Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ತಾ.ಪಂ. ಮಿನಿ ವಿಧಾನಸೌಧ: ಇನ್ನೂ...

ಬಂಟ್ವಾಳ ತಾ.ಪಂ. ಮಿನಿ ವಿಧಾನಸೌಧ: ಇನ್ನೂ ದುರಸ್ತಿಯಾಗದ ಲಿಫ್ಟ್, ಕೈಕೊಡುವ ಜನರೇಟರ್

ಕಚೇರಿಯತ್ತ ಬರುವ ಜನರಿಗೆ ಅಲೆದಾಟದ ಸಂಕಷ್ಟ !

ವಾರ್ತಾಭಾರತಿವಾರ್ತಾಭಾರತಿ15 May 2019 10:54 PM IST
share
ಬಂಟ್ವಾಳ ತಾ.ಪಂ. ಮಿನಿ ವಿಧಾನಸೌಧ: ಇನ್ನೂ ದುರಸ್ತಿಯಾಗದ ಲಿಫ್ಟ್, ಕೈಕೊಡುವ ಜನರೇಟರ್

ಬಂಟ್ವಾಳ, ಮೇ 15: ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಬಂಟ್ವಾಳ ತಾಲೂಕು ಪಂಚಾಯತ್‍ನ ಆಡಳಿತ ಕಚೇರಿಯು ಆಗಿರುವ ಮಿನಿವಿಧಾನ ಸೌಧ ಮೂಲ ಸೌಕರ್ಯ ಕೊರತೆಯಿಂದ ನಲುಗುತ್ತಿದ್ದು, ಇದರಿಂದ ಕಚೇರಿಯತ್ತ ಬರುವ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲಿ ನಿತ್ಯವೂ ಸಮಸ್ಯೆಯ ಆಗರವಾಗಿದೆ. 

2017ರ ಅಕ್ಟೋಬರ್ 22ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದ ಬಳಿಕ ಬಂಟ್ವಾಳ ಮಿನಿ ವಿಧಾನಸೌಧದ ಮೂಲ ಅವ್ಯವಸ್ಥೆಯ ಬಗ್ಗೆ ಈಗ ಕೇಳುವವರೇ ಇಲ್ಲದಂತಾಗಿದೆ. ವಿಧಾನಸೌಧದ ಮುಖ್ಯ ಆಕರ್ಷಣೆಯಾಗಿದ್ದ ಲಿಫ್ಟ್ ಒಂದು ತಿಂಗಳಿನಿಂದ ಕೆಟ್ಟುಹೋಗಿದೆ. ಇಡೀ ಮಿನಿ ವಿಧಾನಸೌಧ ನಿರ್ವಹಣೆಯ ಬ್ಯಾಟರಿ ಹಾಗೂ ಜನರೇಟರ್ ಆಗಾಗ್ಗೆ ಕೈಕೊಡುತ್ತಿರುವ ಕಾರಣ ಲಿಫ್ಟ್ ಚಾಲನೆ ಸಂಪೂರ್ಣವಾಗಿ ನಿಂತು ಹೋಗಿದೆ. ಹೀಗಾಗಿ ಲಿಫ್ಟ್ ಕೈಕೊಟ್ಟದನ್ನು ದುರಸ್ತಿಗೊಳಿಸುವ ಕಾರ್ಯಕ್ಕೆ ಯಾರೂ ಕೈಹಾಕಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಸಬ್‍ರಿಜಿಸ್ಟ್ರಾರ್ ಕಚೇರಿ ಇಡೀ ಕಟ್ಟಡದಲ್ಲಿ ಅತ್ಯಂತ ಹೆಚ್ಚು ಚಟುವಟಿಕೆಯಲ್ಲಿರುವ ಕೊಠಡಿಯಾಗಿದ್ದು, ಇಲ್ಲಿಗೆ ತೆರಳುವ ಸಾರ್ವಜನಿಕರು ಲಿಫ್ಟ್ ಕೈಕೊಟ್ಟ ಕಾರಣ ಮೆಟ್ಟಿಲು ಹತ್ತಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೈಕಾಲು ಗಟ್ಟಿಮುಟ್ಟಾಗಿರುವವರು ತೊಂದರೆ ಇಲ್ಲ ಎಂದು ಹೇಳಿದರೆ, ವೃದ್ಧರು, ಮಹಿಳೆಯರು, ಮಂಡಿ ನೋವಿನವರು ಹಾಗೂ ಅಂಗವಿಕಲರು ಇದರಿಂದ ತೀವ್ರ ತೊಂದರೆಗೊಳಗಾಗುತ್ತಿದ್ದಾರೆ. ಕೆಲವು ವೃದ್ಧರನ್ನು ಎತ್ತಿಕೊಂಡೇ ಹೋಗುವ ಪ್ರಸಂಗವೂ ಇಲ್ಲಿ ಸಾಮಾನ್ಯ ದೃಶ್ಯವಾಗಿದೆ ಎಂದು ಸ್ಥಳೀಯರಾದ ಮುಹಮ್ಮದ್ ನಂದಾವರ ದೂರಿದ್ದಾರೆ.

ನಿರ್ವಹಣೆ ಯಾರದು?:

ಬಂಟ್ವಾಳ ತಾಲೂಕಿನ ಜನರು ಕಚೇರಿಯ ಕೆಲಸಕ್ಕಾಗಿ ಅಲೆದಾಡಬಾರದು ಎಂಬ ಉದ್ದೇಶದಿಂದ ಒಂದೇ ಸೂರಿನಡಿ ಬಹುತೇಕ ಎಲ್ಲ ಕಚೇರಿಗಳು ಕೆಲಸ ಮಾಡುವಂತೆ ಸರಕಾರ ಕೋಟ್ಯಂತರ ರೂ. ಖರ್ಚು ಮಾಡಿ ಬಿ.ಸಿರೋಡಿನ ಸುಸಜ್ಜಿತವಾದ ಮಿನಿವಿಧಾನ ಸೌಧವನ್ನು ನಿರ್ಮಾಣ ಮಾಡಿದೆ. ಉದ್ಘಾಟನೆಗೊಂಡ ಕೆಲ ತಿಂಗಳವರೆಗೆ ವ್ಯವಸ್ಥೆ ಸರಿಯಾಗಿತ್ತು. ಆದರೆ, ನಿರ್ವಹಣೆಯ ವಿಚಾರದಲ್ಲಿ ಬಂಟ್ವಾಳ ಲೋಕೋಪಯೋಗಿ ಇಲಾಖೆ ಹಾಗೂ ಕಂದಾಯ ಇಲಾಖೆ ಗೊಂದಲಗಳಿಂದ ಕಚೇರಿಯು ಅವ್ಯವಸ್ಥೆಯಿಂದ ಕೂಡಿದೆ. ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಶೀಘ್ರ ದುರಸ್ತಿ ಮಾಡುವಂತೆ ತಹಶೀಲ್ದಾರ್ ಅವರಲ್ಲಿ ಮೌಖಿಕವಾಗಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಲಿಫ್ಟ್ ಇಲ್ಲದೆ ಇಲ್ಲಿ ಹಲವು ಸಮಸ್ಯೆಗಳು ಉದ್ಭವಿಸಿವೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋಗಬೇಕಾದರೆ ಪ್ರಯಾಸಪಡಬೇಕಾದ ಸ್ಥಿತಿ ಎದುರಾಗಿದೆ. ಅಧಿಕಾರಿಗಳು ತಕ್ಷಣ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ.
-ಹಾರೂನ್ ರಶೀದ್, ಜೆಡಿಎಸ್ ಮುಖಂಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X