Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಓವರ್‌ಟೈಮ್ ದುಡಿಮೆ ನಿಮ್ಮ ಆರೋಗ್ಯದ ಮೇಲೆ...

ಓವರ್‌ಟೈಮ್ ದುಡಿಮೆ ನಿಮ್ಮ ಆರೋಗ್ಯದ ಮೇಲೆ ಬೀರುವ ಪರಿಣಾಮಗಳು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ16 May 2019 9:43 PM IST
share
ಓವರ್‌ಟೈಮ್ ದುಡಿಮೆ ನಿಮ್ಮ ಆರೋಗ್ಯದ ಮೇಲೆ ಬೀರುವ ಪರಿಣಾಮಗಳು ಗೊತ್ತೇ?

ಬದುಕಲು ದುಡಿಮೆ ನಿಜಕ್ಕೂ ಮುಖ್ಯ. ಆದರೆ ಕೆಲವೊವ್ಮೆು ಬದುಕು ಜೀವವನ್ನೇ ತಿನ್ನುತ್ತಿದೆ,ಯಾವುದೇ ಸುಖಸಂತೋಷವಿಲ್ಲ, ಕೆಲಸದ ಯಂತ್ರಗಳಾಗಿಬಿಟ್ಟಿದ್ದೇವೆ ಎಂದು ಅನಿಸುತ್ತದೆಯೇ? ಇಂತಹ ವೈರಾಗ್ಯ ಅನುಭವಿಸುವವರು ನೀವೊಬ್ಬರೇ ಅಲ್ಲ. ವಾರಕ್ಕೆ 40ರಿಂದ 50 ಗಂಟೆಗಳ ದುಡಿಮೆ ಎಂದರೆ ಬೇಕಾದಷ್ಟಾಯಿತು. ಆದರೆ ನಿಮ್ಮ ವೈರಾಗ್ಯಕ್ಕೆ ಕೆಲಸದ ಗಂಟೆಗಳನ್ನೇ ದೂರುವುದು ಅನ್ಯಾಯವಾಗುತ್ತದೆ. ಕೆಲಸದ ಸ್ಥಳ ಸೇರಲು ಮತ್ತು ಮರಳಲು ನಿಮ್ಮ ಪ್ರಯಾಣದ ಅವಧಿ,ಹೊರಗಿನ ಜವಾಬ್ದಾರಿಗಳು,ಕೆಲಸದ ವಾತಾವರಣ,ಮೆಚ್ಚುಗೆಯ ಮಾತುಗಳು ಮತ್ತು ಕೆಲಸದಲ್ಲಿ ತೃಪ್ತಿ ಇವೆಲ್ಲವೂ ನಮ್ಮ ವೃತ್ತಿಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಓವರ್‌ಟೈಮ್ ಅಥವಾ ಹೆಚ್ಚುವರಿ ದುಡಿಮೆ ಮಾಡಿದರೆ ನಾಲ್ಕು ಕಾಸು ಹೆಚ್ಚು ಸಿಗುತ್ತದೆ ನಿಜ,ಆದರೆ ಸುದೀರ್ಘ ಕಾಲ ಓವರ್‌ಟೈಮ್ ಕೆಲಸ ಮಾಡುತ್ತಿದ್ದರೆ ಅದು ಖಂಡಿತವಾಗಿಯೂ ಆರೋಗ್ಯದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತದೆ. ಇಂತಹ ಕೆಲವು ಸಮಸ್ಯೆಗಳ ಮೇಲೆ ಕಣ್ಣಾಡಿಸೋಣ ಬನ್ನಿ....

ಕುತ್ತಿಗೆ ಮತ್ತು ಬೆನ್ನು ನೋವು

ನಮ್ಮ ಶರೀರದ ಪ್ರತಿಯೊಂದೂ ಅಂಗಕ್ಕೆ ವಿಶ್ರಾಂತಿಯ ಅಗತ್ಯವಿದೆ. ವಾರಕ್ಕೆ ಒಂದು ಅಥವಾ ಎರಡು ಸಲ ಓವರ್‌ಟೈಮ್ ಕೆಲಸ ಮಾಡುತ್ತಿದ್ದರೆ ಪರವಾಗಿಲ್ಲ. ಆದರೆ ದಿನವೂ ಇದನ್ನು ಮಾಡುವುದು ಒಳ್ಳೆಯದಲ್ಲ. ನೀವು ಹೆಚ್ಚೆಚ್ಚು ಕೆಲಸ ಮಾಡಿದಷ್ಟೂ ನಿಮ್ಮ ಬೆನ್ನು ಮತ್ತು ಕುತ್ತಿಗೆಯನ್ನು ಹೆಚ್ಚು ತೊಂದರೆಗೆ ಸಿಲುಕಿಸುತ್ತೀರಿ. ಸಾಮಾನ್ಯವಾಗಿ ಮಹಿಳೆಯರಲ್ಲಿ ಇಂತಹ ನೋವು ಕುತ್ತಿಗೆಯಲ್ಲಿ ಕಾಣಿಸಿಕೊಂಡರೆ ಪುರುಷರಲ್ಲಿ ಕೆಳಬೆನ್ನಿನಲ್ಲಿ ನೋವು ಆರಂಭಗೊಳ್ಳುತ್ತದೆ.

ಸಂಬಂಧಗಳಲ್ಲಿ ಸಮಸ್ಯೆಗಳು

ನಿಮ್ಮ ಶೇ.100ರಷ್ಟನ್ನು ನಿಮ್ಮ ಸಂಬಂಧಗಳಿಗೆ ನೀಡಲು ನೀವು ಪ್ರಯತ್ನಿಸುತ್ತಿದ್ದರೂ ಅಧಿಕ ಕೆಲಸದಿಂದ ನೀವು ಅನುಭವಿಸುತ್ತಿರಬಹುದಾದ ಒತ್ತಡ,ದಣಿವು ಮತ್ತು ಖಿನ್ನತೆ ಇವು ನಿಮ್ಮ ಸಂಬಂಧಗಳ ಮೇಲೂ ಪರಿಣಾಮವನ್ನು ಬೀರಬಹುದು ಮತ್ತು ಸಮಸ್ಯೆಗಳಿಗೆ ಕಾರಣವಾಗಬಹುದು.

ನಿಮ್ಮ ಹೃದಯವೂ ಓವರ್‌ಟೈಮ್ ಕೆಲಸ ಮಾಡುತ್ತದೆ

 ನೀವು ಕೆಲಸದಲ್ಲಿ ಅತಿಯಾಗಿ ತೊಡಗಿಸಿಕೊಂಡಾಗ ನಿಮ್ಮ ಆರೋಗ್ಯದ ಬಗ್ಗೆ ಎಂದೂ ಗಮನ ನೀಡುವುದಿಲ್ಲ. ಕೆಲಸದ ಒತ್ತಡವು ಕಾರ್ಟಿಸಾಲ್ ಹಾರ್ಮೋನ್‌ನ್ನು ಬಿಡುಗಡೆಗೊಳಿಸುತ್ತದೆ ಮತ್ತು ಈ ಹಾರ್ಮೋನ್ ಹೃದಯಕ್ಕೆ ಹಾನಿಕಾರಕವಾಗಿದೆ. ಇದು ಕ್ರಮೇಣ ಪಾರ್ಶ್ವವಾಯು,ಪರಿಧಮನಿಯ ಕಾಯಿಲೆ,ಟೈಪ್ 2 ಮಧುಮೇಹ ಮತ್ತು ಕ್ಯಾನ್ಸರ್‌ಗೂ ಗುರಿಯಾಗುವ ಅಪಾಯವನ್ನು ಹೆಚ್ಚಿಸುತ್ತದೆ.

ಉತ್ಪಾದಕತೆಗೆ ತಡೆಯಾಗುತ್ತದೆ

ಯಾವುದೇ ಗಣನೀಯ ಫಲಿತಾಂಶಗಳಿಲ್ಲದೆ ಓವರ್‌ಟೈಮ್ ದುಡಿಮೆಯು ನಿಮ್ಮ ಉತ್ಪಾದಕತೆಯನ್ನು ತಗ್ಗಿಸಬಹುದು. ವಾರಕ್ಕೆ 70 ಗಂಟೆಗಳ ಕಾಲ ದುಡಿಯುವವರು ವಾಸ್ತವದಲ್ಲಿ ವಾರಕ್ಕೆ 56 ಗಂಟೆಗಳ ಕಾಲ ದುಡಿಯುವ ತಮ್ಮ ಸಹೋದ್ಯೋಗಿಗಳಿಗಿಂತ ಹೆಚ್ಚಿನ ಕೆಲಸ ಮಾಡಿರುವುದಿಲ್ಲ ಎನ್ನುವುದನ್ನು ಅಧ್ಯಯನಗಳು ಸಾಬೀತು ಮಾಡಿವೆ.

ರಾತ್ರಿ ಕಡಿಮೆ ನಿದ್ರೆ,ಹಗಲಿನಲ್ಲ್ಲಿ ಹೆಚ್ಚು ದಣಿವು

ಓವರ್‌ಟೈಮ್ ದುಡಿಮೆಯಿಂದಾಗಿ ರಾತ್ರಿ ಸುಖನಿದ್ರೆ ಮಾಡಲು ಸಮಯ ಸಿಗುವುದಿಲ್ಲ ಮತ್ತು ಹಗಲಿನಲ್ಲಿ ಹೆಚ್ಚು ದಣಿವಿಗೆ ಕಾರಣವಾಗುತ್ತದೆ. ನಿದ್ರೆಯ ಕೊರತೆಯು ನಮ್ಮ ಉತ್ಪಾದಕತೆಯನ್ನು ಕಡಿಮೆಗೊಳಿಸುತ್ತದೆ ಮತ್ತು ಟೈಪ್ 2 ಮಧುಮೇಹ ಹಾಗೂ ಹೃದ್ರೋಗದಂತಹ ದೀರ್ಘಕಾಲಿಕ ಅನಾರೋಗ್ಯಕ್ಕ ತುತ್ತಾಗುವ ಅಪಾಯವನ್ನು ಹೆಚ್ಚಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X