Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಂದ್ರನ ಮೇಲೆ ಇಸ್ರೇಲಿ ಅಂತರಿಕ್ಷ ನೌಕೆ...

ಚಂದ್ರನ ಮೇಲೆ ಇಸ್ರೇಲಿ ಅಂತರಿಕ್ಷ ನೌಕೆ ಪತನಗೊಂಡ ಸ್ಥಳವನ್ನು ಪತ್ತೆ ಹಚ್ಚಿದ ನಾಸಾ

ವಾರ್ತಾಭಾರತಿವಾರ್ತಾಭಾರತಿ16 May 2019 9:29 PM IST
share
ಚಂದ್ರನ ಮೇಲೆ ಇಸ್ರೇಲಿ ಅಂತರಿಕ್ಷ ನೌಕೆ ಪತನಗೊಂಡ ಸ್ಥಳವನ್ನು ಪತ್ತೆ ಹಚ್ಚಿದ ನಾಸಾ

ಹೊಸದಿಲ್ಲಿ,ಮೇ 16: ಸದ್ಯ ಚಂದ್ರನ ಕಕ್ಷೆಯಲ್ಲಿ ಸುತ್ತುತ್ತಿರುವ ನಾಸಾದ ಅಂತರಿಕ್ಷ ನೌಕೆ ‘ಲೂನಾರ್ ರಿಕನ್ನೈಸನ್ಸ್ ಆರ್ಬಿಟರ್(ಎಲ್‌ಆರ್‌ಒ)’ ಇಸ್ರೇಲಿ ಅಂತರಿಕ್ಷ ನೌಕೆ ‘ಬೆರೆಶೀಟ್’ ಚಂದ್ರನ ಮೇಲೆ ಪತನಗೊಂಡ ಸ್ಥಳವನ್ನು ಪತ್ತೆ ಹಚ್ಚಿದೆ. ಪತನ ಸ್ಥಳವು ‘ಸೀ ಆಫ್ ಸೆರೆನಿಟಿ’ಎಂದು ಕರೆಯಲಾಗುವ ಚಂದ್ರನ ಪ್ರದೇಶದಲ್ಲಿದೆ ಎಂದು ನಾಸಾ ಟ್ವೀಟಿಸಿದೆ.

ಎ.22ರಂದು ಎಲ್‌ಆರ್‌ಒ ಬೆರೆಶೀಟ್ ಇಳಿಯಬೇಕಾಗಿದ್ದ ಸ್ಥಳದ ಮೇಲೆ ಕಕ್ಷೆಯಲ್ಲಿ ಸ್ಥಿತಗೊಂಡಿದ್ದಾಗ ಅದು ಪತನಗೊಂಡಿದ್ದ ಜಾಗದ ಚಿತ್ರವನ್ನು ಸೆರೆ ಹಿಡಿದಿದೆ. ಪತನ ಸ್ಥಳದ ಚಿತ್ರವನ್ನು ಚಂದ್ರನ ಮೇಲ್ಮೈನಿಂದ 56 ಮೈಲು(96 ಕಿ.ಮೀ.) ದೂರದಿಂದ ತೆಗೆಯಲಾಗಿದೆ ಎಂದು ನಾಸಾ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

ಸುಮಾರು 10 ಮೀ.ಅಗಲದ ಕಪ್ಪು ಕಲೆಯನ್ನು ಕ್ಯಾಮೆರಾ ಸೆರೆಹಿಡಿದಿದೆ. ಅದು ಬೆರೆಶೀಟ್ ಚಂದ್ರನ ಮೇಲ್ಮೈಯನ್ನು ಅಪ್ಪಳಿಸಿದ್ದ ಬಿಂದುವನ್ನು ಸೂಚಿಸುತ್ತದೆ ಎಂದು ಅದು ಹೇಳಿದೆ.

ಇಸ್ರೇಲಿನ ಲಾಭರಹಿತ ಸಂಸ್ಥೆಯಾಗಿರುವ ಸ್ಪೇಸ್‌ಐಎಲ್ ಎ.11ರಂದು ಸ್ಪೇಸ್‌ಎಕ್ಸ್ ಫಾಲ್ಕನ್ 9 ರಾಕೆಟ್ ಮೂಲಕ ಚಂದ್ರನ ಸಮೀಪ ಪಾರ್ಶ್ವದಲ್ಲಿಯ ಜ್ವಾಲಾಮುಖಿ ಕ್ಷೇತ್ರದ ಮೇಲೆ ತನ್ನ ಅಂತರಿಕ್ಷ ನೌಕೆ ಬೆರೆಶೀಟ್ ಅನ್ನು ಇಳಿಸಲು ಪ್ರಯತ್ನಿಸಿತ್ತು. ಆದರೆ ಅದು ಲ್ಯಾಂಡ್ ಆಗುವ ಕ್ಷಣಗಳ ಮುನ್ನ ತಾಂತ್ರಿಕ ದೋಷಗಳಿಂದಾಗಿ ಚಂದ್ರನ ಮೇಲ್ಮೈಗೆ ಅಪ್ಪಳಿಸುವ ಮೂಲಕ ಇಸ್ರೇಲಿನ ಮೊದಲ ಖಾಸಗಿ ಆರ್ಥಿಕ ನೆರವಿನ ಅಭಿಯಾನ ವಿಫಲಗೊಂಡಿತ್ತು. ಚಂದ್ರನ ಮೇಲ್ಮೈನ ಚಿತ್ರಗಳನ್ನು ತೆಗೆಯುವುದು ಮತ್ತು ಪ್ರಯೋಗಗಳನ್ನು ನಡೆಸುವುದು ಅಭಿಯಾನದ ಮುಖ್ಯ ಉದ್ದೇಶವಾಗಿತ್ತು.

ಬೆರೆಶೀಟ್ ಪತನವು ಚಂದ್ರನ ಮೇಲೆ,ಚಿತ್ರದಲ್ಲಿ ಕಾಣದಷ್ಟು ಸಣ್ಣದಾದ ಮಾನವ ನಿರ್ಮಿತ ಕುಳಿಗೆ ಕಾರಣವಾಗಿರುವ ಸಾಧ್ಯತೆಯಿದೆ ಎಂದು ನಾಸಾ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X