Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಅಕ್ರಮ ಮರಳು ಅಡ್ಡೆಗೆ...

ಚಿಕ್ಕಮಗಳೂರು: ಅಕ್ರಮ ಮರಳು ಅಡ್ಡೆಗೆ ದಾಳಿ; ಹಿಟಾಚಿ ವಶಕ್ಕೆ

ಜಿಲ್ಲೆಯಲ್ಲಿ ಮತ್ತೆ ಗರಿಗೆದರಿದ ಅಕ್ರಮ ಮರಳು ದಂಧೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ17 May 2019 9:52 PM IST
share
ಚಿಕ್ಕಮಗಳೂರು: ಅಕ್ರಮ ಮರಳು ಅಡ್ಡೆಗೆ ದಾಳಿ; ಹಿಟಾಚಿ ವಶಕ್ಕೆ

ಚಿಕ್ಕಮಗಳೂರು, ಮೇ 17: ಯಂತ್ರೋಪಕರಣ ಬಳಸಿ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖಾಧಿಕಾರಿಗಳು ಗಣಿಗಾರಿಕೆ ಸ್ಥಳದ ಮೇಲೆ ದಾಳಿ ನಡೆಸಿ ಹಿಟಾಚಿಯನ್ನು ವಶಕ್ಕೆ ಪಡೆದಿರುವ ಘಟನೆ ಗುರುವಾರ ಸಂಜೆ ಮೂಡಿಗೆರೆ ತಾಲೂಕಿನಲ್ಲಿ ವರದಿಯಾಗಿದೆ.

ಮೂಡಿಗೆರೆ ತಾಲೂಕಿನ ಉದುಸೆ ಗ್ರಾಮದಲ್ಲಿರುವ ಹೇಮಾವತಿ ನದಿ ಪಾತ್ರದಲ್ಲಿ ಅಕ್ರಮವಾಗಿ ಹಿಟಾಚಿ ಯಂತ್ರದ ಮೂಲಕ ಮರಳು ಗಣಿಗಾರಿಕೆ ಮಾಡಲಾಗುತ್ತಿರುವ ಬಗ್ಗೆ ಜಿಲ್ಲಾ ಭೂ ವಿಜ್ಞಾನ ಮತ್ತು ಗಣಿ ಇಲಾಖೆಗೆ ಸ್ಥಳೀಯರು ಖಚಿತ ಮಾಹಿತಿ ನೀಡಿದ್ದರು. ದೂರಿನೆ ಮೇರೆಗೆ ಇಲಾಖಾಧಿಕಾರಿಗಳ ತಂಡ ಗುರುವಾರ ಸಂಜೆ ವೇಳೆ ಸ್ಥಳಕ್ಕೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆಂದು ತಿಳಿದು ಬಂದಿದೆ.

ಪರಿಶೀಲನೆ ವೇಳೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಖಚಿತಪಡಿಸಿಕೊಂಡ ಅಧಿಕಾರಿಗಳ ತಂಡ ಪ್ರಕರಣ ದಾಖಲಿಸಿಕೊಂಡು 1 ಹಿಟಾಚಿ ಯಂತ್ರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಸಂಬಂಧ ಅಧಿಕಾರಿಗಳ ತಂಡ ವಶಕ್ಕೆ ಪಡೆದ ಹಿಟಾಚಿಯನ್ನು ಗೋಣಿಬೀಡು ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಹಿಟಾಚಿಯಂತ್ರ ಸ್ಥಳೀಯ ಪ್ರಭಾವಿಗಳದ್ದೆಂದು ಹೇಳಲಾಗುತ್ತಿದೆ. ಈ ಸಂಬಂಧ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆಂದು ತಿಳಿದು ಬಂದಿದೆ.

ಜಿಲ್ಲೆಯಲ್ಲಿ ಮತ್ತೆ ಗರಿಗೆದರಿದ ಅಕ್ರಮ ಮರಳು ದಂಧೆ
ಜಿಲ್ಲೆಯಲ್ಲಿ ಈ ಹಿಂದೆ ಭಾರೀ ಸದ್ದು ಮಾಡಿದ್ದ ಅಕ್ರಮ ಮರಳು ದಂಧೆ ಕಳೆದೊಂದು ವರ್ಷದಿಂದ ತಣ್ಣಗಾಗಿತ್ತು. ಆದರೆ ಇದೀಗ ಜಿಲ್ಲಾದ್ಯಂತ ಅದರಲ್ಲೂ ವಿಶೇಷವಾಗಿ ಮೂಡಿಗೆರೆ ತಾಲೂಕಿನ ಹೇಮಾವತಿ ನದಿ ತೀರದಲ್ಲಿ ಅಕ್ರಮ ಮರಳು ದಂಧೆ ಮತ್ತೆ ಗರಿಗೆದರಿದೆ ಎಂದು ಸ್ಥಳೀಯರು ಪತ್ರಿಕೆ ಬಳಿ ದೂರು ಹೇಳಿಕೊಂಡಿದ್ದಾರೆ.

ಈ ಹಿಂದೆ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ವ್ಯಾಪಕವಾಗಿ ನಡೆಯುತಿದ್ದು, ಎಸ್ಪಿ ಅಣ್ಣಾಮಲೈ ಅವಧಿಯಲ್ಲಿ ಅಕ್ರಮ ಪರ್ಮಿಟ್‍ಗಳ ಮೂಲಕ ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ಭಾರೀ ಪ್ರಮಾಣದಲ್ಲಿ ಮರಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ದಂಧೆ ಹೊರಬಂದಿತ್ತು. ಈ ದಂಧೆಯಲ್ಲಿ ಕೆಲ ಅಧಿಕಾರಿಗಳು ಭಾಗಿಯಾಗಿದ್ದೂ ಬೆಳಕಿಗೆ ಬಂದಿತ್ತು. ಈ ಪ್ರಕರಣ ಬಳಿಕ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಕೊಂಚ ತಣ್ಣಗಾಗಿತ್ತು. 

ಆದರೆ ಇದೀಗ ಅಕ್ರಮ ಮರಳು ದಂಧೆಕೋರರು 1 ಪರ್ಮಿಟ್‍ಗಳನ್ನು ಪಡೆದು ದಿನಕ್ಕೆ 6-7 ಲಾರಿ ಮರಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದಾರೆಂಬ ವ್ಯಾಪಕ ಆರೋಪ ಸಾರ್ವಜನಿಕರು, ರೈತರಿಂದ ಕೇಳಿಬರುತ್ತಿದೆ. ಇದಕ್ಕೆ ಸ್ಥಳೀಯ ಕೆಲ ಪೊಲೀಸ್ ಅಧಿಕಾರಿಗಳು ಸಾಥ್ ನೀಡುತ್ತಿದ್ದಾರೆಂಬ ಗಂಭೀರ ಆರೋಪಗಳೂ ಕೇಳಿ ಬರುತ್ತಿವೆ. ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕುಗಳ ವ್ಯಾಪ್ತಿಯಲ್ಲೂ ಅಕ್ರಮ ಮರಳು ದಂಧೆ ಪೊಲೀಸರ ನೆರಳಿನಲ್ಲಿಯೇ ನಡೆಯುತ್ತಿದೆ ಎನ್ನಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X