ಮೂಲಕ ನದಿಯನ್ನು ಸ್ವಚ್ಛಗೊ ಳಿಸುವ, ಹೂಳೆತ್ತುವ, ನೀರಿನ ಹರಿವನ್ನು ಸುಗಮಗೊಳಿಸುವ ಕಾರ್ಯ ನಡೆಸಿದ್ದರು. ಇಂದು ಕೇವಲ ಅಧಿಕಾರಿಗಳು ಮಾತ್ರ ಕಾರ್ಮಿಕರ ನೆರವಿನಿಂದ ಈ ಕಾರ್ಯದಲ್ಲಿ ನಿರತರಾಗಿರುವುದು ಕಂಡುಬಂತು.

ಕಳೆದ ಐದಾರು ದಿನಗಳಿಂದ ಉಡುಪಿ ಶಾಸಕರ ನೇತೃತ್ವದಲ್ಲಿ ಉಡುಪಿಯ ಸಾರ್ವಜನಿಕರು ಶ್ರಮದಾನದ ಮೂಲಕ ನದಿಯನ್ನು ಸ್ವಚ್ಛಗೊ ಳಿಸುವ, ಹೂಳೆತ್ತುವ, ನೀರಿನ ಹರಿವನ್ನು ಸುಗಮಗೊಳಿಸುವ ಕಾರ್ಯ ನಡೆಸಿದ್ದರು. ಇಂದು ಕೇವಲ ಅಧಿಕಾರಿಗಳು ಮಾತ್ರ ಕಾರ್ಮಿಕರ ನೆರವಿನಿಂದ ಈ ಕಾರ್ಯದಲ್ಲಿ ನಿರತರಾಗಿರುವುದು ಕಂಡುಬಂತು. ಸುಮಾರು 4-5 ಮಂದಿ ಕಾರ್ಮಿಕರು, 2 ಟಿಪ್ಪರ್‌ಗಳು ಈ ಕೆಲಸದಲ್ಲಿ ತೊಡಗಿಕೊಂಡಿದ್ದವು. ಇಂದು ಸಹ ಪುತ್ತಿಗೆ, ಭಂಡಾರಿಬೆಟ್ಟು ಪರಿಸರ ಲ್ಲಿ ಪಂಪಿಂಗ್ ಕಾರ್ಯ ನಡೆಯುತ್ತಿದೆ.

ಗುರುವಾರ ನೀರು ಪೂರೈಕೆ ಪ್ರದೇಶ:   ಗುರುವಾರ ನಗರಸಭೆ ವತಿಯಿಂದ ಈಶ್ವರನಗರ, ನೆಹರೂ ನಗರ, ಸರಳೇಬೆಟ್ಟು, ಕೊಂಡಂಗೆ, ನರಸಿಂಗೆ, ವಿವೇಕಾನಂದ ನಗರ, ಶೇಷಾದ್ರಿ ನಗರ, ವಿ.ಪಿ. ನಗರ, ಇಂದ್ರಾಳಿ, ಗುಳ್ಮೆ, ರೈಲ್ವೇ ಗೋಡಾನ್ ರೋಡ್, ಮಂಚಿ ಶಾಲೆ ರಸ್ತೆ, ಹಯಗ್ರೀವ ನಗರ, ಲಕ್ಷ್ಮೀಂದ್ರ ನಗರ, ಸಗ್ರಿ, ಪೆರಂಪಳ್ಳಿ, ಅಂಬಡೆಬೆಟ್ಟು, ವಿ.ಎಂ. ನಗರ, ದೊಡ್ಡಣಗುಡ್ಡೆ ರೈಲ್ವೇ ಸೇತುವೆವರೆಗೆ, ಪೆರಂಪಳ್ಳಿ ರೈಲ್ವೇ ಸೇತುವೆವರೆಗೆ, ಆದಿಪರಾಶಕ್ತಿ ದೇವಸ್ಥಾನ ರಸ್ತೆ, ರುದ್ರಪ್ರಿಯ ನಗರ, ಪರ್ತ್ರಕರ್ತರ ಕಾಲನಿ, ವಿದ್ಯಾರತ್ನ ನಗರ, ಶೀಂಬ್ರ, ಮಣಿಪಾಲ ಸಿಟಿ, ಕುದ್ಮಲ್ ರಂಗರಾವ್ ನಗರ ಕೊಡಂಕೂರು, ನ್ಯೂ ಕೊಡಂಕೂರು, ಸಾಯಿಬಾಬ ನಗರ, ಮೂಡಬೆಟ್ಟು, ಆದಿ ಉಡುಪಿ, ಮುಖ್ಯಪ್ರಾಣ ನಗರ, ನಾಗೇಶ್‌ನಗರ, ಕುದ್ಮಲ್ ರಂಗರಾವ್ ನಗರ, ರಾಜೀವ್ ನಗರ.

ಮೇಲಿನ ಪ್ರದೇಶಗಳಿಗೆ ಗುರುವಾರ ನೀರು ಸರಬರಾಜು ಮಾಡಲಾಗುವುದು, ಈ ದಿನದಂದು ನೀರು ಸರಬರಾಜು ಆಗದೇ ಇರುವ ಮನೆಗಳ ದೂರನ್ನು ಪರಿಶೀಲಿಸಿ ಟ್ಯಾಂಕರ್‌ಗಳ ಮೂಲಕ ಮರುದಿನ ಆದ್ಯತೆ ಮೇರೆಗೆ ನೀರು ಸರಬರಾಜು ಮಾಡಲಾಗುವುದು.

ಮೇಲಿನ ಪ್ರದೇಶಗಳಿಗೆ ಗುರುವಾರ ನೀರು ಸರಬರಾಜು ಮಾಡಲಾಗುವುದು, ಈ ದಿನದಂದು ನೀರು ಸರಬರಾಜು ಆಗದೇ ಇರುವ ಮನೆಗಳ ದೂರನ್ನು ಪರಿಶೀಲಿಸಿ ಟ್ಯಾಂಕರ್‌ಗಳ ಮೂಲಕ ಮರುದಿನ ಆದ್ಯತೆ ಮೇರೆಗೆ ನೀರು ಸರಬರಾಜು ಮಾಡಲಾಗುವುದು. ಬೆಳಗ್ಗೆ ಅಗತ್ಯವಿರುವ ನೀರಿನ ಪ್ರಮಾಣ ಲಭ್ಯವಿಲ್ಲದಿದ್ದಲ್ಲಿ ಅಪರಾಹ್ನದ ಬಳಿಕ ನೀರು ಸರಬರಾಜು ಮಾಡಲಾಗುವುದು ಎಂದು ನಗರಸಭೆ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X