Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಕೀಯ ಭಾಷಣಗಳಲ್ಲಿ ಸೇನೆಯ ಪ್ರಸ್ತಾಪ...

ರಾಜಕೀಯ ಭಾಷಣಗಳಲ್ಲಿ ಸೇನೆಯ ಪ್ರಸ್ತಾಪ ಹೆಚ್ಚುತ್ತಿರುವುದು ಕಳವಳಕಾರಿ:ಲೆ.ಜ.ಹೂಡಾ

ವಾರ್ತಾಭಾರತಿವಾರ್ತಾಭಾರತಿ16 May 2019 11:58 PM IST
share
ರಾಜಕೀಯ ಭಾಷಣಗಳಲ್ಲಿ ಸೇನೆಯ ಪ್ರಸ್ತಾಪ ಹೆಚ್ಚುತ್ತಿರುವುದು ಕಳವಳಕಾರಿ:ಲೆ.ಜ.ಹೂಡಾ

ಚಂಡಿಗಡ,ಮೇ 16: ರಾಜಕೀಯ ಭಾಷಣಗಳಲ್ಲಿ ಸೇನೆಯ ಪ್ರಸ್ತಾಪ ಹೆಚ್ಚುತ್ತಿರುವುದು ಮತ್ತು ರಾಜಕೀಯ ವಾದಗಳನ್ನು ಗೆಲ್ಲಲು ಅದನ್ನು ಬಳಸಿಕೊಳ್ಳುತ್ತಿರುವುದು ಕಳವಳಕಾರಿಯಾಗಿದೆ ಎಂದು 2016ರ ಸರ್ಜಿಕಲ್ ದಾಳಿಗಳ ರೂವಾರಿ ಲೆ.ಜ.(ನಿವೃತ್ತ) ಡಿ.ಎಸ್.ಹೂಡಾ ಅವರು ಗುರುವಾರ ಇಲ್ಲಿ ಹೇಳಿದರು.

ಸೇನೆಯ ರಾಜಕೀಯಕರಣ ಕುರಿತು ಕೇಳಿಬರುತ್ತಿರುವ ಮಾತುಗಳು ಅತಿರಂಜಿತ ರೀತಿಯಲ್ಲಿವೆ ಎಂದೂ ಅವರು ಹೇಳಿದರು.

  ‘ರಾಷ್ಟ್ರೀಯ ಭದ್ರತೆ ಕುರಿತು ಸಂವಾದ’ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು,ರಾಜಕೀಯ ಭಾಷಣಗಳಲ್ಲಿ ಸೇನೆಯನ್ನು ಎಳೆದು ತರುವ ಪ್ರವೃತ್ತಿಯು ಹೆಚ್ಚುತ್ತಿದೆ,ರಾಜಕೀಯ ವಾದಗಳನ್ನು ಗೆಲ್ಲಲು ಸೇನೆಯನ್ನು ಬಳಸಿಕೊಳ್ಳಲಾಗತ್ತಿದೆ. ಅದು ಚುನಾವಣೆಗಳನ್ನು ಗೆಲ್ಲುವ ಸಾಧನವಾಗಿ ಬಳಕೆಯಾಗುತ್ತಿದೆ. ಇದು ಕಳವಳಕಾರಿಯಾಗಿದೆ ಎಂದು ಹೇಳಿದರು.

ಉದಾಹರಣೆಗೆ ಇತ್ತೀಚಿಗೆ ‘‘ನನ್ನ ಗಡಿಯಾಚೆಯ ದಾಳಿಗಳು ವಿರುದ್ಧ ನಿಮ್ಮ ಸರ್ಜಿಕಲ್ ದಾಳಿಗಳು’ ಕುರಿತು ಚರ್ಚೆಗೆ ನಾವೆಲ್ಲ ಸಾಕ್ಷಿಯಾಗಿದ್ದೇವೆ. ಅಂತಿಮವಾಗಿ ಆಗಿದ್ದೇನು? ಸೇನೆಯ ಕೇಂದ್ರಕಚೇರಿಯು ಏನು ಹೇಳುತ್ತಿದೆ ನೋಡಿ ಎಂದು ಹೇಳಲು ಆರ್‌ಟಿಐ ಉತ್ತರದಲ್ಲಿ ದಾಖಲೆಯೊಂದನ್ನು ಪಡೆದುಕೊಳ್ಳಲಾಯಿತು. ಸೇನೆಯ ಕುರಿತು ಅತಿಯಾದ ರಾಜಕೀಯ ಚರ್ಚೆ ಆರಂಭಗೊಂಡಾಗ ಅದು ಕಳವಳದ ವಿಷಯವಾಗುತ್ತದೆ ಎಂದರು.

 ಕಳೆದ ವರ್ಷ ಸುದ್ದಿಸಂಸ್ಥೆ ಪಿಟಿಐ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ನೀಡಿದ್ದ ಉತ್ತರದಲ್ಲಿ ಮಿಲಿಟರಿ ಕಾರ್ಯಾಚರಣೆಗಳ ಮಹಾ ನಿರ್ದೇಶಕರು,2016,ಸೆ.29(ಸರ್ಜಿಕಲ್ ದಾಳಿ ನಡೆದಿದ್ದ ದಿನ)ಕ್ಕೆ ಮೊದಲು ಯಾವುದೇ ಸರ್ಜಿಕಲ್ ದಾಳಿ ನಡೆದಿರುವ ಬಗ್ಗೆ ಯಾವುದೇ ದಾಖಲೆ ಸೇನೆಯ ಬಳಿಯಿಲ್ಲ ಎಂದು ತಿಳಿಸಿದ್ದರು.

 ಹೀಗಾಗಿ ಎಲ್ಲ ರಾಜಕೀಯ ಪಕ್ಷಗಳು ಸೇನೆಯನ್ನು ರಾಜಕೀಯ ಭಾಷಣಗಳಿಂದ ಹೊರಗಿಟ್ಟರೆ ಒಳ್ಳೆಯದು. ಆದರೆ ಜನರು ಚುನಾವಣಾ ಗೆಲುವಿಗಳಿಗಾಗಿ ಸೇನೆಯ ಹೆಸರು ಬಳಸಿಕೊಂಡು ಯಶಸ್ಸಿನ ರುಚಿಯನ್ನು ಕಂಡಿರುವುದರಿಂದ ಇದು ಆಗುತ್ತದೆಯೇ ಎನ್ನುವುದು ನನಗೆ ಗೊತ್ತಿಲ್ಲ ಎಂದೂ ಮೇ.ಜ.ಹೂಡಾ ಹೇಳಿದರು.

ಸಶಸ್ತ್ರ ಪಡೆಗಳ ರಾಜಕೀಯಕರಣ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು,ಈ ಬಗ್ಗೆ ಬಹಳಷ್ಟು ಮಾತುಗಳು ಕೇಳಿಬರುತ್ತಿವೆ. ಆದರೆ ಇವೆಲ್ಲ ಒಂದು ರೀತಿಯ ಉತ್ಪ್ರೇಕ್ಷೆ ಎಂದು ನಾನು ಭಾವಿಸಿದ್ದೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X