Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಜಾನುವಾರು ವಧಾಗೃಹಕ್ಕೂ ಕಾಡಿದ...

ಮಂಗಳೂರು: ಜಾನುವಾರು ವಧಾಗೃಹಕ್ಕೂ ಕಾಡಿದ ನೀರಿನ ಸಮಸ್ಯೆ !

ವಾರ್ತಾಭಾರತಿವಾರ್ತಾಭಾರತಿ17 May 2019 10:01 PM IST
share

ಮಂಗಳೂರು, ಮೇ 17: ಮಂಗಳೂರು ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಕುದ್ರೋಳಿಯಲ್ಲಿರುವ ಜಾನುವಾರು ವಧಾಗೃಹಕ್ಕೂ ನೀರಿನ ಸಮಸ್ಯೆ ಕಾಡತೊಡಗಿದೆ. ಇದರಿಂದ ಜಾನುವಾರು, ವಧಾ ಕಾರ್ಮಿಕರು ಸಾಕಷ್ಟು ತೊಂದರೆಗೊಳಗಾಗುತ್ತಿದ್ದಾರೆ. ಜೊತೆಗೆ ವಧಾಗೃಹದ ಶುಚಿತ್ವವು ಕಾರ್ಮಿಕರಿಗೆ ಸವಾಲಾಗಿ ಪರಿಣಮಿಸಿದೆ.

ಮಂಗಳೂರಿನ ಕಸಾಯಿ ಖಾನೆ (ವಧಾಗೃಹ)ಗೆ 50ಕ್ಕೂ ಅಧಿಕ ವರ್ಷದ ಇತಿಹಾಸವಿದೆ. ಮೊದಲು ಕಸಾಯಿ ಖಾನೆ ಅತ್ತಾವರದಲ್ಲಿತ್ತು. ಬಳಿಕ ಕುದ್ರೋಳಿಗೆ ಸ್ಥಳಾಂತರಗೊಂಡಿತ್ತು. ಇಲ್ಲಿ ಆಡು, ಕುರಿ ಹಾಗು ಎತ್ತು, ಕೋಣವನ್ನು ವಧೆ ಮಾಡಲಾಗುತ್ತದೆ. ಆದರೆ ಮೂಲಭೂತ ಸೌಕರ್ಯವಿಲ್ಲದೆ ವಧಾಗೃಹ ನಲುಗುತ್ತಿದೆ ಎಂಬ ಆರೋಪದ ಮಧ್ಯೆಯೇ ಇದೀಗ ನೀರಿನ ಸಮಸ್ಯೆ ವಧಾಗೃಹವನ್ನು ಬಿಗಡಾಯಿಸುವಂತೆ ಮಾಡಿದೆ.

ಈ ಹಿಂದೆ ವಧಾಗೃಹಕ್ಕೆ ಮನಪಾದಿಂದಲೇ ನೀರು ಪೂರೈಕೆಯಾಗುತ್ತಿತ್ತು. ನೀರಿನ ಸಮಸ್ಯೆ ಸೃಷ್ಟಿಯಾಗಿ ರೇಶನಿಂಗ್ ವ್ಯವಸ್ಥೆ ಜಾರಿಯಾದ ಬಳಿಕ ವಧಾಗೃಹದಲ್ಲಿ ನೀರಿನ ಕೊರತೆಯುಂಟಾಗಿ ಸಂಕಷ್ಟ ಎದುರಾಗಿದೆ. ವಧಾಗೃಹದ ಬಳಿ ಬಾವಿಯೊಂದಿದ್ದು, ಸದ್ಯ ಅದರಿಂದಲೇ ನೀರನ್ನು ಬಳಸಲಾಗುತ್ತಿದೆ. ಆದರೆ, ಜಾನುವಾರುಗಳ ವಧೆಯ ಬಳಿಕ ಜಾನುವಾರುಗಳ ರಕ್ತ, ಹಸಿ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ ಶುಚಿಗೊಳಿಸಲು ಸಾಕಷ್ಟು ಪ್ರಮಾಣದಲ್ಲಿ ನೀರು ಬೇಕಾಗುತ್ತದೆ. ಆದರೆ, ಸಕಾಲಕ್ಕೆ ನೀರು ಸಿಗದ ಕಾರಣ ಶುಚಿತ್ವ ಮರೀಚಿಕೆಯಾಗಿದೆ ಎಂಬ ಮಾತು ಕೇಳಿ ಬರುತ್ತಿದೆ.

ಕುದ್ರೋಳಿ ವಧಾಗೃಹಕ್ಕೆ ಪಾಲಿಕೆಯಿಂದ ಸಕಾಲಕ್ಕೆ ನೀರು ಪೂರೈಕೆಯಾಗುತ್ತಿಲ್ಲ. ನೀರಿನ ರೇಶನಿಂಗ್ ಪ್ರಾರಂಭಗೊಂಡ ಬಳಿಕ ಇಲ್ಲಿ ಶುಚಿತ್ವವು ಸವಾಲಾಗಿದೆ. ಪಾಲಿಕೆಯ ಅಧಿಕಾರಿಗಳು ಸಮಸ್ಯೆ ಬಿಗಡಾಯಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ ಎಂದು ಮಾಂಸ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಅಲಿ ಹಸನ್ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X