Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಬಾಲಕಿಯರೊಂದಿಗೆ ಮಾತನಾಡಿದ...

ಚಿಕ್ಕಮಗಳೂರು: ಬಾಲಕಿಯರೊಂದಿಗೆ ಮಾತನಾಡಿದ ಯುವಕರಿಬ್ಬರ ಮೇಲೆ ಹಲ್ಲೆ

ಐವರ ಬಂಧನ: ಎಸ್ಪಿ ಹರೀಶ್‌ಪಾಂಡೆ

ವಾರ್ತಾಭಾರತಿವಾರ್ತಾಭಾರತಿ15 May 2019 10:25 PM IST
share
ಚಿಕ್ಕಮಗಳೂರು: ಬಾಲಕಿಯರೊಂದಿಗೆ ಮಾತನಾಡಿದ ಯುವಕರಿಬ್ಬರ ಮೇಲೆ ಹಲ್ಲೆ

ಚಿಕ್ಕಮಗಳೂರು, ಮೇ 15: ನಗರದ ಗೌರಿ ಕಾಲುವೆ ನಿವಾಸಿಗಳಾಗಿರುವ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ಮಾತನಾಡಿದ ಯುವಕರಿಬ್ಬರ ಮೇಲೆ ಯುವಕರ ಗುಂಪೊಂದು ದಾಳಿ ನಡೆಸಿ ಥಳಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರೀಶ್‌ಪಾಂಡೆ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ಸಂಜೆ ನಗರದ ಗೌರಿ ಕಾಲುವೆ ನಿವಾಸಿಗಳಾದ ಇಬ್ಬರು ಬಾಲಕಿಯರನ್ನು ಅದೇ ಬಡಾವಣೆಯ ಇಬ್ಬರು ಯುವಕರು ಕಾರಿನಲ್ಲಿ ಕರೆದೊಯ್ದು ನಗರದ ಹೊರವಲಯದಲ್ಲಿರುವ ಗಾಲ್ಫ್ ಕ್ಲಬ್ ಹತ್ತಿರ ಮಾತನಾಡುತ್ತಿದ್ದರು ಎಂಬ ಕಾರಣಕ್ಕೆ ಒಂದು ಕೋಮಿನ ಯುವಕರು ಸೇರಿ ಯುವಕರೊಂದಿಗೆ ವಾಗ್ವಾದ ನಡೆಸಿದ್ದಲ್ಲದೇ ಹಿಡಿದು ಥಳಿಸಿದ್ದರು. ಇದರಿಂದ ಹೆದರಿದ ಯುವಕರು ಬಾಲಕಿಯರನ್ನು ಗೌರಿಕಾಲುವೆಯ ಅವರ ಮನೆಗೆ ಕಾರಿನಲ್ಲೇ ಕರೆತಂದು ಬಿಟ್ಟಿದ್ದಾರೆ. ಈ ವೇಳೆ ಯುವಕರನ್ನು ಮತ್ತೆ ಗೌರಿ ಕಾಲುವೆ ಬಡಾವಣೆಯಲ್ಲಿಯೇ ಅಡ್ಡಹಾಕಿ ಥಳಿಸಿದ ಹಲ್ಲೆಕೋರರು ಕಾರನ್ನು ಜಖಂಗೊಳಿಸಿದ್ದರು ಎಂದು ಎಸ್ಪಿ ತಿಳಿಸಿದರು.

ಸ್ಥಳದಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗುವ ಸಂಭವ ಇದ್ದ ಕಾರಣಕ್ಕೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಬಿಗಡಾಯಿಸಿದ್ದ ಪರಿಸ್ಥಿತಿಯನ್ನು ರಾತ್ರಿಯೇ ಹತೋಟಿಗೆ ತಂದಿದ್ದೇವೆ. ಮುಂಜಾಗ್ರತಾ ಕ್ರಮವಾಗಿ ನಗರಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ಎಂದು ಎಸ್ಪಿಹರೀಶ್ ಪಾಂಡೆ, ಹಲ್ಲೆಗೊಳಗಾದ ಯುವಕರಿಗೆ ಗಂಭೀರ ಗಾಯಗಳಾಗಿಲ್ಲ. ಓರ್ವನಿಗೆ ಬೆನ್ನಿಗೆ ಥಳಿಸಿದ ಬರೆಗಳು ಬಿದ್ದಿವೆ. ಮತ್ತೊಬ್ಬನಿಗೆ ಮುಖ ಊದಿಕೊಂಡಿದ್ದು, ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಪ್ರಕರಣದಲ್ಲಿದ್ದ ಬಾಲಕಿಯರು ಅಪ್ರಾಪ್ತರಾಗಿದ್ದಾರೆ. ಈ ಕಾರಣಕ್ಕೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎಂದ ಅವರು, ಯುವಕರ ಮೇಲೆ ಹಲ್ಲೆ ಮಾಡಿದವರ ಪೈಕಿ ಮತ್ತೊಂದು ಕೋಮಿನ 5 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅದರಲ್ಲಿ 3 ಮಂದಿ ವಯಸ್ಕರು, ಇಬ್ಬರು ಅಪ್ರಾಪ್ತರಾಗಿದ್ದಾರೆ. ಮೂವರನ್ನು ಪೊಲೀಸ್ ವಶಕ್ಕೆ ಪಡೆದು ಉಳಿದ ಇಬ್ಬರು ಅಪ್ರಾಪ್ತರನ್ನು ಬಾಲಮಂದಿರಕ್ಕೆ ಕಳುಹಿಸಿಕೊಡಲಾಗುವುದು. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದೆ. ಅವರನ್ನು ಶೀಘ್ರದಲ್ಲಿಯೇ ಬಂಧಿಸಿ ಕಠಿಣ ಕ್ರಮ ಜರಗಿಸಲಾಗುವುದು ಎಂದು ಎಸ್ಪಿ ಹರೀಶ್ ಪಾಂಡೆ ಹೇಳಿದರು.

ಜಿಲ್ಲೆಯಲ್ಲಿ ಅಪರಾಧ, ಅಪಘಾತ ಪ್ರಕರಣಗಳನ್ನು ಪತ್ತೆ ಹಚ್ಚಲು ಅನುಕೂಲವಾಗುವಂತೆ ಜಿಲ್ಲೆಯ ವಿವಿಧ 66 ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ ಯೋಜನೆ ರೂಪಿಸಲಾಗಿದೆ. ಈ ಪೈಕಿ ನಗರದ 28 ಸ್ಥಳಗಳಲ್ಲಿ ಒಂದು ತಿಂಗಳೊಳಗಾಗಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು. ನಗರದ ಪ್ರಮುಖ 6 ಸ್ಥಳಗಳಲ್ಲಿ ವಿಶೇಷವಾದ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಈ ಕ್ಯಾಮರಾಗಳು ವಾಹನಗಳ ನಂಬರ್ ಪ್ಲೇಟ್‌ಗಳಲ್ಲಿರುವ ಸಂಖ್ಯೆಗಳನ್ನು ಸುಲಭವಾಗಿ ಪತ್ತೆ ಹಚ್ಚಲಿವೆ.
- ಹರೀಶ್ ಪಾಂಡೆ, ಎಸ್ಪಿ

ಗಾಂಜಾ ಮಾರಾಟ ಜಾಲ ಪತ್ತೆಗೆ ತಂಡ: ಎಸ್ಪಿ
ನಗರದಲ್ಲಿ ಕೆಲವು ಚಿಲ್ಲರೆ ಗಾಂಜಾ ವ್ಯಾಪಾರಿಗಳು ಕಾರ್ಯಾಚರಣೆ ಮಾಡುತ್ತಿರುವ ಶಂಕೆ ಇದೆ. ನಗರಕ್ಕೆ ಗಾಂಜಾ ಪೂರೈಸುತ್ತಿರುವ ಸಗಟು ಗಾಂಜಾ ವ್ಯಾಪಾರಿಗಳನ್ನು ಪತ್ತೆ ಹಚ್ಚಲು ತಂಡ ರಚನೆ ಮಾಡಿ ಕ್ರಮಕೈಗೊಳ್ಳಲಾಗುವುದು. ಗೋಗಳ್ಳರ ಪತ್ತೆಗೆ ಜಿಲ್ಲೆಯಲ್ಲಿ ಈಗಾಗಲೇ ಪೊಲೀಸ್ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಅಕ್ರಮವಾಗಿ ಸಾಗಿಸುತ್ತಿದ್ದ 9 ಹಸುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಎಸ್ಪಿ ಹರೀಶ್ ಪಾಂಡೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X