Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೈಟೆಕ್ ಬಿಎಂಟಿಸಿ ಬಸ್ ನಿಲ್ದಾಣಕ್ಕೆ...

ಹೈಟೆಕ್ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ17 May 2019 10:10 PM IST
share

ಬೆಂಗಳೂರು, ಮೇ 17: ಇನ್ನು ಮುಂದೆ ನಗರದ ಬಿಎಂಟಿಸಿ ಬಸ್ ನಿಲ್ದಾಣಗಳು ಸ್ಮಾರ್ಟ್ ಆಗಲಿವೆ. ಎಲ್ಲಾ ಮೂಲಸೌಲಭ್ಯಗಳನ್ನು ಕಲ್ಪಿಸಲು ಬಿಬಿಎಂಪಿ ಮಹತ್ವದ ಯೋಜನೆಯೊಂದನ್ನು ಸಿದ್ಧಪಡಿಸಿದೆ.

ಸೈನ್ ಪೋಸ್ಟ್ ಎಂಬ ಸಂಸ್ಥೆಯೊಂದಿಗೆ ಬಿಬಿಎಂಪಿ ಈಗಾಗಲೇ ಒಪ್ಪಂದ ಮಾಡಿಕೊಂಡಿದೆ. ಇದರನ್ವಯ ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಎಲ್‌ಇಡಿ ಪರದೆಗಳು ಡಸ್ಟ್ ಬಿನ್‌ಗಳು ಇರಲಿವೆ. ಮೊದಲ ಹಂತದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ 12 ಬಸ್ ನಿಲ್ದಾಣಗಳಿಗೆ ಡಿಜಿಟಲ್ ರೂಪ ಕೊಡಲಾಗುವುದು. ಎಲ್‌ಇಡಿ ಪರದೆಗಳಲ್ಲಿ ಬಸ್ ಬರುವ ಸಮಯ, ಹೊರಡುವ ಸಮಯ ಹಾಗೂ ಪ್ರಯಾಣಿಕರಿಗೆ ಬೇಕಾದ ಮಾಹಿತಿಗಳು ಲಭ್ಯವಾಗಲಿವೆ.

ಈ ಹೈಟೆಕ್ ಬಸ್ ನಿಲ್ದಾಣಗಳಲ್ಲಿ ಸ್ಟೀಲ್ ಕಂಬಿಗಳನ್ನು ಅಳವಡಿಸಲಾಗುವುದು. ನಿಲ್ದಾಣದ ಸುತ್ತಲೂ ಸ್ಟೀಲ್ ಶೀಟುಗಳನ್ನು ಹೊದಿಸಲಾಗುವುದು. ಇದರಿಂದ ಬಸ್ ನಿಲ್ದಾಣ ಇನ್ನಷ್ಟು ಸ್ಮಾರ್ಟ್ ಆಗಲಿವೆ. ನಗರದಲ್ಲಿ ಈಗಿರುವ ಹಳೆಯ ಬಸ್ ನಿಲ್ದಾಣಗಳಿಗೆ ಹೊಸ ಸ್ಪರ್ಶ ಕೊಡಲಾಗುವುದು. ವಿಶೇಷ ಚೇತನರು ಈ ಬಸ್ ನಿಲ್ದಾಣಗಳಿಗೆ ಸುಲಭವಾಗಿ ಏರಲು ಅನುಕೂಲವಾಗುವಂತೆ ರ್ಯಾಂಪ್ ವ್ಯವಸ್ಥೆಯನ್ನು ಅಳವಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ ಬಸ್ ನಿಲ್ದಾಣ ವಿಧಾನಸೌಧದ ಮುಂಭಾಗ ಸದ್ಯದಲ್ಲೇ ತಲೆ ಎತ್ತಲಿದೆ. ಮತ್ತೆರೆಡು ಬಸ್ ನಿಲ್ದಾಣಗಳು ನಿರ್ಮಾಣವಾಗಲಿವೆ. ಇದರಿಂದ 'ವಿಧಾನಸೌಧದ ಮುಂಭಾಗ ಬಸ್ ನಿಲ್ದಾಣ ಇಲ್ಲ. ಬಿಸಿಲು, ಮಳೆ, ಗಾಳಿಗೆ ಮೈಯೊಡ್ಡಿ ನಿಲ್ಲಬೇಕಾಗಿತ್ತು' ಎಂಬ ಪ್ರಯಾಣಿಕರ ಆರೋಪಗಳು ಇನ್ನು ಮುಂದೆ ಕೇಳಿಬರುವುದಿಲ್ಲ. ಮೊದಲ ಹಂತದಲ್ಲಿ ಹೈಟೆಕ್ ಬಸ್ ನಿಲ್ದಾಣಗಳು ಯಶಸ್ವಿಗೊಂಡಲ್ಲಿ ನಗರದಲ್ಲಿ ಎಲ್ಲಾ ಬಿಎಂಟಿಸಿ ಬಸ್ ನಿಲ್ದಾಣಗಳು ಹೊಸ ರೂಪವನ್ನು ಪಡೆದುಕೊಳ್ಳಲಿವೆ.

ಎಲ್ಲೆಲ್ಲಿ ಹೈಟೆಕ್ ಬಸ್ ನಿಲ್ದಾಣಗಳು: ವಿಧಾನಸೌಧ, ವಿಠ್ಠಲ್ ಮಲ್ಯ ರಸ್ತೆ, ಚಾಲುಕ್ಯ ವೃತ್ತ, ರೆಸಿಡೆನ್ಸಿ ವೃತ್ತ, ಬೌರಿಂಗ್ ಕ್ಲಬ್ ನಿಲ್ದಾಣ, ಇಂದಿರಾನಗರ, ಕೋರಮಂಗಲ 1ನೇ ಬ್ಲಾಕ್, ಎಚ್‌ಎಸ್‌ಆರ್ ಲೇಔಟ್ ನಿಲ್ದಾಣ, ಕನ್ನಿಂಗ್ ಹ್ಯಾಮ್ ರಸ್ತೆ, ಮೌಂಟ್ ಕಾರ್ಮೆಲ್ ಕಾಲೇಜು ನಿಲ್ದಾಣ, ಕೆ.ಸಿ ಜನರಲ್ ಆಸ್ಪತ್ರೆ ನಿಲ್ದಾಣ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X