Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದ ಪ್ರತಿಕ್ರಿಯೆ ನೋಡಿ ಖಶೋಗಿ...

ಅಮೆರಿಕದ ಪ್ರತಿಕ್ರಿಯೆ ನೋಡಿ ಖಶೋಗಿ ನೊಂದುಕೊಳ್ಳುತ್ತಿದ್ದರು: ಗೆಳತಿ ಹಾಟಿಸ್ ಸೆಂಗಿಝ್‌

ವಾರ್ತಾಭಾರತಿವಾರ್ತಾಭಾರತಿ16 May 2019 10:50 PM IST
share
ಅಮೆರಿಕದ ಪ್ರತಿಕ್ರಿಯೆ ನೋಡಿ ಖಶೋಗಿ ನೊಂದುಕೊಳ್ಳುತ್ತಿದ್ದರು: ಗೆಳತಿ ಹಾಟಿಸ್ ಸೆಂಗಿಝ್‌

ವಾಶಿಂಗ್ಟನ್, ಮೇ 16: ಸೌದಿ ಅರೇಬಿಯದ ಪತ್ರಕರ್ತ ಜಮಾಲ್ ಖಶೋಗಿಯ ಹತ್ಯೆಗೆ ಅಮೆರಿಕ ಪ್ರತಿಕ್ರಿಯಿಸಿದ ರೀತಿಯನ್ನು ಅವರ ಗೆಳತಿ ಹಾಟಿಸ್ ಸೆಂಗಿಝ್ ಬುಧವಾರ ಟೀಕಿಸಿದ್ದಾರೆ. ಈ ಅಪರಾಧದ ಅರ್ಥಪೂರ್ಣ ಪರಿಣಾಮಗಳನ್ನು ನಿವಾರಿಸಿಕೊಳ್ಳಲು ಸೌದಿ ಅರೇಬಿಯಕ್ಕೆ ಸಹಾಯ ಮಾಡುವ ಮೂಲಕ ಅಮೆರಿಕದ ಟ್ರಂಪ್ ಆಡಳಿತವು ಅಮೆರಿಕನ್ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

''ಖಶೋಗಿ ಯಾವತ್ತೂ ಅಮೆರಿಕವನ್ನು ಉನ್ನತ ಸ್ಥಾನದಲ್ಲಿಟ್ಟಿದ್ದರು. ಅದು ಯಥಾಸ್ಥಿತಿಯನ್ನು ಪ್ರಶ್ನಿಸಬಹುದಾದ ಹಾಗೂ ಸತ್ಯವನ್ನು ಹೇಳಿ ಜಯಿಸಬಹುದಾದ ಸ್ಥಳ ಎಂಬುದಾಗಿ ಹೇಳುತ್ತಿದ್ದರು'' ಎಂದು 'ವಾಶಿಂಗ್ಟನ್ ಪೋಸ್ಟ್' ಪತ್ರಿಕೆಯ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಹೇಳಿದರು. ಸೌದಿ ಅರೇಬಿಯ ತೊರೆದು ಅಮೆರಿಕಕ್ಕೆ ಪಲಾಯನಗೈದಿದ್ದ ಖಶೋಗಿ 'ವಾಶಿಂಗ್ಟನ್ ಪೋಸ್ಟ್' ಪತ್ರಿಕೆಗೆ ಅಂಕಣಗಳನ್ನು ಬರೆಯುತ್ತಿದ್ದರು.''ಅಮೆರಿಕದ ಪ್ರತಿಕ್ರಿಯೆಯನ್ನು ನೋಡಿ ಜಮಾಲ್‌ಗೆ ಭಾರೀ ನಿರಾಶೆಯಾಗುತ್ತಿತ್ತು'' ಎಂದು ಸೆಂಗಿಝ್ ಅಭಿಪ್ರಾಯಪಟ್ಟರು.  ಜಮಾಲ್ ಹತ್ಯೆಗೆ ಟ್ರಂಪ್ ಆಡಳಿತದ ತಣ್ಣನೆ ಪ್ರತಿಕ್ರಿಯೆ ಬಗ್ಗೆ ಸೆಂಗಿಝ್ ಈವರೆಗೆ ನೀಡಿದ ಹೇಳಿಕೆಗಳಲ್ಲೇ ಇದು ಅತ್ಯಂತ ಕಟು ಹೇಳಿಕೆಯಾಗಿದೆ. ಕಳೆದ ವರ್ಷದ ಅಕ್ಟೋಬರ್ 2ರಂದು ಟರ್ಕಿಯ ಇಸ್ತಾಂಬುಲ್ ನಗರದಲ್ಲಿರುವ ಸೌದಿ ಅರೇಬಿಯದ ಕೌನ್ಸುಲೇಟ್ ಕಚೇರಿಯಲ್ಲಿ ನಡೆದ ಖಶೋಗಿಯ ಭೀಕರ ಹತ್ಯೆಯನ್ನು ಅಂತರ್‌ರಾಷ್ಟ್ರೀಯ ಸಮುದಾಯ ತೀವ್ರವಾಗಿ ಖಂಡಿಸಿದೆ. ಅದು ಪತ್ರಿಕಾ ಸ್ವಾತಂತ್ರದು ಮೇಲಿನ ದಾಳಿಯಾಗಿದೆ ಹಾಗೂ ಮಾನವಹಕ್ಕುಗಳ ಸಾರಾಸಗಟು ಉಲ್ಲಂಘನೆಯಾಗಿದೆ ಎಂಬುದಾಗಿ ಅದು ಬಣ್ಣಿಸಿದೆ.

ಕಠಿಣ ರಾಜಕೀಯ ಕಾಲ ಘಟ್ಟದಲ್ಲಿ ಅಮೆರಿಕಖಶೋಗಿ ನಾಪತ್ತೆಯ ಬಳಿಕ ನಾನು ಅಮೆರಿಕದಲ್ಲಿ ವಾಸ್ತವ್ಯ ಹೂಡಲು ಯೋಚಿಸಿದ್ದೆ ಎಂದು ಸೆಂಗಿಝ್ ಹೇಳಿದರು.ಅವರು ಈಗ ಲಂಡನ್‌ನಲ್ಲಿ ವಾಸಿಸುತ್ತಿದ್ದು ಡಾಕ್ಟರೇಟ್ ಪದವಿ ಅಧ್ಯಯನ ಮಾಡುತ್ತಿದ್ದಾರೆ. ''ಆದರೆ, ಬಳಿಕ ಲಂಡನ್‌ನಲ್ಲಿ ನೆಲೆಸಲು ನಿರ್ಧರಿಸಿದೆ. ಅಮೆರಿಕ ಈಗ ಕಠಿಣ ರಾಜಕೀಯ ಕಾಲ ಘಟ್ಟದ ಮೂಲಕ ಹಾದು ಹೋಗುತ್ತಿರುವುದು ಇದಕ್ಕೆ ಒಂದು ಕಾರಣ ಎಂದರು. ಖಶೋಗಿ ಹತ್ಯೆ ಕಾರ್ಯಾಚರಣೆಗೆ ಸೌದಿ ಯುವರಾಜ ಆದೇಶ ನೀಡಿದ್ದರು ಎಂಬ ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ತೀರ್ಮಾನವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಶ್ನಿಸಿರುವುದನ್ನು ಸ್ಮರಿಸಬಹುದಾಗಿದೆ. ಅದೂ ಅಲ್ಲದೆ, ಈ ವಿಷಯದಲ್ಲಿ ಮಧ್ಯಪ್ರಾಚ್ಯದ ಮಿತ್ರ ದೇಶದ ವಿರುದ್ಧ ಕಠಿಣ ದಂಡನಾ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಅವರು ವಿರೋಧಿಸಿದ್ದರು. ಸೌದಿ ಅರೇಬಿಯದಿಂದ ಬಂದ 15 ಸದಸ್ಯರ ತಂಡವೊಂದು ಮದುವೆ ದಾಖಲೆಗಳನ್ನು ಪಡೆಯಲು ಕೌನ್ಸುಲೇಟ್ ಕಚೇರಿಗೆ ಬಂದಿದ್ದ ಖಶೋಗಿಯನ್ನು ಬರ್ಬರವಾಗಿ ಕೊಂದು ಹಾಕಿತ್ತು. ಸೌದಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್‌ರ ಆದೇಶದಂತೆ ಈ ಹತ್ಯೆ ನಡೆಸಲಾಗಿದೆ ಎಂಬುದಾಗಿ ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X